ಬಂಟ್ವಾಳ ಬಿಜೆಪಿಯಿಂದ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಜ. 14-26: ಗ್ರಾಮ ವಿಕಾಸ ಯಾತ್ರೆ, ಗ್ರಾಮದೆಡೆಗೆ ಶಾಸಕರ ನಡಿಗೆ ಪಾದಯಾತ್ರೆ

ಬಂಟ್ವಾಳ: ಬಂಟ್ವಾಳ ಬಿಜೆಪಿ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ನೇತೃತ್ವದಲ್ಲಿ ಜ. 14ರಿಂದ 26ರ ವರೆಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಾದ್ಯಂತ ನಡೆಯಲಿರುವ ಗ್ರಾಮ ವಿಕಾಸ ಯಾತ್ರೆ, ಗ್ರಾಮದೆಡೆಗೆ ಶಾಸಕರ ನಡಿಗೆ ಪಾದಯಾತ್ರೆಯ ಸಮಾಲೋಚನಾ ಸಭೆ ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆಯಿತು.

ಜಾಹೀರಾತು

ಸಭೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಮಾತನಾಡಿ, ಬಂಟ್ವಾಳ ಕ್ಷೇತ್ರದಲ್ಲಿ ನಡೆಯುವ 3ನೇ ಪಾದಯಾತ್ರೆ ಇದಾಗಿದ್ದು, ಈ ಹಿಂದೆ ಶಾಸಕನಾಗುವ ಮೊದಲು 2 ಪಾದಯಾತ್ರೆಗಳನ್ನು ನಡೆಸಿ ಕ್ಷೇತ್ರದ ಪ್ರತಿ ಗ್ರಾಮಗಳ ಜನತೆಯ ನಾಡಿಮಿಡಿತವನ್ನು ಅರಿತು ಅದಕ್ಕೆ ಪೂರಕವಾಗಿ ಕಳೆದ ನಾಲ್ಕೂವರೆ ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಲಾಗಿದೆ. ಈ ಬಾರಿ 13 ದಿನಗಳ ಪಾದಯಾತ್ರೆ ನಡೆಸಲಿದ್ದು, ಮುಖ್ಯವಾಗಿ ಪ್ರತಿದಿನ ಕ್ಷೇತ್ರದ ಒಂದು ದೇವಸ್ಥಾನದಿಂದ ಮತ್ತೊಂದು ದೇವಸ್ಥಾನವನ್ನು ಸಂಪರ್ಕಿಸಲಿದ್ದು, ಪ್ರತಿದಿನ ಸಂಜೆ ಸಮಾರೋಪ ಕಾರ್ಯಕ್ರಮ ನಡೆಸಲಿದ್ದೇವೆ. ಜ. 14ರಂದು ಮಧ್ಯಾಹ್ನ ೨ಕ್ಕೆ ಪೊಳಲಿ ದೇವಸ್ಥಾನದಿಂದ ಪಾದಯಾತ್ರೆ ಆರಂಭಗೊಂಡು, ಜ. 26ರಂದು ಬಿ.ಸಿ.ರೋಡಿನಲ್ಲಿ ಸಮಾರೋಪ ನಡೆಯಲಿದ್ದು, ಉಳಿದಂತೆ ಪ್ರತಿದಿನ ಬೆಳಗ್ಗೆ 8ಕ್ಕೆ ಪಾದಯಾತ್ರೆ ಆರಂಭಗೊಳ್ಳಲಿದೆ. ಈ ಯಾತ್ರೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮ ಚರ್ಚೆ, ಕಾರ್ಯಕರ್ತರು, ಗ್ರಾಮೀಣ ಜನತೆಯ ಜತೆ ಸಮಾಲೋಚನೆ ನಡೆಸಲಿದ್ದೇವೆ. ದೈನಂದಿನ ಸಮಾರೋಪ ಸಮಾರಂಭಗಳಲ್ಲಿ ರಾಜ್ಯ, ಜಿಲ್ಲಾ ಮಟ್ಟದ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು.

ಸಭೆಯಲ್ಲಿ ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬೂಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ ಕರ್ಕಳ ಉಪಸ್ಥಿತರಿದ್ದರು.

ಜಾಹೀರಾತು

ಪಾದಯಾತ್ರೆ ಸಾಗುವ ಹಾದಿ: ಜ. ೧೪ರಂದು ಮಧ್ಯಾಹ್ನ ೨ಕ್ಕೆ ಪೊಳಲಿ ಕ್ಷೇತ್ರದಿಂದ ತೆಂಕಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನಕ್ಕೆ ಕರಿಯಂಗಳ, ತೆಂಕಬೆಳ್ಳೂರು ಗ್ರಾಮಗಳ ಮೂಲಕ ಪಾದಯಾತ್ರೆ ಸಾಗಲಿದೆ. ಜ. ೧೫ರಂದು ನಂದಾವರ ಕ್ಷೇತ್ರದಿಂದ ವಿಟ್ಲಪಡ್ನೂರು ಕಾಪುಮಜಲು ಶ್ರೀ ಮಲರಾಯ ದೈವಸ್ಥಾನಕ್ಕೆ ಸಜೀಪಮುನ್ನೂರು, ಸಜೀಪಮೂಡ, ಮಂಚಿ, ಸಾಲೆತ್ತೂರು, ಕೊಳ್ನಾಡು, ವಿಟ್ಲಪಡ್ನೂರು ಗ್ರಾಮಗಳು, ಜ. ೧೬ರಂದು ವಗೆನಾಡು ಶ್ರೀ ಸುಬ್ರಾಯ ದೇವಸ್ಥಾನದಿಂದ ಕರೋಪಾಡಿ ಮಿತ್ತನಡ್ಕ ಶ್ರೀ ಮಲರಾಯ ಪಿಲಿಚಾಮುಂಡಿ ದೈವಸ್ಥಾನಕ್ಕೆ ಕನ್ಯಾನ, ಕರೋಪಾಡಿ ಗ್ರಾಮಗಳ ಮೂಲಕ ಸಾಗಲಿದೆ.

ಜ. ೧೭ರಂದು ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದಿಂದ ಪೆರಾಜೆ ಸಾದಿಕುಕ್ಕು ಶ್ರೀ ಗುಡ್ಡೆ ಚಾಮುಂಡಿ ದೈವಸ್ಥಾನಕ್ಕೆ ವೀರಕಂಭ, ಅನಂತಾಡಿ, ನೆಟ್ಲಮುಡ್ನೂರು, ಮಾಣಿ, ಪೆರಾಜೆ, ಜ. ೧೮ರಂದು ಕಡೇಶ್ವಾಲ್ಯ ದೇವಸ್ಥಾನದಿಂದ ಕಲ್ಲಡ್ಕ ಶ್ರೀರಾಮ ಮಂದಿರಕ್ಕೆ ಕಡೇಶ್ವಾಲ್ಯ, ಬರಿಮಾರು, ಗೋಳ್ತಮಜಲು ಗ್ರಾಮಗಳು, ಜ. ೧೯ರಂದು ಅಮ್ಟೂರು ಕೇಶವನಗರ ಶ್ರೀ ಶಾರದಾ ಮಂದಿರದಿಂದ ನೀರಪಾದೆ ಶ್ರೀ ಕುಂದಾಯ ರಕ್ತೇಶ್ವರೀ ಮಹಮ್ಮಾಯಿ ದೇವಸ್ಥಾನಕ್ಕೆ ಅಮ್ಟೂರು, ಪಾಣೆಮಂಗಳೂರು, ನರಿಕೊಂಬು, ಶಂಭೂರು, ಬಾಳ್ತಿಲ ಗ್ರಾಮಗಳು, ಜ. ೨೦ರಂದು ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಿಂದ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನಕ್ಕೆ ಬಂಟ್ವಾಳ ಕಸ್ಬಾ, ನಾವೂರು, ದೇವಶ್ಯಪಡೂರು, ದೇವಶ್ಯಮೂಡೂರು, ಸರಪಾಡಿ ಗ್ರಾಮಗಳಿಗೆ ಸಾಗಲಿದೆ.

ಜಾಹೀರಾತು

ಜ. ೨೧ರಂದು ಇಳಿಯೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಿಂದ ಪಾಂಡವರಕಲ್ಲು ಶ್ರೀ ಬ್ರಹ್ಮಬೈದರ್ಕಳ ಗರಡಿಗೆ ಮಣಿನಾಲ್ಕೂರು, ಉಳಿ, ತೆಂಕಕಜೆಕಾರು ಗ್ರಾಮಗಳು, ಜ. ೨೨ರಂದು ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಿಂದ ಸಿದ್ದಕಟ್ಟೆ ಶ್ರೀ ನಾರಾಯಣ ಗುರು ಮಂದಿರಕ್ಕೆ ಪಿಲಾತಬೆಟ್ಟು, ಇರ್ವತ್ತೂರು, ಮೂಡುಪಡುಕೋಡಿ, ಕೊಡಂಬೆಟ್ಟು, ಪಿಲಿಮೊಗರು, ಅಜ್ಜಿಬೆಟ್ಟು, ಚೆನ್ನೈತ್ತೋಡಿ, ಕುಕ್ಕಿಪಾಡಿ, ಎಲಿಯನಡುಗೋಡು, ಸಂಗಬೆಟ್ಟು ಗ್ರಾಮಗಳು, ಜ. ೨೩ರಂದು ಕಾರಿಂಜ ಕ್ಷೇತ್ರದಿಂದ ರಾಯಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಕಾವಳಮೂಡೂರು, ಕಾವಳಪಡೂರು, ಕಾಡಬೆಟ್ಟು, ಮೂಡನಡುಗೋಡು, ಬುಡೋಳಿ, ಪಂಜಿಕಲ್ಲು, ಕೊಯಿಲ, ರಾಯಿ ಗ್ರಾಮಗಳು, ಜ. ೨೪ರಂದು ಕರ್ಪೆ ಶ್ರೀ ಕುಪ್ಪೆಟ್ಟು ಬರ್ಕೆ ಪಂಜುರ್ಲಿ ಮೂಲಸ್ಥಾನದಿಂದ ಕುರಿಯಾಳ ದುರ್ಗಾನಗರ ಶ್ರೀ ಓಂಕಾರೇಶ್ವರೀ ಭಜನಾ ಮಂದಿರಕ್ಕೆ ಕರ್ಪೆ, ಅರಳ, ಬಡಗಬೆಳ್ಳೂರು, ಕುರಿಯಾಳ ಗ್ರಾಮಗಳು, ಜ. ೨೫ರಂದು ಮಂಗ್ಲಿಮಾರ್ ದೈವಸ್ಥಾನದಿಂದ ದೇವಂಬೆಟ್ಟು ದೇವಸ್ಥಾನಕ್ಕೆ ಅಮ್ಟಾಡಿ, ಅಮ್ಮುಂಜೆ, ಕಳ್ಳಿಗೆ ಗ್ರಾಮಗಳಿಗೆ ಸಾಗಲಿದೆ. ಜ. ೨೬ರಂದು ಮಧ್ಯಾಹ್ನ ೨ಕ್ಕೆ ಬಿ.ಸಿ.ರೋಡಿನ ಕೈಕಂಬದಿಂದ ಹೊರಟು ಬಿ.ಸಿ.ರೋಡಿನಲ್ಲಿ ಸಮಾರೋಪ ನೆರವೇರಲಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ಬಿಜೆಪಿಯಿಂದ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಜ. 14-26: ಗ್ರಾಮ ವಿಕಾಸ ಯಾತ್ರೆ, ಗ್ರಾಮದೆಡೆಗೆ ಶಾಸಕರ ನಡಿಗೆ ಪಾದಯಾತ್ರೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*