ಬಂಟ್ವಾಳ

ಪೆರ್ಲಾಪು ಶಾಲೆಯಲ್ಲಿ ಕಡೇಶಿವಾಲಯ ರೋಟರಿ ಸಮುದಾಯ ವಾರ್ಷಿಕೋತ್ಸವ, ಸನ್ಮಾನ, ಪ್ರತಿಭಾ ಪುರಸ್ಕಾರ

ಬಂಟ್ವಾಳ: ಪೆರ್ಲಾಪು ಶಾಲೆಯಲ್ಲಿ ರೋಟರಿ ಸಮುದಾಯ ದಳ ಕಡೇಶಿವಾಲಯದ 34ನೇ ವಾರ್ಷಿಕೋತ್ಸವ, ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಜಾಹೀರಾತು

ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷರಾದ ಪುಷ್ಪರಾಜ್ ಹೆಗ್ಡೆ ಸತ್ತಿಕಲ್ಲು ವಹಿಸಿ ಶುಭ ಹಾರೈಸಿದರು.  ಅತಿಥಿಗಳಾಗಿ ಗುರುದೇವ್ ಹೋಮ್ ಪ್ರೊಡಕ್ಟ್ ಪೆರಾಜೆ ಮಾಲೀಕರಾದ ದೇಜಪ್ಪ ಪೂಜಾರಿ ಪೆರಾಜೆ, ರೋಟರಿ ಸಮುದಾಯ ದಳದ ಅಧ್ಯಕ್ಷ ಯೋಗೀಶ್ ನಾಯ್ಕ್. ಡಿ  ಭಾಗವಹಿಸಿದ್ದರು.

ಕಡೇಶಿವಾಲಯ ಗ್ರಾಮದ ದ.ಕ. ಜಿ. ಪ. ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯಲ್ಲಿ ಹಾಗೂ ಸರಕಾರಿ ಪ್ರೌಡಶಾಲೆ ಕಡೇಶಿವಾಲಯದಲ್ಲಿ ಎಸ್. ಎಸ್. ಎಲ್. ಸಿ. ವಿಭಾಗದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ನೋಣಯ್ಯ ಪೂಜಾರಿ ಕೆಮ್ಮಾನು ಇವರಿಗೆ ಸಾಂತ್ವನ ನಿಧಿ ನೀಡುವುದರ ಜೊತೆಗೆ, ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ , ಪ್ರಗತಿಪರ ಕೃಷಿಕರಾದ ಶ್ರೀ ಪೆಲಿಕ್ಸ್ ಡಿ’ಸೋಜ ಪೆಲತ್ತಕಟ್ಟೆ ಅವರನ್ನು ಸನ್ಮಾನಿಸಲಾಯಿತು.

ಜಾಹೀರಾತು

ರಾಜ್ಯೋತ್ಸವ ಪ್ರಶಸ್ತಿ ಪುರಸೃತರಾದ ಯುವವಾಹಿನಿ ಮಾಣಿ ಘಟಕವನ್ನು ಅಭಿನಂದಿಸಲಾಯಿತು.   ಮಾಜಿ ಸಚಿವರಾದ ಬಿ. ರಮಾನಾಥ ರೈ ಮತ್ತು ರೈ ಎಜುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಅಶೋಕ್ ರೈ ಕಾರ್ಯಕ್ರಮಕ್ಕೆ ಆಗಮಿಸಿ ಶುಭಹಾರೈಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಜಿ. ವಿ. ಡ್ಯಾನ್ಸ್ ಕ್ರಿವ್ ಕಡೇಶಿವಾಲಯ ಇವರಿಂದ ನೃತ್ಯ ಕಾರ್ಯಕ್ರಮ ಮತ್ತು ಅಮ್ಮ ಕಲಾವಿದೆರ್ ಕುಡ್ಲ ಅಭಿನಯದ ಅಲೇ ಬುಡಿಯೆರ್ ಗೆ ಎಂಬ ನಾಟಕ ನಡೆಯಿತು. ಸಂಸ್ಥೆಯ ಸಲಹಾ ಸಮಿತಿಯ ಚೇರ್ ಮ್ಯಾನ್ ಕೆ. ಕೆ. ಶೆಟ್ಟಿ ಕುರುಂಬ್ಲಾಜೆ ಸ್ವಾಗತಿಸಿದರು. ಕಾರ್ಯದರ್ಶಿ ಕಿಶೋರ್ ಕುಮಾರ್ ಬಿ. ವಂದಿಸಿದರು., ನವೀನ್ ನಾಯ್ಕ್ ಪಿಳಿಂಗಳ ಮತ್ತು ಪೂವಪ್ಪ ಮುಂಡಾಲ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ