ಬಂಟರ ಸಂಘ ವಾಮದಪದವು ವಲಯ-ಪದವು ಬಂಟರ ಭವನಕ್ಕೆ ಶಿಲಾನ್ಯಾಸ

ಜಾಹೀರಾತು

ಬಂಟ್ಚಾಳ: ತಾಲೂಕಿನ ವಾಮದಪದವು ವಲಯ ಬಂಟರ ಸಂಘದ ವತಿಯಿಂದ ಆಲದಪದವಿನ ನಿವೇಶನದಲ್ಲಿ ನಿರ್ಮಿಸಲು ಉದ್ಧೇಶಿಸಿರುವ 2ಕೋಟಿ ರೂಪಾಯಿ ಅಂದಾಜು ವೆಚ್ಚದ “ಪದವು ಬಂಟರ ಭವನ” ದ ಶಿಲಾನ್ಯಾಸ ಸಮಾರಂಭವು ಗುರುವಾರ ನಡೆಯಿತು.

 ಮುಂಬೈ ಹೇರಂಬ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಕುಳೂರು ಕನ್ಯಾನ ಸದಾಶಿವ ಶೆಟ್ಟಿ ಶಿಲಾನ್ಯಾಸ ನೆರವೇರಿಸಿ ಮಾತನಾಡಿ ಬಂಟ ಸಮುದಾಯವು ಇತ್ತೀಚೆಗೆ ಜಾಗೃತಗೊಳ್ಳುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಬಂಟರ ಭವನ ನಿರ್ಮಾಣದೊಂದಿಗೆ ಮುಂದಿನ ದಿನಗಳಲ್ಲಿ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಗಳನ್ನು ಸ್ಥಾಪಿಸುವಲ್ಲಿಯೂ ಬಂಟರ ಸಂಘವು ವಿಶೇಷ ಆಧ್ಯತೆ ನೀಡಬೇಕಾಗಿದೆ ಎಂದರು. ಒಡಿಯೂರು ಶ್ರೀಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ ಸೇವೆಯ ಮೂಲಕ ಬದುಕಿನ ಸಾರ್ಥಕತೆಯನ್ನು ಕಾಣುವಲ್ಲಿ ಬಂಟ ಸಮುದಾಯವು ಮುಂಚೂಣಿಯಲ್ಲಿದೆ. ನಾಯಕತ್ವ, ಕ್ರಿಯಾಶೀಲತೆ, ಸಂಘಟನೆ, ದಾನಶೀಲತೆಗೆ ಮತ್ತೊಂದು ಹೆಸರೇ ಬಂಟ ಸಮುದಾಯ. ಇದನ್ನು ಉಳಿಸಿ ಬೆಳೆಸುವಲ್ಲಿ ಬಂಟ ಸಮುದಾಯ ವಿಶೇಷ ಮುತುವರ್ಜಿ ವಹಿಸಬೇಕಾಗಿದೆ ಎಂದರು.            

         

ಕೊಂಡೆವೂರು ಶ್ರೀಯೋಗಾನಂದ ಸರಸ್ವತೀ ಸ್ವಾಮೀಜಿ ಆಶೀರ್ವಚನ ನೀಡಿ ನಾವು ಸಮಾಜಕ್ಕೆ ದೊಡ್ಡದಾದ ಕೊಡುಗೆ ನೀಡುವ ಮೂಲಕ ದೊಡ್ಡವರಾಗಬೇಕು. ಬಂಟ ಸಮಾಜ ಎಲ್ಲಾ ಕ್ಷೇತ್ರಗಳಿಗೂ ದೊಡ್ಡದಾದ ಕೊಡುಗೆ ನೀಡಿದೆ. ಈ ಸಮಾಜ ದೇಶಕ್ಕೆ ದೊಡ್ಡದಾದ ಕೊಡುಗೆ ನೀಡುವ ಸಮಾಜವಾಗಿ ಬೆಳೆಯಬೇಕಾಗಿದೆ ಎಂದರು.        ಬೆಂಗಳೂರಿನ ಎಂ.ಆರ್.ಜಿ.ಗ್ರೂಪ್ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಬಂಜಾರ ದೀಪ ಪ್ರಜ್ವಲಿಸಿ ಮಾತನಾಡಿ ಬಂಟನೆನ್ನುವುದು ನಮಗೆ ಹೆಮ್ಮೆಯಾಗಬೇಕು. ನಾವು ಸನ್ಮಾರ್ಗದಲ್ಲಿ ಸಂಪಾದಿಸಿ ಅದರ ಒಂದಷ್ಟನ್ನು ಸಮಾಜದ ಏಳಿಗೆಗಾಗಿ ನೀಡಬೇಕು, ಆರ್ಥಿಕ ಹಿಂದುಳಿದವರ ಏಳಿಗೆಗಾಗಿ ನಾವು ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದರು. ವಾಮದಪದವು ವಲಯ ಬಂಟರ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ ಅಧ್ಯಕ್ಷತೆ ವಹಿಸಿದ್ದರು.       

ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ, ಮಾಜಿ ಸಚಿವ ಬಿ. ರಮಾನಾಥ ರೈ, ಬಂಟರ ಸಂಘ ಬಂಟ್ವಾಳದ ಅಧ್ಯಕ್ಷ ಚಂದ್ರಹಾಸ ಡಿ.ಶೆಟ್ಟಿ, ವಾಮದಪದವು ವಲಯ ಬಂಟರ ಸಂಘದ ಗೌರವಾಧ್ಯಕ್ಷ ಅಮ್ಮು ರೈ ಹರ್ಕಾಡಿ, ಉದ್ಯಮಿಗಳಾದ ಶಶಿಧರ ಶೆಟ್ಟಿ ಬರೋಡಾ, ರಾಜೇಂದ್ರ ಶೆಟ್ಟಿ ಹುಬ್ಬಳ್ಳಿ, ಉಪೇಂದ್ರ ಶೆಟ್ಟಿ ಬೆಂಗಳೂರು, ವಿಶ್ವನಾಥ ಶೆಟ್ಟಿ ಕರ್ನಿರೆ, ಶಶಿಧರ ನಾಯ್ಕ ಗೋವಾ, ರಮೇಶ ಶೆಟ್ಟಿ ಗೋವಾ, ಸುಚರಿತ ಶೆಟ್ಟಿ, ಜಗನ್ನಾಥ ಚೌಟ ಬದಿಗುಡ್ಡೆ, ಜಯರಾಮ ಶೆಟ್ಟಿ ಬೆಳ್ತಂಗಡಿ, ಶ್ರೀಧರ ಶೆಟ್ಟಿ ಮೇಗಿನಗುತ್ತು, ಸುಧಾಕರ ಪೂಂಜ ಸುರತ್ಕಲ್, ಪ್ರವೀಣ್ ಶೆಟ್ಟಿ ಮುಂಬೈ, ಜಗನ್ನಾಥ ಶೆಟ್ಟಿ ಮುಂಬೈ, ಭಾರತಿ ರಾಜೇಂದ್ರ, ರಮಾ ಎಸ್.ಭಂಡಾರಿ, ಶಾಲಿನಿ ಶ್ರೀಧರ್ ಶೆಟ್ಟಿ, ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ನಿಶಾಂತ್ ಆಳ್ವ, ಜಯಪ್ರಕಾಶ್ ಶೆಟ್ಟಿ ಬುಳೇರಿ, ಚೇತನಾ ರಾಮಚಂದ್ರ ಶೆಟ್ಟಿ, ಪ್ರಜ್ವಲ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ವಾಮದಪದವು ವಲಯ ಬಂಟರ ಸಂಘದ ಗೌರವ ಸಲಹೆಗಾರ ಅಶೋಕ ಪಕ್ಕಳ ಶ್ರೀಸನ್ನಿಧಿಗುತ್ತು ಸ್ವಾಗತಿಸಿದರು.  ಕಿಶೋರ್ ಕುಮಾರ್ ಭಂಡಾರಿ ಬೆಳ್ಳೂರು ಕಾರ್ಯಕ್ರಮ ನಿರೂಪಿಸಿದರು. ರಮೇಶ  ಶೆಟ್ಟಿ ವಾಮದಪದವು ವಂದಿಸಿದರು.ಶಿಲಾನ್ಯಾಸಕ್ಕೆ ಮುನ್ನ ಭರತನಾಟ್ಯ ಕಾರ್ಯಕ್ರಮ,  ಸಭಾ ಕಾರ್ಯಕ್ರಮದ ಬಳಿಕ ಯಕ್ಷಧ್ರುವ ಸತೀಶ್ ಶೆಟ್ಟಿ ಪಟ್ಲ ಮತ್ತಿತರ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ತಾಳಮದ್ದಲೆ ನಡೆಯಿತು.        

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟರ ಸಂಘ ವಾಮದಪದವು ವಲಯ-ಪದವು ಬಂಟರ ಭವನಕ್ಕೆ ಶಿಲಾನ್ಯಾಸ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*