ವಿಟ್ಲ

ಒಡಿಯೂರು ತುಳು ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಡಾ. ವಸಂತಕುಮಾರ ಪೆರ್ಲ ಆಯ್ಕೆ

ಜಾಹೀರಾತು

ಬಂಟ್ವಾಳ: ಇದೇ ಜನವರಿ 30 ಹಾಗೂ 31 ರ ಸೋಮವಾರ ಮತ್ತು ಮಂಗಳವಾರ ಒಡಿಯೂರಿನಲ್ಲಿ ಜರಗಲಿರುವ 23ನೇ ತುಳು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಕವಿ, ಸಾಹಿತಿ ಡಾ. ವಸಂತಕುಮಾರ ಪೆರ್ಲ ಅವರು ಆಯ್ಕೆಯಾಗಿದ್ದಾರೆ.

ನಮ್ಮ ನೆಲ, ನಮ್ಮ ಜಲ ಎಂಬ ಪರಿಕಲ್ಪನೆ ಅಡಿಯಲ್ಲಿ ಜರಗಲಿರುವ ಸಮ್ಮೇಳನದಲ್ಲಿ ವಿಚಾರ ಸಂಕಿರಣ, ವಿವಿಧ ಜಾನಪದ ನೃತ್ಯಸ್ಪರ್ಧೆಗಳು ಜರಗಲಿವೆ.

ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅಜನೆ, ದುತ್ತೈತ ಎಂಬ ಕವನ ಸಂಕಲನಗಳು, ಮುನ್ನುಡಿಗಳ ಸಂಕಲನವಾದ ಮದಿಪುದ ಪಾತೆರೊಲು, ಅನುವಾದಿತ ಸಂಕಲನ ರಬೀಂದ್ರ ಕಬಿತೆಲು, ತುಳುಕಾವ್ಯೊ ಎಂಬ ಸಾಹಿತ್ಯ ಚರಿತ್ರೆ, ಪ್ರಾತಿನಿಧಿಕ ತುಳು ಕಬಿತೆಲು, ಆಕಾಶವಾಣಿ ತುಳು ಕತೆಕ್ಕುಲು, ಇಂಚಿಪೊದ ತುಳು ಕಬಿತೆಲು, ಕಬಿತೆ-2017 ಮುಂತಾದ ಸಂಪಾದಿತ ಕೃತಿಗಳಿಂದ ಪ್ರಸಿದ್ಧರಾಗಿರುವ ಡಾ. ಪೆರ್ಲ ಅವರು ಕನಕದಾಸರ ಮೋಹನ ತರಂಗಿಣಿ, ವಚನ ಸಾಹಿತ್ಯ ಮೊದಲಾದವುಗಳನ್ನು ತುಳುವಿಗೆ ಅನುವಾದಿಸಿದ್ದಾರೆ. ರಾಷ್ಟ್ರೀಯ ಮಟ್ಟದ ಹಲವು ಸಮ್ಮೇಳನಗಳಲ್ಲಿ ತುಳುವನ್ನು ಪ್ರತಿನಿಧಿಸಿದ್ದಾರೆ. ಇವರ ಹಲವು ತುಳು ಕೃತಿಗಳು ದೇಶದ ಇತರ ಭಾಷೆಗಳಿಗೆ ಅನುವಾದ ಆಗಿವೆ.

ನೂರಾರು ತುಳು ಕಾರ್ಯಕ್ರಮಗಳನ್ನು ಸಂಘಟಿಸಿರುವರಲ್ಲದೆ ನೂರಾರು ಮಂದಿ ಕವಿ-ಲೇಖಕರನ್ನು ಪ್ರೋತ್ಸಾಹಿಸಿ ಬರವಣಿಗೆಯ ಕಾಯಕಕ್ಕೆ ಹಚ್ಚಿದ್ದಾರೆ. ಉತ್ತಮ ವಿಮರ್ಶಕರಾಗಿ ವಾಗ್ಮಿಗಳಾಗಿ ಹೆಸರಾಗಿರುವ ಡಾ. ಪೆರ್ಲ ಅವರು ಮಂಗಳೂರು ಆಕಾಶವಾಣಿಯ ಮೂಲಕ ತುಳುವಿಗೆ ಭದ್ರ ಬುನಾದಿ ಹಾಕಿಕೊಡುವಲ್ಲಿ ಶ್ರಮಿಸಿದವರು

 

 

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.