ನನ್ನ ಅವಧಿಯಲ್ಲಿ ಧರ್ಮಬೇಧ ಮಾಡದೆ ಎಲ್ಲರಿಗೂ ಅನುದಾನ: ರಮಾನಾಥ ರೈ

 

ಜಾಹೀರಾತು

ಬಂಟ್ವಾಳ: ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ನಮ್ಮ ಅವಧಿಯಲ್ಲಾಗಿದೆ. ಧರ್ಮಬೇಧ ಮಾಡದೇ ದೇಗುಲಗಳಿಗೆ ಮಸೀದಿಗಳಿಗೆ ಅನುದಾನ ಒದಗಿಸಲಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ವಿಧಾನಪರಿಷತ್ ಸದಸ್ಯ ಡಾ.ಕೆ.ಗೋವಿಂದ ರಾಜ್  ಅವರ ೨.೫ ಲಕ್ಷ ರೂ. ಅನುದಾನದಲ್ಲಿ ವೀರಕಂಬ ಗ್ರಾಮದ ಮಂಗಳಪದವಿನಲ್ಲಿ ನಿರ್ಮಿಸಿದ ಆಟೋ ರಿಕ್ಷಾ ನಿಲ್ದಾಣದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ಅವಧಿಯಲ್ಲಿ ನೀರು, ರಸ್ತೆಗೆ ಭಾರೀ ಅನುದಾನ ಒದಗಿಸಲಾಗಿದೆ. ಸಿರಿಚಂದನವನ ವೀರಕಂಬದಲ್ಲಿ ಮಾಡಲಾಗಿದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ನಮ್ಮ ಅವಧಿಯಲ್ಲಾಗಿದೆ. ಧರ್ಮಬೇಧ ಮಾಡದೇ ದೇಗುಲಗಳಿಗೆ ಮಸೀದಿಗಳಿಗೆ ಅನುದಾನ ಒದಗಿಸಲಾಗಿದೆ ಎಂದರು.

ಜಿ.ಪಂ.ಮಾಜಿ ಸದಸ್ಯ ಎಂ.ಎಸ್.ಮಹಮ್ಮದ್, ಎಪಿಎಂಸಿ ಮಾಜಿ ಅಧ್ಯಕ್ಷ ಪದ್ಮನಾಭ ರೈ, ಪ.ಪಂ.ಸದಸ್ಯ ಅಬ್ದುಲ್ ರಹಿಮಾನ್ ನೆಲ್ಲಿಗುಡ್ಡೆ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ವಿಟ್ಲ ಗ್ರಾ.ಪಂ.ಮಾಜಿ ಅಧ್ಯಕ್ಷ ರಮಾನಾಥ ವಿಟ್ಲ, ವಲಯ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ಎಪಿಎಂಸಿ ಮಾಜಿ ಅಧ್ಯಕ್ಷ ಸಂಕಪ್ಪ ಗೌಡ, ಎಂ.ಕೆ.ಮೂಸಾ, ಅಬ್ದುಲ್ ಖಾದರ್, ಜಿಲ್ಲಾ ಯುವ ಕಾಂಗ್ರೆಸ್ ಗಿರೀಶ್ ಆಳ್ವ, ವೀರಕಂಬ ಗ್ರಾ.ಪಂ.ಸದಸ್ಯ ರಘು ಪೂಜಾರಿ,  ಬಾಲಕೃಷ್ಣ ಆಳ್ವ ಕೊಡಾಜೆ ಮತ್ತಿತರರು ಉಪಸ್ಥಿತರಿದ್ದರು. ಗುತ್ತಿಗೆದಾರ ನಾಗರಾಜ ಶೆಟ್ಟಿ ಮತ್ತು ಪುರಂದರ ಅಂಚನ್ ಅವರನ್ನು ಗೌರವಿಸಲಾಯಿತು.

ಮಂಗಳಪದವು ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷರಾದ ಅಬ್ದುಲ್ ಖಾದರ್ ಬೊಬ್ಬೆಕೇರಿ, ಫೆಲಿಕ್ಸ್ ಪಾಯಸ್, ವಸಂತ ಪೂಜಾರಿ, ನೋಣಯ್ಯ ಪೂಜಾರಿ, ಅಶೋಕ್ ಪೂಜಾರಿ ಎನ್.ಎಸ್.ಡಿ., ಇಸ್ಮಾಯಿಲ್ ಮಂಗಳಪದವು, ಅದ್ರಾಮ ಮಂಗಳಪದವು, ಖಾದರ್ ನೆಲ್ಲಿಗುಡ್ಡೆ, ಆನಂದ ಭಂಡಾರಿ ಅವರನ್ನು ಸನ್ಮಾನಿಸಲಾಯಿತು.

 

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ನನ್ನ ಅವಧಿಯಲ್ಲಿ ಧರ್ಮಬೇಧ ಮಾಡದೆ ಎಲ್ಲರಿಗೂ ಅನುದಾನ: ರಮಾನಾಥ ರೈ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*