ಜಾಹೀರಾತು
ಬಂಟ್ವಾಳ: ಪಾಣೆಮಂಗಳೂರು ಸೇತುವೆ ಸಮೀಪ ನೇತ್ರಾವತಿ ನದಿಯಲ್ಲಿ ಹಿಂದು ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ರಾಜೇಶ್ ಎಂಬವರ ಶವ ಗುರುವಾರ ಬೆಳಗ್ಗೆ ಪತ್ತೆಯಾಗಿದ್ದು, ಈ ಕುರಿತು ಬಂಟ್ವಾಳ ನಗರ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸಜಿಪನಡು ಸಾನದಮನೆ ನಿವಾಸಿ ಹಿಂದುಪರ ಸಂಘಟನೆಗಳ ಮುಖಂಡ ರಾಜೇಶ್ ಸುವರ್ಣ ಎಂಬವರ ಶವ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಸೇತುವೆ ಬಳಿ ರಾತ್ರಿ ದ್ವಿಚಕ್ರ ವಾಹನವೊಂದು ಕಂಡುಬಂದಿದ್ದು, ಅದನ್ನು ಗಮನಿಸಿದ ಪೊಲೀಸರು ಅಗ್ನಿಶಾಮಕದಳದ ಹಾಗೂ ಸ್ಥಳೀಯರ ಸಹಾಯದಿಂದ ಹುಡುಕಾಟ ನಡೆಸಿದರು. ಈ ಸಂದರ್ಭ ನದಿಯಲ್ಲಿ ಶವ ಪತ್ತೆಯಾಗಿದೆ. ಘಟನೆಗೆ ಕಾರಣವಿನ್ನೂ ಗೊತ್ತಾಗಬೇಕಿದ್ದು, ತನಿಖೆ ಸಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಶವ ಪತ್ತೆ, ಪೊಲೀಸ್ ತನಿಖೆ ತೀವ್ರ"