ಜಿಲ್ಲಾ ಸುದ್ದಿ

ಈ ಬಾರಿ ದ.ಕ.ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯ ಮಾಣಿಲದಲ್ಲಿ

ಜಾಹೀರಾತು

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಗ್ರಾಮವಾಸ್ತವ್ಯ ಕಾರ್ಯಕ್ರಮ ಈ ಬಾರಿ ಜನವರಿ 21ರಂದು ಬಂಟ್ವಾಳ ತಾಲೂಕಿನ ಮಾಣಿಲ ಗ್ರಾಮದಲ್ಲಿ ಇರಲಿದೆ.

ಮಾಣಿಲದ ಮುರುವದಲ್ಲಿರುವ ಸರಕಾರಿ ಪ್ರೌಢಶಾಲೆಯಲ್ಲಿ ಜ.21ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲಾ ತಾಲೂಕು ಮಟ್ಟದ ಎಲ್ಲ ಇಲಾಖಾಧಿಕಾರಿಗಳು ಹಾಜರಿರುತ್ತಾರೆ. ಗ್ರಾಮವಾಸ್ತವ್ಯದಲ್ಲಿ ಕಂದಾಯ ಮತ್ತು ಇತರ ಇಲಾಖೆಗಳ ಸವಲತ್ತು ವಿತರಣೆ, ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರೊಂದಿಗೆ ಸಮಾಲೋಚಿಸಬಹುದಾಗಿದೆ. ಯಾವುದಾದರೂ ಅಹವಾಲುಗಳು ಮಾಣಿಲ ಗ್ರಾಮಕ್ಕೊಳಪಟ್ಟು ಇರುವುದಾದರೆ, ಜನವರಿ 19ರೊಳಗೆ ಗ್ರಾಮ ಪಂಚಾಯಿತಿ ದೂರು ಪೆಟ್ಟಿಗೆ, ಗ್ರಾಮಲೆಕ್ಕಿಗರಿಗೆ ಅಥವಾ ತಾಲೂಕು ಕಚೇರಿಗೆ ಖುದ್ದಾಗಿ ಸಲ್ಲಿಸಲು ಪ್ರಕಟಣೆಯಲ್ಲಿ ತಹಸೀಲ್ದಾರ್ ಕೋರಿದ್ದಾರೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.