ಮಾಣಿಲದಲ್ಲಿ ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯ, ಸ್ಥಳೀಯರಿಂದ ಹಲವು ಬೇಡಿಕೆ, ಸ್ಥಳದಲ್ಲೇ ಮಂಜೂರು

ಜಾಹೀರಾತು

ಬಂಟ್ವಾಳ: ಗಡಿಗ್ರಾಮದ ಜನರು ಅನುಭವಿಸುತ್ತಿರುವ ತೊಂದರೆಗಳಿಗೆ ಪರಿಹಾರ ಕಂಡುಕೊಳ್ಳುವ ಕೆಲಸ ಆಗಬೇಕು ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಅವರ ಗ್ರಾಮವಾಸ್ತವ್ಯ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ಮಾಣಿಲದ ಸರಕಾರಿ ಪ್ರೌಢಶಾಲೆಯಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿದ ಬಳಿಕ ಮಾತನಾಡಿದ ಶಾಸಕರು, ಇಲಾಖೆಗಳಿಗೆ ಗ್ರಾಮದ ಸಂಪರ್ಕ ಕಲ್ಪಿಸಲು ಇದು ಕಾರಣವಾಗಿದೆ ಎಂದರು.


ಅಧಿಕಾರಿ, ಜನಪ್ರತಿನಿಧಿ ಗ್ರಾಮದೆಡೆ ತೆರಳಿದಾಗ ಸಮಸ್ಯೆಗೆ ಪರಿಹಾರ ದೊರಕುವ ಕೆಲಸ ಆಗುತ್ತದೆ. ದ.ಕ.ಜಿಲ್ಲೆಯ ಗಡಿಗ್ರಾಮದಲ್ಲಿ ಹಲವು ಸಮಸ್ಯೆಗಳಿವೆ. ಕಂದಾಯ ಇಲಾಖೆ ಸಮಸ್ಯೆ ನೂರಕ್ಕೆ ನೂರು ಪರಿಹಾರವನ್ನು ಕಂಡರೆ, ಜನಪ್ರತಿನಿಧಿಗಳೂ ನಿರಾಳರಾಗುತ್ತಾರೆ. ಮರಳು, ಕೆಂಪುಕಲ್ಲು, ಪ್ರಮಾಣಪತ್ರಗಳು, ಹೀಗೆ ಸಮಸ್ಯೆಗಳು ಹಲವು ಎಂದರು. ಭ್ರಷ್ಟಾಚಾರಮುಕ್ತ ವ್ಯವಸ್ಥೆ ಆಗಬೇಕು, ಹೋದ ತಕ್ಷಣ ಕೆಲಸ ಆಗುವ ಕಾರ್ಯ ಆಗಬೇಕು ಎಂದರು. ಅರಣ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ ಇಲಾಖೆ ಜನರಿಗೆ ಹತ್ತಿರವಾದಷ್ಟು ಸಮಸ್ಯೆ ಪರಿಹಾರ ದೊರಕುತ್ತದೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ರವಿಕುಮಾರ್, ಎಲ್ಲ ಕಾರ್ಯಗಳಿಗೆ ತಾಲೂಕು ಮಟ್ಟದ ಹಾಗೂ ಅನುಮೋದನೆ ದೊರಕದ ಸಂದರ್ಭದಲ್ಲಿ ಗ್ರಾಮವಾಸ್ತವ್ಯ ಪರಿಣಾಮಕಾರಿಯಾಗಿ ಮೂಡಿಬರುತ್ತದೆ ಎಂದು ಹೇಳಿದರು.
ಉಪಾಧ್ಯಕ್ಷ ರಾಜೇಶ್ ಕುಮಾರ್ ಬಾಳೆಕಲ್ಲು ಮಾತನಾಡಿ, ಹಲವು ಬೇಡಿಕೆಗಳ ಪಟ್ಟಿಯನ್ನು ಮಂಡಿಸಿದರು.
ಮಾಣಿಲ ಗ್ರಾ.ಪಂ.ಅಧ್ಯಕ್ಷೆ ವನಿತಾ, ಉಪಾಧ್ಯಕ್ಷ ರಾಜೇಶ್ ಕುಮಾರ್ ಬಾಳೆಕಲ್ಲು, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್, ಯೋಜನಾ ನಿರ್ದೇಶಕ ಕೆ.ಜಯರಾಮ್, ಡಿಡಿಎಲ್ ಆರ್ ನಿರಂಜನ್, ತಹಸೀಲ್ದಾರ್ ದಯಾನಂದ್ ಉಪಸ್ಥಿತರಿದ್ದರು.
ಉಪತಹಸೀಲ್ದಾರ್ ವಿಜಯ ವಿಕ್ರಮ ಸ್ವಾಗತಿಸಿದರು. ಉಮಾನಾಥ ರೈ ಮೇರಾವು, ಅನಿಲ್ ಕಾರ್ಯಕ್ರಮ ನಿರ್ವಹಿಸಿದರು. ಈ ಸಂದರ್ಭ ವಿವಿಧ ಇಲಾಖೆಗಳ ಸವಲತ್ತುಗಳನ್ನು ವಿತರಿಸಲಾಯಿತು. ನವೀನ್ ಬೆಂಜನಪದವು ವಂದಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯರಿಂದ ಹಲವು ಬೇಡಿಕೆಗಳನ್ನು ಮಂಡಿಸಲಾಯಿತು. ಪಂಚಾಯತಿ ನಿವೇಶನ, ಆರೋಗ್ಯ ಕೇಂದ್ರ, ಅಂಬೇಡ್ಕರ್ ಭವನ, ಹಾಳೆತಟ್ಟೆ ಫ್ಯಾಕ್ಟರಿ ಮಾಡುವುದಿದ್ದರೆ ಸಹಾಯಧನ, ಪಶು ಚಿಕಿತ್ಸಾಲಯ, ವಾಲ್ಮೀಕಿ ಭವನ, ಸಬ್ ಸ್ಟೇಶನ್ ಬೇಡಿಕೆ ಮಂಜೂರಾಯಿತು.

 

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮಾಣಿಲದಲ್ಲಿ ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯ, ಸ್ಥಳೀಯರಿಂದ ಹಲವು ಬೇಡಿಕೆ, ಸ್ಥಳದಲ್ಲೇ ಮಂಜೂರು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*