ಒಡಿಯೂರು ತುಳು ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಡಾ. ವಸಂತಕುಮಾರ ಪೆರ್ಲ ಆಯ್ಕೆ

ಜಾಹೀರಾತು

ಬಂಟ್ವಾಳ: ಇದೇ ಜನವರಿ 30 ಹಾಗೂ 31 ರ ಸೋಮವಾರ ಮತ್ತು ಮಂಗಳವಾರ ಒಡಿಯೂರಿನಲ್ಲಿ ಜರಗಲಿರುವ 23ನೇ ತುಳು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಕವಿ, ಸಾಹಿತಿ ಡಾ. ವಸಂತಕುಮಾರ ಪೆರ್ಲ ಅವರು ಆಯ್ಕೆಯಾಗಿದ್ದಾರೆ.

ಜಾಹೀರಾತು

ನಮ್ಮ ನೆಲ, ನಮ್ಮ ಜಲ ಎಂಬ ಪರಿಕಲ್ಪನೆ ಅಡಿಯಲ್ಲಿ ಜರಗಲಿರುವ ಸಮ್ಮೇಳನದಲ್ಲಿ ವಿಚಾರ ಸಂಕಿರಣ, ವಿವಿಧ ಜಾನಪದ ನೃತ್ಯಸ್ಪರ್ಧೆಗಳು ಜರಗಲಿವೆ.

ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅಜನೆ, ದುತ್ತೈತ ಎಂಬ ಕವನ ಸಂಕಲನಗಳು, ಮುನ್ನುಡಿಗಳ ಸಂಕಲನವಾದ ಮದಿಪುದ ಪಾತೆರೊಲು, ಅನುವಾದಿತ ಸಂಕಲನ ರಬೀಂದ್ರ ಕಬಿತೆಲು, ತುಳುಕಾವ್ಯೊ ಎಂಬ ಸಾಹಿತ್ಯ ಚರಿತ್ರೆ, ಪ್ರಾತಿನಿಧಿಕ ತುಳು ಕಬಿತೆಲು, ಆಕಾಶವಾಣಿ ತುಳು ಕತೆಕ್ಕುಲು, ಇಂಚಿಪೊದ ತುಳು ಕಬಿತೆಲು, ಕಬಿತೆ-2017 ಮುಂತಾದ ಸಂಪಾದಿತ ಕೃತಿಗಳಿಂದ ಪ್ರಸಿದ್ಧರಾಗಿರುವ ಡಾ. ಪೆರ್ಲ ಅವರು ಕನಕದಾಸರ ಮೋಹನ ತರಂಗಿಣಿ, ವಚನ ಸಾಹಿತ್ಯ ಮೊದಲಾದವುಗಳನ್ನು ತುಳುವಿಗೆ ಅನುವಾದಿಸಿದ್ದಾರೆ. ರಾಷ್ಟ್ರೀಯ ಮಟ್ಟದ ಹಲವು ಸಮ್ಮೇಳನಗಳಲ್ಲಿ ತುಳುವನ್ನು ಪ್ರತಿನಿಧಿಸಿದ್ದಾರೆ. ಇವರ ಹಲವು ತುಳು ಕೃತಿಗಳು ದೇಶದ ಇತರ ಭಾಷೆಗಳಿಗೆ ಅನುವಾದ ಆಗಿವೆ.

ನೂರಾರು ತುಳು ಕಾರ್ಯಕ್ರಮಗಳನ್ನು ಸಂಘಟಿಸಿರುವರಲ್ಲದೆ ನೂರಾರು ಮಂದಿ ಕವಿ-ಲೇಖಕರನ್ನು ಪ್ರೋತ್ಸಾಹಿಸಿ ಬರವಣಿಗೆಯ ಕಾಯಕಕ್ಕೆ ಹಚ್ಚಿದ್ದಾರೆ. ಉತ್ತಮ ವಿಮರ್ಶಕರಾಗಿ ವಾಗ್ಮಿಗಳಾಗಿ ಹೆಸರಾಗಿರುವ ಡಾ. ಪೆರ್ಲ ಅವರು ಮಂಗಳೂರು ಆಕಾಶವಾಣಿಯ ಮೂಲಕ ತುಳುವಿಗೆ ಭದ್ರ ಬುನಾದಿ ಹಾಕಿಕೊಡುವಲ್ಲಿ ಶ್ರಮಿಸಿದವರು

ಜಾಹೀರಾತು

 

 

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಒಡಿಯೂರು ತುಳು ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಡಾ. ವಸಂತಕುಮಾರ ಪೆರ್ಲ ಆಯ್ಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*