ಸ್ವಾತಂತ್ರ್ಯಯೋಧ ಡಾ. ಅಮ್ಮೆಂಬಳ ಬಾಳಪ್ಪ ಜನ್ಮಶತಾಬ್ದಿ ಸಮಾರಂಭದ ಪೂರ್ವಭಾವಿ ಸಭೆ

ಸ್ವಾತಂತ್ರ್ಯಯೋಧ ಡಾ. ಅಮ್ಮೆಂಬಳ ಬಾಳಪ್ಪ ಜನ್ಮಶತಾಬ್ದಿ ಸಮಾರಂಭದ ಪೂರ್ವಭಾವಿ ಸಭೆ ಬಿ.ಸಿ.ರೋಡು ಸಂಚಯಗಿರಿಯ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ಭಾನುವಾರ ನಡೆಯಿತು.

ಜಾಹೀರಾತು

ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸ್ವಾತಂತ್ರ್ಯಯೋಧ ಡಾ. ಅಮ್ಮೆಂಬಳ ಬಾಳಪ್ಪ ಸ್ಮಾರಕ ಸೇವಾ ಪ್ರತಿಷ್ಠಾನ, ಬಂಟ್ವಾಳದ ಅಧ್ಯಕ್ಷ ಅಮ್ಮೆಂಬಳ ಆನಂದ, ಡಾ. ಅಮ್ಮೆಂಬಳ ಬಾಳಪ್ಪ ಜನ್ಮಶತಾಬ್ದಿ ಸಮಾರಂಭದ ರೂಪುರೇಷೆಗಳನ್ನು  ವಿವರಿಸಿದರು.

ಜಾಹೀರಾತು

ಸಭೆಯಲ್ಲಿ ಡಾ. ಅಮ್ಮೆಂಬಳ ಬಾಳಪ್ಪ ಜನ್ಮ ಶತಾಬ್ದಿ ಸಮಾರಂಭಕ್ಕೆ ಅತಿಥಿ ಗಣ್ಯರನ್ನು ಆಹ್ವಾನಿಸುವುದು, ದೇಶಭಕ್ತಿಗೀತೆ ಸ್ಪರ್ಧೆ ಆಯೋಜನೆ, ಅಮ್ಮೆಂಬಳ ಬಾಳಪ್ಪರ ಸಂಸ್ಮರಣಾರ್ಥ ಸಂಚಿಕೆ ಬಿಡುಗಡೆ, ಸಾಧಕರಿಗೆ ಸನ್ಮಾನ ಮುಂತಾದ ವಿಷಯಗಳ ಬಗ್ಗೆ ಸಮಾಲೋಚನೆ ನಡೆಯಿತು. ಶತಾಬ್ದಿ ಸಮಾರಂಭವನ್ನು  ಸಂಪೂರ್ಣ ಯಶಸ್ವಿ ಗೊಳಿಸುವುದಕ್ಕಾಗಿ ವಿವಿಧ ಸಮಿತಿಗಳನ್ನು ರಚಿಸಲಾಯಿತು.

ಜಾಹೀರಾತು

ಡಾ. ಅಮ್ಮೆಂಬಳ ಬಾಳಪ್ಪ ಜನ್ಮಶತಾಬ್ದಿ ಸಮಾರಂಭ ಸಮಿತಿಗೆ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಮುಖ್ಯಸ್ಥ ಪ್ರೊ. ತುಕಾರಾಮ ಪೂಜಾರಿ ಅವರನ್ನು ಅಧ್ಯಕ್ಷರನ್ನಾಗಿ, ಪುಂಡರೀಕಾಕ್ಷ ಯು. ಕೈರಂಗಳ ಅವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ, ಉಮೇಶ್ ಪಿ.ಕೆ. ನಾಗಲಚ್ಚಿಲು ಅವರನ್ನು ಕೋಶಾಧಿಕಾರಿಯನ್ನಾಗಿ, ಮಂಜು ವಿಟ್ಲ ಅವರನ್ನು ಪ್ರಧಾನ ಸಂಯೋಜಕರನ್ನಾಗಿ ಹಾಗೂ ಡಾ.ಆಶಾಲತಾ ಸುವರ್ಣ, ಡಾ.ರಶ್ಮಿ ಅಮ್ಮೆಂಬಳ, ರತ್ನಾವತಿ, ಪ್ರಸಾದ್ ಕುಮಾರ್ ಮಾರ್ನಬೈಲು, ಡಾ. ದುಗ್ಗಪ್ಪ ಕಜೆಕಾರು ಅವರನ್ನು ಸಂಪಾದಕ ಮಂಡಳಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.  ನಿವೃತ್ತ ಯೋಧ ಡಿ. ಚಂದಪ್ಪ ಮೂಲ್ಯ, ಭೋಜ ಅಡ್ಯಾರ್, ಮಯೂರ್ ಉಳ್ಳಾಲ್, ರವೀಂದ್ರನಾಥ, ತೇಜಸ್ವಿರಾಜ್, ಶ್ರೀರಾಮ ದಿವಾಣ, ಪಾಂಡುರಂಗ ನಾಯಕ್, ಸದಾನಂದ ಬಂಗೇರ ಮುಡಿಪು, ಸುರೇಶ್ ಬಂಗೇರ, ದಾಮೋದರ ಸಾಲ್ಯಾನ್ ಸಂಚಯಗಿರಿ, ಜನಾರ್ದನ ಕುಲಾಲ್, ಕಿರಣ್ ಅಟ್ಲೂರು, ಸದಾಶಿವ ಕುಲಾಲ್, ಸಿ. ಮುತ್ತಪ್ಪ ಪೂಜಾರಿ, ಕೇಶವ ಮಾಸ್ಟರ್ ಮಾರ್ನಬೈಲು, ಪ್ರದೀಪ್ ಅತ್ತಾವರ್, ಎ. ಶಿವಪ್ಪ ಬಿ.ಸಿ.ರೋಡು ಮೊದಲಾದವರು ಉಪಸ್ಥಿತರಿದ್ದರು. ಉಮೇಶ್ ಪಿ. ಕೆ. ಸ್ವಾಗತಿಸಿದರು ಮತ್ತು ದಾಮೋದರ್ ಬಿ. ಎಂ. ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸ್ವಾತಂತ್ರ್ಯಯೋಧ ಡಾ. ಅಮ್ಮೆಂಬಳ ಬಾಳಪ್ಪ ಜನ್ಮಶತಾಬ್ದಿ ಸಮಾರಂಭದ ಪೂರ್ವಭಾವಿ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*