ವಿಟ್ಲ

ನನ್ನ ಅವಧಿಯಲ್ಲಿ ಧರ್ಮಬೇಧ ಮಾಡದೆ ಎಲ್ಲರಿಗೂ ಅನುದಾನ: ರಮಾನಾಥ ರೈ

 

ಜಾಹೀರಾತು

ಬಂಟ್ವಾಳ: ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ನಮ್ಮ ಅವಧಿಯಲ್ಲಾಗಿದೆ. ಧರ್ಮಬೇಧ ಮಾಡದೇ ದೇಗುಲಗಳಿಗೆ ಮಸೀದಿಗಳಿಗೆ ಅನುದಾನ ಒದಗಿಸಲಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಜಾಹೀರಾತು

ವಿಧಾನಪರಿಷತ್ ಸದಸ್ಯ ಡಾ.ಕೆ.ಗೋವಿಂದ ರಾಜ್  ಅವರ ೨.೫ ಲಕ್ಷ ರೂ. ಅನುದಾನದಲ್ಲಿ ವೀರಕಂಬ ಗ್ರಾಮದ ಮಂಗಳಪದವಿನಲ್ಲಿ ನಿರ್ಮಿಸಿದ ಆಟೋ ರಿಕ್ಷಾ ನಿಲ್ದಾಣದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ಅವಧಿಯಲ್ಲಿ ನೀರು, ರಸ್ತೆಗೆ ಭಾರೀ ಅನುದಾನ ಒದಗಿಸಲಾಗಿದೆ. ಸಿರಿಚಂದನವನ ವೀರಕಂಬದಲ್ಲಿ ಮಾಡಲಾಗಿದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ನಮ್ಮ ಅವಧಿಯಲ್ಲಾಗಿದೆ. ಧರ್ಮಬೇಧ ಮಾಡದೇ ದೇಗುಲಗಳಿಗೆ ಮಸೀದಿಗಳಿಗೆ ಅನುದಾನ ಒದಗಿಸಲಾಗಿದೆ ಎಂದರು.

ಜಿ.ಪಂ.ಮಾಜಿ ಸದಸ್ಯ ಎಂ.ಎಸ್.ಮಹಮ್ಮದ್, ಎಪಿಎಂಸಿ ಮಾಜಿ ಅಧ್ಯಕ್ಷ ಪದ್ಮನಾಭ ರೈ, ಪ.ಪಂ.ಸದಸ್ಯ ಅಬ್ದುಲ್ ರಹಿಮಾನ್ ನೆಲ್ಲಿಗುಡ್ಡೆ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ವಿಟ್ಲ ಗ್ರಾ.ಪಂ.ಮಾಜಿ ಅಧ್ಯಕ್ಷ ರಮಾನಾಥ ವಿಟ್ಲ, ವಲಯ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ಎಪಿಎಂಸಿ ಮಾಜಿ ಅಧ್ಯಕ್ಷ ಸಂಕಪ್ಪ ಗೌಡ, ಎಂ.ಕೆ.ಮೂಸಾ, ಅಬ್ದುಲ್ ಖಾದರ್, ಜಿಲ್ಲಾ ಯುವ ಕಾಂಗ್ರೆಸ್ ಗಿರೀಶ್ ಆಳ್ವ, ವೀರಕಂಬ ಗ್ರಾ.ಪಂ.ಸದಸ್ಯ ರಘು ಪೂಜಾರಿ,  ಬಾಲಕೃಷ್ಣ ಆಳ್ವ ಕೊಡಾಜೆ ಮತ್ತಿತರರು ಉಪಸ್ಥಿತರಿದ್ದರು. ಗುತ್ತಿಗೆದಾರ ನಾಗರಾಜ ಶೆಟ್ಟಿ ಮತ್ತು ಪುರಂದರ ಅಂಚನ್ ಅವರನ್ನು ಗೌರವಿಸಲಾಯಿತು.

ಜಾಹೀರಾತು

ಮಂಗಳಪದವು ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷರಾದ ಅಬ್ದುಲ್ ಖಾದರ್ ಬೊಬ್ಬೆಕೇರಿ, ಫೆಲಿಕ್ಸ್ ಪಾಯಸ್, ವಸಂತ ಪೂಜಾರಿ, ನೋಣಯ್ಯ ಪೂಜಾರಿ, ಅಶೋಕ್ ಪೂಜಾರಿ ಎನ್.ಎಸ್.ಡಿ., ಇಸ್ಮಾಯಿಲ್ ಮಂಗಳಪದವು, ಅದ್ರಾಮ ಮಂಗಳಪದವು, ಖಾದರ್ ನೆಲ್ಲಿಗುಡ್ಡೆ, ಆನಂದ ಭಂಡಾರಿ ಅವರನ್ನು ಸನ್ಮಾನಿಸಲಾಯಿತು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ