ಜನಾಂದೋಲನಗಳ ಮಹಾಮೈತ್ರಿ ಸಂಯುಕ್ತ ಹೋರಾಟ: ಬಿ.ಸಿ.ರೋಡಿಗೆ ಜ.7ರಂದು ಭಾವೈಕ್ಯತಾ ಜಾಥ

ಜನಾಂದೋಲನಗಳ ಮಹಾಮೈತ್ರಿ ನೇತೃತ್ವದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಹಕಾರದೊಂದಿಗೆ ಮಂಗಳೂರಿನಿಂದ ಬೆಂಗಳೂರಿಗೆ ಜನವರಿ 6ರಿಂದ 11ರವರೆಗೆ ಭಾವೈಕ್ಯತಾ ಜಾಥ ನಡೆಯಲಿದೆ. ಈ ವಿಚಾರವನ್ನು ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ರೈತ, ಕಾರ್ಮಿಕ, ದಲಿತ ಮುಖಂಡರು ಮಾಹಿತಿ ನೀಡಿದರು. ಪ್ರಮುಖರಾದ ಪ್ರೇಮನಾಥ ಶೆಟ್ಟಿ ಬಾಳ್ತಿಲ, ರಾಮಣ್ಣ ವಿಟ್ಲ, ಸೇಸಪ್ಪ ಬೆದ್ರಕಾಡು ಮತ್ತು ಸದಾನಂದ ಶೀತಲ್ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯ ವಿವರ ಇಲ್ಲಿದೆ.

ಜಾಹೀರಾತು

ಜನಾಂದೋಲನಗಳ ಮಹಾಮೈತ್ರಿ ನೇತೃತ್ವದಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ಸಹಕಾರದೊಂದಿಗೆ ಶೋಷಿತರ ಅರಿವಿನ ಗುರು ಕುದ್ಮುಲ್ ರಂಗರಾವ್ ಸ್ಮರಣೆಯಲ್ಲಿ ಭಾವೈಕ್ಯತಾ ಜಾಥ ಮಂಗಳೂರಿನಿಂದ ಬೆಂಗಳೂರಿನವರೆಗೆ ಜನವರಿ 6ರಿಂದ 11ರವರೆಗೆ ನಡೆಯಲಿದ್ದು, ಮಂಗಳೂರು ಬಾವುಟಗುಡ್ಡೆಯಲ್ಲಿ ಜ.6ರಂದು ಬೆಳಗ್ಗೆ 10 ಗಂಟೆಗೆ ರೈತ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಪುತ್ಥಳಿಯ ಬಳಿ ಉದ್ಘಾಟನೆ ನಡೆಯಲಿದೆ. 7ರಂದು ಬಿ.ಸಿ.ರೋಡ್ ಗೆ ಆಗಮಿಸಲಿದೆ ಎಂದು ರಾಜ್ಯ ರೈತ ಸಂಘದ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮನಾಥ ಶೆಟ್ಟಿ ಬಾಳ್ತಿಲ ಹೇಳಿದ್ದಾರೆ.

ಜಾಹೀರಾತು

ಬೆಂಗಳೂರಿನಲ್ಲಿ ಜ.11ರಂದು ಜಾಥಾಗಳ ಸಮಾಗಮ ನಡೆಯಲಿದ್ದು, ಫ್ರೀಡಂ ಪಾರ್ಕ್ ನಲ್ಲಿ ಸತ್ಯಾಗ್ರಹ ಸಮಾವೇಶ ನಡೆಯುವುದು. ರೈತ ಕೂಲಿಕಾರ ಕೇಂದ್ರಿತ ಪ್ರಧಾನ ಜಾಥಾ ಕೂಡಲಸಂಗಮದಿಂದ, ಭಾವೈಕ್ಯತಾ ಜಾಥ ಮಂಗಳೂರಿನಿಂದ, ಸಾಮೂಹಿಕ ಭೂಮಿ ಸಂರಕ್ಷಣಾ ಕೇಂದ್ರಿತ ಜಾಥಾ ಕುಸನೂರಿನಿಂದ ಹಾಗೂ ಸಂವಿಧಾನ ರಕ್ಷಣೆ ಕೇಂದ್ರಿತ ಜಾಥಾ ಕೋಲಾರದಿಂದ ಆರಂಭಗೊಳ್ಳಲಿದ್ದು, ಅವು ಬೆಂಗಳೂರಿನಲ್ಲಿ ಸಮಾಗಮ ಹೊಂದಲಿದೆ ಎಂದರು.

ಇದೇ ವೇಳೆ ಗೃಹಸಚಿವ ಆರಗ ಜ್ಞಾನೇಂದ್ರ ನೀಡಿರುವ ಅಡಕೆ ಬೆಳೆ ಕುರಿತ ಹೇಳಿಕೆಯನ್ನು ಖಂಡಿಸಿದ ಶೆಟ್ಟಿ, ಇದರ ಬದಲು ಭೂತಾನ್ ನಿಂದ ಆಮದು ನಿಲ್ಲಿಸಲಿ ಎಂದು ಒತ್ತಾಯಿಸಿದರು. ವಿವಿಧ ಮುಖಂಡರಾದ ರಾಮಣ್ಣ ವಿಟ್ಲ, ಬಿ.ಕೆ.ಸೇಸಪ್ಪ ಬೆದ್ರಕಾಡು, ಸದಾನಂದ ಶೀತಲ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಜನಾಂದೋಲನಗಳ ಮಹಾಮೈತ್ರಿ ಸಂಯುಕ್ತ ಹೋರಾಟ: ಬಿ.ಸಿ.ರೋಡಿಗೆ ಜ.7ರಂದು ಭಾವೈಕ್ಯತಾ ಜಾಥ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*