ಕಲ್ಲಡ್ಕ

ಜನವರಿ 6ರಂದು ಬರಿಮಾರು ಶ್ರೀ ಮಹಾಮ್ಮಾಯ ದೇವಸ್ಥಾನದಲ್ಲಿ ಶತಕಲಶಾಭಿಷೇಕ, ಸಹಸ್ರ ಹೂವಿನ ಪೂಜೆ, ಸಾನಿಧ್ಯ ಹವನ

ಜಾಹೀರಾತು

ಶ್ರೀ ಕ್ಷೇತ್ರ ಬರಿಮಾರು ಶ್ರೀ ಮಹಮ್ಮಾಯ ದೇವಸ್ಥಾನದಲ್ಲಿ ವರ್ಷಂಪ್ರತಿ ವಿಜೃಂಭಣೆಯಿಂದ ನಡೆಯುವ ಸಹಸ್ರ ಹೂವಿನ ಪೂಜೆ, ಸಹಸ್ರ ಕರ್ಪೂರಾರತಿ, ಶತಕಲಶಾಭಿಷೇಕ ಮತ್ತು ಸಾನಿಧ್ಯಹವನವನ್ನು ಶ್ರೀ ದೇವಿಯ ಸಾನಿಧ್ಯ ಅಭಿವೃದ್ದಿ ಹಾಗೂ ಎಲ್ಲರ ಶ್ರೇಯೋಭಿವೃದ್ಧಿಗಾಗಿ ಜನವರಿ 6ರಂದು ಶುಕ್ರವಾರ ವಿವಿಧ ಧಾರ್ಮಿಕ ಅನುಷ್ಠಾನಗಳೊಂದಿಗೆ ನಡೆಸಲಾಗುವುದು ಎಂದು ಅನುವಂಶಿಕ ಆಡಳಿತ ಮೊಕ್ತೇಸರರಾದ ಬಿ.ರಾಕೇಶ ಪ್ರಭು ಮತ್ತು ಪ್ರಧಾನ ತಂತ್ರಿಗಳಾದ ಪಂಡಿತ್ ಎಂ.ಕಾಶೀನಾಥ ಆಚಾರ್ಯ ತಿಳಿಸಿದ್ದಾರೆ.

ಬೆಳಗ್ಗೆ 8ಕ್ಕೆ ಪ್ರಾರ್ಥನೆ, 9.30ಕ್ಕೆ ಪಂಚಾಮೃತ ಅಭಿಷೇಕ, 10.30ಕ್ಕೆ ಮಹಾಭಿಷೇಕ, ಶತಕಲಶಾಭಿಷೇಕ, ಪುಳಕಾಭಿಷೇಕ, ಬ್ರಹ್ಮಕಲಶಾಭಿಷೇಕ, ಅಷ್ಟಮಂಗಲ, ನಿರೀಕ್ಷಣೆ, ಪ್ರಸನ್ನ ಪೂಜೆ, ಶ್ರೀದೇವರಿಗೆ ಪಟ್ಟ ಕಾಣಿಕೆ, ಮೂಲಮಂತ್ರ ಹವನ, ಸಾನಿಧ್ಯ ಹವನ ನಡೆಯಲಿದೆ. ಮಧ್ಯಾಹ್ನ 12ಕ್ಕೆ ಮಹಾಪೂಜೆ, ಸೇವಾದಾರರಿಗೆ ಪ್ರಸಾದ ಮತ್ತು ಸಮಾರಾಧನೆ ಇರಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ