ಬಂಟ್ವಾಳ

ಬೋಳಂಗಡಿ ಸರಕಾರಿ ಶಾಲಾ ವಠಾರದಲ್ಲಿ ‘ಅಮ್ಮ ಚೇತೋಹಾರ’ ವಿಶೇಷ ಕಾರ್ಯಕ್ರಮ

ಜಾಹೀರಾತು

ಬಂಟ್ವಾಳ: ಅಮ್ಮ ಚೇತೋಹಾರ ಎನ್ನುವ ವಿಶೇಷ ಕಾರ್ಯಕ್ರಮ ಬೋಳಂಗಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಡೆಯಿತು.

ಜಾಹೀರಾತು

ಎಂ.ಎನ್.ಕುಮಾರ್ ಮೆಲ್ಕಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ನಗರ ಪೊಲೀಸ್ ಠಾಣೆಯ ಎಎಸೈ ಜಿನ್ನಪ್ಪ ಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಸುರೇಖ ಯಳವಾರ, ಪ್ರಕಾಶ್ ಎಂ., ಜನಾರ್ದನ ಕುಲಾಲ್ ಬೊಂಡಾಲ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಬೊಂಡಾಲ ಶಾಲೆಯಲ್ಲಿ ಕೈಗೊಂಡ ಅಭಿವೃದ್ಧಿ ಚಟುವಟಿಕೆಗಳಿಗಾಗಿ ಶಿಕ್ಷಕಿ ರೇಖಾ ಸಿ. ಎಚ್. ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ವಿಶೇಷ ಚೇತನ ಮಕ್ಕಳಿಗೆ ಸಹಾಯಧನ ಹಾಗೂ ಫಲಾನುಭವಿಗಳಿಗೆ ಗಾಲಿ ಕುರ್ಚಿಯನ್ನು ವಿತರಿಸಲಾಯಿತು.

ಪುರಸಭೆ ಮಾಜಿ ಸದಸ್ಯೆ ವಸಂತಿ ಗಂಗಾಧರ ಸ್ವಾಗತಿಸಿ, ಎಂ.ಎಚ್. ಮುಸ್ತಾಪ ಪ್ರಾಸ್ತವಿಕ ಮಾತುಗಳನ್ನಾಡಿದರು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಸಲೀಂ ಬೋಳಂಗಡಿ ವಂದಿಸಿದರು. ಮನೋಜ್ ವಾಮಂಜೂರು ಕಾರ್ಯಕ್ರಮ ನಿರೂಪಿಸಿದರು. ಅಮ್ಮಾ ಸ್ವೀಟ್ಸ್ ಸೇವಾ ಟ್ರಸ್ಟ್ ಸಂಸ್ಥೆಯ ಜನಾರ್ದನ ಅವರು ತನ್ನ ಸಹಪಾಠಿಗಳೊಂದಿಗೆ ತನ್ನ ದುಡಿಮೆಯ ಲಾಭದ ಒಂದಂಶ ಹಣವನ್ನು ಉಳಿತಾಯ ಮಾಡಿ ಸಂಗ್ರಹವಾದ ಒಟ್ಟು ಮೊತ್ತವನ್ನು ಸಮಾಜದ ಅಶಕ್ತರಿಗೆ ಹಾಗೂ ವಿಶೇಷ ಚೇತನ ಬಡಮಕ್ಕಳಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ೧೪ ವರ್ಷದಿಂದ ನಡೆಸಿಕೊಂಡು ಬರುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ