ಒಡಿಯೂರಿನಲ್ಲಿ ’ತುಳು ಜಾನಪದ ನಲಿಕೆ-ತೆಲಿಕೆ ಪಂತೊ’

ಒಡಿಯೂರು: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‌ನಲ್ಲಿ ಜನವರಿ ತಿಂಗಳ 30, ಸೋಮವಾರ ಮತ್ತು 31, ಮಂಗಳವಾರ ’ಶ್ರೀ ಒಡಿಯೂರು ರಥೋತ್ಸವ-ತುಳುನಾಡ ಜಾತ್ರೆ – 23ನೇ ತುಳು ಸಾಹಿತ್ಯ ಸಮ್ಮೇಳನ’ ಜರಗಲಿರುವುದು. ಅದರ ಅಂಗವಾಗಿ ತುಳುನಾಡಿನ ಸಾಂಸ್ಕೃತಿಕ, ಕಲಾ, ನೃತ್ಯತಂಡಗಳಿಗೆ ’ತುಳು ಜಾನಪದ ನಲಿಕೆ-ತೆಲಿಕೆ ಪಂತೊ’ವನ್ನು ಜನವರಿ 30ರಂದು ಸೋಮವಾರ ಮಧ್ಯಾಹ್ನ 1.30ರಿಂದ ಸಂಜೆ 5.30ರ ವರೆಗೆ ಏರ್ಪಡಿಸಲಾಗಿದೆ. ಎಲ್ಲ ವಯಸ್ಸಿನ ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದಾಗಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ಜಾಹೀರಾತು

ತಂಡದ ಹೆಸರು, ಪೂರ್ಣ ವಿಳಾಸ, ನೃತ್ಯದ ವಿವರ, ಕಲಾವಿದರ ಸಂಖ್ಯೆ ಮುಂತಾದ ವಿವರಗಳಿರುವ ಅರ್ಜಿಯನ್ನು ಕೆಳಗೆ ನೀಡಿರುವ ವಿಳಾಸಕ್ಕೆ ಜನವರಿ 14ಕ್ಕೆ ಮುನ್ನ ತಲಪುವಂತೆ ಕಳಿಸಿಕೊಡಬೇಕು. ವಿಜೇತ ತಂಡಗಳಿಗೆ ಪ್ರಶಸ್ತಿಪತ್ರದೊಂದಿಗೆ ನಗದು ಪ್ರಥಮ 20 ಸಾವಿರ ರೂ, ದ್ವಿತೀಯ 15 ಸಾವಿರ ರೂ ಮತ್ತು  ತೃತೀಯ 10 ಸಾವಿರ ರೂ ಇರಲಿದೆ. ಬಹುಮಾನಗಳನ್ನು ಅದೇ ದಿನ ಸಂಜೆಯ ಸಮಾರಂಭದಲ್ಲಿ ನೀಡಲಾಗುವುದು.

ನಿಬಂಧನೆಗಳು: ತುಳು ಜಾನಪದ ಸಾಂಪ್ರದಾಯಿಕ ನಲಿಕೆ ಕಡ್ಡಾಯ, ತುಳು ಬಾಸೆ-ಸಂಸ್ಕೃತಿದ ಪೊರ್‍ಲು ತಿರ್‍ಲ್ದ ಪ್ರಸ್ತುತಿಗೆ ಅವಕಾಶ., ಪ್ರದರ್ಶನದ ಅವಧಿ 20 ನಿಮಿಷ., ಜಾನಪದ ವಾದ್ಯ ಪರಿಕರಗಳನ್ನೇ ಬಳಸಬೇಕು., ಧ್ವನಿಮುದ್ರಿಕೆ ಬಳಸುವಂತಿಲ್ಲ., ಗುತ್ತಿನ ಮನೆಯ ಅಂಗಳದಲ್ಲಿ ಪ್ರಸ್ತುತಪಡಿಸುವಂತೆ ಪ್ರದರ್ಶನ ನೀಡಬೇಕು., ತಂಡದಲ್ಲಿ ಕನಿಷ್ಠ 10 ಮಂದಿ ಇರಬೇಕು., ಜಾತಿ, ಧರ್ಮ, ದೈವ ನಿಂದನೆಗೆ ಅವಕಾಶವಿಲ್ಲ., ಆಯ್ಕೆಯಾದ ತಂಡಗಳಿಗೆ ಮಾತ್ರ ಸ್ಪರ್ಧೆಗೆ ಅವಕಾಶ. ಸ್ಪರ್ಧೆಯ ವಿಚಾರದಲ್ಲಿ ಸಂಘಟಕರ ನಿರ್ಣಯವು ಅಂತಿಮವಾಗಿರುತ್ತದೆ.

ವಿಳಾಸ: ಸಂಯೋಜಕರು, ’ತುಳು ಜಾನಪದ ನಲಿಕೆ-ತೆಲಿಕೆ ಪಂತೊ’ ತುಳು ಸಾಹಿತ್ಯ ಸಮ್ಮೇಳನ ಸಮಿತಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್, ಅಂಚೆ: ಒಡಿಯೂರು-574243 ಮೊಬೈಲ್: 948076799 ಮತ್ತು 9448123061

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಒಡಿಯೂರಿನಲ್ಲಿ ’ತುಳು ಜಾನಪದ ನಲಿಕೆ-ತೆಲಿಕೆ ಪಂತೊ’"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*