ಕಾರ್ಯಕರ್ತರ ಅದ್ದೂರಿ ಸ್ವಾಗತದೊಂದಿಗೆ ಆಗಮಿಸಿದ ಬಂಟ್ವಾಳದ ಎಸ್.ಡಿ.ಪಿ.ಐ. ಅಭ್ಯರ್ಥಿ ಇಲ್ಯಾಸ್ ಮಹಮ್ಮದ್ ತುಂಬೆ, ಬಿ.ಸಿ.ರೋಡ್ ನಲ್ಲಿ ಸಭೆ

ಜಾಹೀರಾತು

ಮುಂಬರುವ ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಬಂಟ್ವಾಳ ಕ್ಷೇತ್ರದ ಎಸ್ ಡಿ ಪಿ ಐ ಅಭ್ಯರ್ಥಿಯಾದ ಇಲ್ಯಾಸ್ ಮುಹಮ್ಮದ್ ತುಂಬೆ ಅವರಿಗೆ ಅದ್ದೂರಿಯ ಸ್ವಾಗತ ಕಾರ್ಯಕ್ರಮ ನಡೆಯಿತು. ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಮೂನಿಷ್ ಆಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಾಹೀರಾತು

ಬಿ.ಸಿ ರೋಡ್ ನ ತಲಪಾಡಿ ಟೋಲ್ ಗೇಟ್ ನಿಂದ ಕೈಕಂಬ ಜಂಕ್ಷನ್ ವರೆಗೆ ವಾಹನ ಜಾಥಾ ಸಾಗಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ಮಾತಾಡಿ ” ಎಸ್ ಡಿ ಪಿ ಐ ಯಾವುದೇ ಪಕ್ಷದ ‘ಬಿ’ ಟೀಂ ಅಲ್ಲ. ಹೊರತಾಗಿ ಎಸ್ ಡಿ ಪಿ ಐ ಪಕ್ಷವು ಜನತೆಯ ಕಷ್ಟಗಳಿಗೆ ಸ್ಪಂದಿಸಿದ, ಶೋಷಿತಕ್ಕೊಳಗಾದವರ  ‘ಎ’ ಟೀಂ ಆಗಿದೆ’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮುಖ್ಯ ಅತಿಥಿಯಾದ ಎಸ್ ಡಿ ಪಿ ಐ ಪಕ್ಷದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಇಲ್ಯಾಸ್ ಮುಹಮ್ಮದ್ ತುಂಬೆ ಮಾತನಾಡಿ, ” ರಸ್ತೆ, ದಾರಿದೀಪ, ಚರಂಡಿಯ ಕಾರ್ಯಗಳ ಅಭಿವೃದ್ಧಿಯ ಜೊತೆಗೆ ಜನರ ನೈತಿಕ, ಸಾಮಾಜಿಕ, ಶೈಕ್ಷಣಿಕ ಪ್ರಗತಿಯತ್ತ ಕೂಡ ಎಸ್ ಡಿ ಪಿ ಐ ದೂರದೃಷ್ಟಿವಿಟ್ಟಿದೆ. ಪಕ್ಷವು ನನ್ನನ್ನು ಬಂಟ್ವಾಳದ ಅಭ್ಯರ್ಥಿಯಾಗಿ ಘೋಷಿಸಿದ್ದು, ಜನರೂ ನನ್ನನ್ನು ಮೆಚ್ಚಿದ್ದಾರೆ. ಈ ಬಾರಿ ಖಂಡಿತ ಜನರು ನನಗೆ ಅವಕಾಶ ಕಲ್ಪಿಸಿ ಕೊಡುತ್ತಾರೆ’ ಎಂದು ಹೇಳಿದರು.

ಜಾಹೀರಾತು

ಗಣ್ಯ ಅತಿಥಿಯಾಗಿ ಭಾಗವಹಿಸಿದ ಎಸ್ ಡಿ ಪಿ ಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಮಾತನಾಡಿ ‘ ಈ ಬಾರಿಯ ಚುನಾವಣೆಯನ್ನು ಎಸ್ ಡಿ ಪಿ ಐ ಬಹಳ ಶಕ್ತವಾಗಿ ಎದುರಿಸಲಿದೆ. ಇಲ್ಯಾಸ್ ತುಂಬೆ ಅವರನ್ನು ಜನರು ಬೆಂಬಲಿಸುತ್ತಾರೆ. ಜನರಿಗೆ ಈ ಕಾಲದ ಆಗು ಹೋಗುಗಳು ಮನವರಿಕೆಯಾಗಿದೆ. ಪರ್ಯಾಯ ಶಕ್ತಿಯಾದ ಎಸ್ ಡಿ ಪಿ ಯನ್ನು ಮಾತ್ರ ಜನರು ಸೂಚಿಸುತ್ತಾರೆ’ ಎಂದು ಜನರನ್ನುದ್ದೇಶಿಸಿ ಮಾತನಾಡಿದರು.

ಜಾಹೀರಾತು

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ, ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಮುಲ್ಕಿ- ಮೂಡಬಿದ್ರೆ  ಕ್ಷೇತ್ರದ ಎಸ್ ಡಿ ಪಿ ಐ ಅಭ್ಯರ್ಥಿ ಅಲ್ಫೋನ್ಸ್ ಫ್ರಾಂಕೋ , ಪಕ್ಷದ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು, ಪಕ್ಷದ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು, ದ.ಕ ಜಿಲ್ಲಾ ಉಪಾಧ್ಯಕ್ಷ ವಿಕ್ಟರ್ ಮಾರ್ಟಿಸ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಶಾಹುಲ್ ಎಸ್ ಎಚ್, ಕಾರ್ಯಕರ್ತರು, ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ರಾಜ್ಯ ಸಮಿತಿ ಸದಸ್ಯ ಅಕ್ಬರ್ ಅಲಿ ಪೊನ್ನೋಡಿ, ದ.ಕ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು, ಇನ್ನೋರ್ವ ಕಾರ್ಯದರ್ಶಿ ಹಾಗೂ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್ ಡಿ ಪಿ ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ, ದ.ಕ ಜಿಲ್ಲಾ ಸಮಿತಿ ಸದಸ್ಯರುಗಳಾದ ಯೂಸುಫ್ ಆಲಡ್ಕ, ಅಬೂಬಕ್ಕರ್ ಮದ್ದ, ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಕಲಂದರ್ ಪರ್ತಿಪಾಡಿ, ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್, ಎಸ್ ಡಿ ಪಿ ಐ ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷ ಶರೀಫ್ ವಳವೂರು, ಬಂಟ್ವಾಳ ಪುರಸಭಾ ಸದಸ್ಯರಾದ ಇದ್ರೀಸ್ ಪಿ.ಜೆ ಮತ್ತು ಇತರ ನಾಯಕರು, ಕಾರ್ಯಕರ್ತರು, ಹಿತೈಷಿಗಳು ಉಪಸ್ಥಿತರಿದ್ದರು.

ಜಾಹೀರಾತು

ನನ್ನ ಮೇಲೆ ಪಕ್ಷ ಭರವಸೆ ಇಟ್ಟು ಎಸ್‌ಡಿಪಿಐ ಬಂಟ್ವಾಳ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದು, ಪಕ್ಷದ ಕಾರ್ಯಕರ್ತರು, ನಾಯಕರು ಅದ್ದೂರಿಯ ಸ್ವಾಗತ ನೀಡಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎಸ್‌ಡಿಪಿಐ ಈವರೆಗೆ ಕ್ಷೇತ್ರವನ್ನು ಪ್ರತಿನಿಽಸಿದ ಶಾಸಕರು, ವಿವಿಧ ಪಕ್ಷಗಳ ಅಭ್ಯರ್ಥಿಗಳಿಗೆ ನಿಕಟ ಸ್ಪರ್ಧೆ ನೀಡಲಿದ್ದು, ಎಲ್ಲಾ ಕಾರ್ಯಕರ್ತರು ಸಂಪೂರ್ಣವಾಗಿ ತೊಡಗಿಸಿಕೊಂಡು ಪಕ್ಷದ ಅಭ್ಯರ್ಥಿಪರ ಕೆಲಸ ಮಾಡಲಿದ್ದಾರೆ ಎಂದು ಇಲ್ಯಾಸ್ ತುಂಬೆ ಈ ಸಂದರ್ಭ ಸುದ್ದಿಗಾರರಿಗೆ ತಿಳಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಾರ್ಯಕರ್ತರ ಅದ್ದೂರಿ ಸ್ವಾಗತದೊಂದಿಗೆ ಆಗಮಿಸಿದ ಬಂಟ್ವಾಳದ ಎಸ್.ಡಿ.ಪಿ.ಐ. ಅಭ್ಯರ್ಥಿ ಇಲ್ಯಾಸ್ ಮಹಮ್ಮದ್ ತುಂಬೆ, ಬಿ.ಸಿ.ರೋಡ್ ನಲ್ಲಿ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*