ಬಂಟ್ವಾಳ

ಕಡೇಶಿವಾಲಯ ಗ್ರಾಮದಲ್ಲಿ 5.5 ಕೋಟಿ ರೂ ವೆಚ್ಚದ ಕಾಮಗಾರಿ ಉದ್ಘಾಟನೆ, ಶಿಲಾನ್ಯಾಸ: ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಕುರಿತು ಮುಖಂಡರ ವಿಶ್ವಾಸ

ಬಂಟ್ವಾಳ:ಕಡೇಶಿವಾಲಯ ಗ್ರಾಮದಲ್ಲಿ ಅನುಷ್ಠಾನಗೊಂಡಿರುವ ಸುಮಾರು ೫.೫೦ ಕೋ.ರೂ.ಗಳ ಅನುದಾನದ ಅಭಿವೃದ್ಧಿ ಕಾಮಗಾರಿಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿದರು.

ಜಾಹೀರಾತು

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಡೇಶಿವಾಲಯ ಸಹಿತ ಬಂಟ್ವಾಳ ಕ್ಷೇತ್ರದ ಎಲ್ಲ ಗ್ರಾಮಗಳ ಜನರ ಆಶೋತ್ತರ ಈಡೇರಿಕೆಗೆ ಶ್ರಮಿಸಿದ್ದೇನೆ. ಇಂದು ಬಿಜೆಪಿ ವಿಶ್ವದಲ್ಲೇ ಅತ್ಯಂತ ಬಲಿಷ್ಠ ರಾಜಕೀಯ ಪಕ್ಷವಾಗಿ ಗುರುತಿಸಿಕೊಂಡಿದ್ದು, ಜಗತ್ತು ಗಮನಿಸುವ ಅಭಿವೃದ್ಧಿ ಕಾರ್ಯಗಳನ್ನು ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರ ಮಾಡುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಬಿಜೆಪಿ ಸ್ಥಾಪನೆಗೆ ಕಾರಣವಾದ ಆಶಯಗಳನ್ನು ಈಡೇರಿಸಿವೆ. ಮುಂದಿನ ಚುನಾವಣೆಯಲ್ಲೂ ಬಿಜೆಪಿ ಗೆಲುವು ಸಾಧಿಸುವುದು ನಿಶ್ಚಿತ, ಬಂಟ್ವಾಳ ಕ್ಷೇತ್ರದಲ್ಲೂ ಜನತೆ ಪಕ್ಷದತ್ತ ವಿಶ್ವಾವಿಟ್ಟಿರುವುದು ಇದಕ್ಕೆ ಸಾಕ್ಷಿ ಎಂದರು. 

ಕಾರ್ಯಕ್ರಮದಲ್ಲಿ ಕಡೇಶ್ವಾಲ್ಯ ದೇವಸ್ಥಾನ ೯೦ ಲಕ್ಷ ರೂ.ಗಳ ತಡೆಗೋಡೆ ಕಾಮಗಾರಿ ವೀಕ್ಷಣೆ, ಆರಿಕಲ್ಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ತಡೆಗೋಡೆ ೫೦ ಲಕ್ಷ ರೂ, ಪೆರ್ಲಾಪು-ಕೊರತಿಗುರಿ-ಕುಡುಕುಮೇರು ರಸ್ತೆ-೧.೨೦ ಕೋ.ರೂ, ಶೇರಾ-ನೀರಕಜೆ ರಸ್ತೆ-೧೦ ಲಕ್ಷ ರೂ, ಮುಂಡಾಲ ಕಿರುಸೇತುವೆ-೧೦ ಲಕ್ಷ ರೂ, ಬಟ್ರಬೆಟ್ಟು-ಬೋರುಗುಡ್ಡೆ ರಸ್ತೆ ೩೦ ಲಕ್ಷ ರೂ, ಇರ್ಕ್ಲಾಜೆ-ಬೀರಕೋಡಿ ರಸ್ತೆ-೫ ಲಕ್ಷ ರೂ, ಪಡ್ಡಂಗೆ-ಕಾಡಬೆಟ್ಟು ರಸ್ತೆ-೧೦ ಲಕ್ಷ ರೂ, ಓಡಲು ರಸ್ತೆ-೧೮ ಲಕ್ಷ ರೂ, ಅಮೈ-ಹಿರ್ತಡ್ಕ ರಸ್ತೆ ೧೦ ಲಕ್ಷ ರೂ, ತಾರಿಗುರಿ ರಸ್ತೆ-೧೦ ಲಕ್ಷ ರೂ, ಗ್ರಾ.ಪಂ.ಅಮೃತ ಸೋಲಾರ್ ವ್ಯವಸ್ಥೆ-೮ ಲಕ್ಷ ರೂ, ಕೊರತಿಗುರಿ ಸಾರ್ವಜನಿಕ ಶೌಚಾಲಯ-೫ ಲಕ್ಷ ರೂ. ಹಾಗೂ ಎಲ್ಲಾಜೆ-ತಾರಿಗುರಿ ರಸ್ತೆ ೧೦ ಲಕ್ಷ ರೂ. ಉದ್ಘಾಟಿಸಲಾಯಿತು.

ನಡ್ಯೇಲು-ಮುನ್ನಿಮಾರು ರಸ್ತೆ-೧೦ ಲಕ್ಷ ರೂ, ಬೊಳ್ಳಾರು-ಭಂಡರಿಬೆಟ್ಟು ರಸ್ತೆ-೧೦ ಲಕ್ಷ ರೂ, ಮುಂಡಾಲ-ಪ್ರತಾಪನಗರ ರಸ್ತೆ ೧೦ ಲಕ್ಷ ರೂ, ಓಣಿಬಾಗಿಲು-ಬನಾರಿ ರಸ್ತೆ-೨೦ ಲಕ್ಷ ರೂ, ಕುರುಬ್ಲಾಜೆ-ಕೊರತಿಗುರಿ ರಸ್ತೆ ೧೦ ಲಕ್ಷ ರೂ, ಬೋರುಗುಡ್ಡೆ-ಗುಮ್ಮೊಡಿ ರಸ್ತೆ-೧೦ ಲಕ್ಷ ರೂ, ಕಲ್ಲಾಜೆಪಲ್ಕೆ-ಮುಂಡಾಲ ರಸ್ತೆ ೫ ಲಕ್ಷ ರೂ, ತಾರಿಗುರಿ-ದಾಳಿಂಬ ರಸ್ತೆ ೨೫ ಲಕ್ಷ ರೂ, ಗ್ರಾ.ಪಂ.ಅಮೃತ ಭವನ-೨೫ ಲಕ್ಷ ರೂ, ಮುಚ್ಚಿಲ-ನೇಜಿನಡ್ಕ ರಸ್ತೆ-೧೦ ಲಕ್ಷ ರೂ, ಮುಚ್ಚಿಲ-ಕಾಡಬೆಟ್ಟು ರಸ್ತೆ ೧೮ ಲಕ್ಷ ರೂ. ಶಿಲಾನ್ಯಾಸ ನೆರವೇರಿಸಲಾಯಿತು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕಡೇಶ್ವಾಲ್ಯ ಗ್ರಾ.ಪಂ.ಅಧ್ಯಕ್ಷ ಸುರೇಶ್ ಬನಾರಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬಂಟ್ವಾಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಬಾಳ್ತಿಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೋಹನ್ ಪಿ.ಎಸ್., ಕಡೇಶ್ವಾಲ್ಯ ಸಿಎ ಬ್ಯಾಂಕ್ ಅಧ್ಯಕ್ಷ ವಿದ್ಯಾಧರ್ ರೈ ಪೆರ್ಲಾಪು, ಕಡೇಶ್ವಾಲ್ಯ ಶಕ್ತಿಕೇಂದ್ರದ ಅಧ್ಯಕ್ಷ ನಾರಾಯಣ ಸಪಲ್ಯ, ಗ್ರಾ.ಪಂ.ಉಪಾಧ್ಯಕ್ಷೆ ಜಯಾ ಆರ್.ದೇವಾಡಿಗ, ಕಡೇಶ್ವಾಲ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸಾಂತಪ್ಪ ಪೂಜಾರಿ, ಬೂತ್ ಸಮಿತಿಯ ಅಧ್ಯಕ್ಷರುಗಳು, ಗ್ರಾ.ಪಂ.ಸದಸ್ಯರು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts