ಬಂಟ್ವಾಳ

ಬಂಟ್ವಾಳಕ್ಕೆ ಆಗಮಿಸಿದ ಭಾವೈಕ್ಯತಾ ಜಾಥಾ: ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಮುಖಂಡರ ವಾಗ್ದಾಳಿ

ಜಾಹೀರಾತು

ಜನಾಂದೋಲನಗಳ ಮಹಾಮೈತ್ರಿ ನೇತೃತ್ವದಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ಸಹಕಾರದೊಂದಿಗೆ ಮಂಗಳೂರಿನಿಂದ ಆರಂಭಗೊಂಡು ಬೆಂಗಳೂರಿಗೆ ಸಾಗುವ ಭಾವೈಕ್ಯತಾ ಜಾಥ ಶನಿವಾರ ಬೆಳಗ್ಗೆ ಬಂಟ್ವಾಳಕ್ಕೆ ಆಗಮಿಸಿತು. ಬಿ.ಸಿ.ರೋಡ್ ನ ಫ್ಲೈಓವರ್ ಬಳಿ ಬಹಿರಂಗ ಸಭೆ ಈ ಸಂದರ್ಭ ನಡೆಯಿತು.

ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜನವಿರೋಧಿ ಧೋರಣೆಯಿಂದ ರೈತರು ಹಾಗೂ ಬಡಜನರ ಬದುಕು ಸಂಕಷ್ಟದಲ್ಲಿದ್ದು, ಇವುಗಳ ವಿರುದ್ಧ ಒಗ್ಗಟ್ಟಾಗಿ ಶಕ್ತಿ ಪ್ರದರ್ಶನ ಮಾಡಲಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಈ ಸಂದರ್ಭ ಹೇಳಿದರು.

ಕೇಂದ್ರ ಸರಕಾರಕ್ಕೆ  ಜನರ ಸಂಪತ್ತಿನ ಮೇಲೆ ಆಸೆ ಹುಟ್ಟಿದ್ದು,  ಸರಕಾರಿ ವ್ಯವಸ್ಥೆಯನ್ನು ಖಾಸಗಿಗೆ ವಹಿಸುವ ಮೂಲಕ ಅವರನ್ನು ಶ್ರೀಮಂತರನ್ನಾಗಿಸುತ್ತಿದ್ದಾರೆ. ದೇಶದ ಜಿಡಿಪಿ ಕುಸಿಯುವ ಹಂತದಲ್ಲಿದೆ. ಅದೇ ರೀತಿ ರಾಜ್ಯದಲ್ಲಿ ಜನಪರ ಸರಕಾರ ಆಡಳಿತ ಮಾಡುತ್ತಿಲ್ಲ ಎಂದರು.

ಈ ಸಂದರ್ಭ ವಿವಿಧ ಸಂಘಟನೆಗಳ ಮುಖಂಡರಾದ ಶಿವಪ್ರಕಾಶ್, ಕೆ.ವಿ.ಭಟ್, ಓಸ್ವಾಲ್ಡ್ ಫೆರ್ನಾಂಡೀಸ್, ಅಮಾನುಲ್ಲ ಖಾನ್, ಬಿ.ಶೇಖರ್, ರಾಮಣ್ಣ ವಿಟ್ಲ, ಸೇಸಪ್ಪ ಬೆದ್ರಕಾಡು ಮೊದಲಾದವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಮುಖರಾದ ಪ್ರೇಮನಾಥ ಶೆಟ್ಟಿ ಬಾಳ್ತಿಲ, ಪ್ರಭಾಕರ ದೈವಗುಡ್ಡೆ, ಸುರೇಶ್ ಕುಮಾರ್ ಬಂಟ್ವಾಳ, ಮೋನಪ್ಪ ಗೌಡ, ಆದಿತ್ಯನಾರಾಯಣ ಕೊಲ್ಲಾಜೆ, ಸತೀಶ್ ಅರಳ, ಸದಾನಂದ ಶೀತಲ್, ಮೋಹನ ಶೆಟ್ಟಿ ಪಂಜಿಕಲ್ಲು, ಮಾರಪ್ಪ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು. ತುಳಸೀದಾಸ್ ವಿಟ್ಲ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

6 hours ago