ಕಲ್ಲಡ್ಕ

ವಿವೇಕ ರಥ, ಯುವ ಪಥ – ಜಾಗೃತಿ ಜಾಥಾಕ್ಕೆ ಕಲ್ಲಡ್ಕದಲ್ಲಿ ಸ್ವಾಗತ

ಜಾಹೀರಾತು

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಪ್ರಯುಕ್ತ ಯುವ ಸಪ್ತಾಹ, ವಿವೇಕ ರಥಕ್ಕೆ ಸ್ವಾಗತ, ಯುವ ಪಥ, ಯುವ ಜಾಗೃತಿ ಕಾರ್ಯಕ್ರಮ ಶುಕ್ರವಾರ ಮಧ್ಯಾಹ್ನ ದ.ಕ.ಜಿಲ್ಲಾ  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ.ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು, ತಾಲೂಕು ಯುವಜನ ಒಕ್ಕೂಟ  ಬಂಟ್ವಾಳ ಹಾಗೂ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ಆಶ್ರಯದಲ್ಲಿ ನಡೆಯಿತು.

ಕಲ್ಲಡ್ಕ ಪೇಟೆಯಲ್ಲಿ ಸ್ವಾಮಿ  ವಿವೇಕಾನಂದರ ಸ್ತಬ್ದ ಚಿತ್ರದ ರಥವನ್ನು ಶಾಸಕ ರಾಜೇಶ್ ನಾಯ್ಕ್ ಹಾಗೂ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಪುಷ್ಪಾರ್ಚನೆಯ ಮಾಡುವ ಮೂಲಕ ಸ್ವಾಗತಿಸಿದರು.

ಬಳಿಕ ಕಾಲೇಜಿನ ಸಭಾಂಗಣದಲ್ಲಿ ನಡೆದ  ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಪ್ರಭಾಕರ ಭಟ್, ದೇಶದ ಪರಂಪರೆ, ಸಂಸ್ಕೃತಿಯ ಅರಿವು ವಿದ್ಯಾರ್ಥಿಗಳ ಮೂಲಕ ಜನತೆಗೆ ಆಗಬೇಕು ಎಂದರು. ಪ್ರಿನ್ಸಿಪಾಲ್ ಕೃಷ್ಣ ಪ್ರಸಾದ್ ಕಾಯರ್ ಕಟ್ಟೆ, ಇಲಾಖೆ ನಿರ್ದೇಶಕ ರಾಕೇಶ್ ರೈ ಕಡೆಂಜ, ಯುವಜನ ಒಕ್ಕೂಟದ  ಜಿಲ್ಲಾ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಇಲಾಖೆಯ ಜಿಲ್ಲಾ ನೋಡಲ್ ಅಧಿಕಾರಿ ಮಾಮಚ್ಚನ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ನವೀನ್ ಪಿ.ಎಸ್, ಜಿಪಂ ಮಾಜಿ ಸದಸ್ಯ  ಚೆನ್ನಪ್ಪ ಆರ್ ಕೋಟ್ಯಾನ್  ಉಪಸ್ಥಿತರಿದ್ದರು. ಬಂಟ್ವಾಳ ಯುವಜನ ಒಕ್ಕೂಟದ ಕಾರ್ಯದರ್ಶಿ ದಿನೇಶ್ ಅಮ್ಟೂರು ಸ್ವಾಗತಿಸಿದರು. ವಿದ್ಯಾರ್ಥಿನಿ ಹರ್ಷಿತಾ ಎನ್ . ವಂದಿಸಿದರು. ವಿದ್ಯಾರ್ಥಿ  ಜಯ್ ದೀಪ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

15 hours ago