ಯೋಜನೆ ಹೇಳುವುದಷ್ಟೇ ಅಲ್ಲ, ಅನುಷ್ಠಾನವನ್ನೂ ಮಾಡಿದ್ದೇವೆ: ಸರಪಾಡಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರ ಗ್ರಾಮವಿಕಾಸ ಯಾತ್ರೆಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬಂಟ್ವಾಳ: ನಾವು ಹೇಳುವುದಷ್ಟೇ ಅಲ್ಲ, ಜನಪರವಾಗಿ ಅನುಷ್ಠಾನ ಮಾಡುತ್ತಿದ್ದೇವೆ. ದಲಿತರ ಪರವಾಗಿ ಕೆಲಸ ಮಾಡುತ್ತಿರು ಸರಕಾರ ನಮ್ಮದು. ಹಲವಾರು ಜನಪರ ಕೆಲಸಗಳ ಘೋಷಣೆಯೊಂದಿಗೆ ಅವುಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ದಲಿತರು, ಹಿಂದುಳಿದ ವರ್ಗದವರ ಸಹಿತ ಸಮಾಜದ ಎಲ್ಲ ವರ್ಗಗಳ ಜನರನ್ನು ತಲುಪುವ ಕಾರ್ಯ ಮಾಡಿದ್ದೇವೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಜಾಹೀರಾತು

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ಬಿಜೆಪಿ ಬಂಟ್ವಾಳ ವತಿಯಿಂದ ಶುಕ್ರವಾರ ರಾತ್ರಿ ಸರಪಾಡಿ ಶರಭೇಶ್ವರ ದೇವಸ್ಥಾನ ಸಮೀಪ ಗ್ರಾಮವಿಕಾಸ ಯಾತ್ರೆಯ ಏಳನೇ ದಿನದ ಸಮಾರೋಪದಲ್ಲಿ ಅವರು ಮಾತನಾಡಿದರು.

ಜಾಹೀರಾತು

23 ಲಕ್ಷ ಕುಟುಂಬಗಳಿಗೆ ವಿದ್ಯುತ್ ಉಚಿತ ನೀಡುವ ಯೋಜನೆ ಸಮಾಜ ಕಲ್ಯಾಣ ಇಲಾಖೆ ಮೂಲಕ ನೀಡಲಾಗುತ್ತಿದೆ ಎಂದ ಅವರು, ಭಾರತ ಜೋಡಿಸ್ತೆವೆ ಎಂದು ಹೊರಟ ಕಾಂಗ್ರೆಸ್ ಗೆ ಒಡೆದದ್ದು ಯಾರು ಎಂದು ಪ್ರಶ್ನಿಸಬೇಕಾಗಿದೆ. ನೀವು ಶಾಂತಿ ಬಗ್ಗೆ ಮಾತಾಡ್ತೀರಿ, ಕುಕ್ಕರ್ ಬಾಂಬ್  ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂದು ಪ್ರಶ್ನಿಸಿದರು. ಕುಕ್ಕರ್ ನಲ್ಲಿ ಮೊಸರನ್ನ ಹಿಡ್ಕೊಂಡು ಹೋಗ್ತಿದ್ನಾ ಎಂದು ಪ್ರಶ್ನಿಸಿದ ಕೋಟ, ಚುನಾವಣೆಗೋಸ್ಕರ ಭಯೋತ್ಪಾದಕನನ್ನು ಭಯೋತ್ಪಾದಕ ಎನ್ನಲೂ ಹಿಂಜರಿತವೇಕೆ ಎಂದು ಕಾಂಗ್ರೆಸ್ ಗೆ ಪ್ರಶ್ನಿಸಿದರು.

ನಮ್ಮ ಸರಕಾರದಲ್ಲಿ ರೈತರು, ನೇಕಾರರು, ಮೀನುಗಾರರ ಮಕ್ಕಳಿಗೆ ವಿದ್ಯಾಸಿರಿ ಯೋಜನೆ ಜಾರಿ ಮಾಡಲಾಗಿದ್ದು, ೧೨ ಲಕ್ಷ ಟೈಲರ್ ಮಕ್ಕಳಿಗೆ ವಿದ್ಯಾಸಿರಿ ಯೋಜನೆಯನ್ನು ವಿಸ್ತರಣೆ ಮಾಡುವ ಘೋಷಣೆ ಮಾಡಲಾಗಿದೆ. ಗ್ರಾ.ಪಂ.ಸದಸ್ಯರ ಗೌರವಧನ ಹೆಚ್ಚಳಕ್ಕೆ ಹೋರಾಟ ಮಾಡುತ್ತಾ ಬಂದಿದ್ದು, ಅದಕ್ಕಾಗಿ ಮುಖ್ಯಮಂತ್ರಿಗಳು ೧೬೫ ಕೋ.ರೂ.ಗಳನ್ನು ಖರ್ಚು ಮಾಡಿದ್ದಾರೆ. ಜನಪರ ನಿಲುವುಗಳ ಮೂಲಕ ನಮ್ಮ ಸರಕಾರ ನಿರಂತರವಾಗಿ ಅಭಿವೃದ್ಧಿ ಯೋಜನೆಗಳನ್ನು ಘೋಷಣೆ ಮಾಡುತ್ತಾ ಬಂದಿದೆ ಎಂದು ಕೋಟ ಹೇಳಿದರು. ಅರ್ಜಿ ಹಾಕದೆ, ಕಚೇರಿಗೆ ಅಲೆದಾಡದೆ ಬಂದು ಯೋಜನೆ ಇದ್ದರೆ ಅದು ಕಿಸಾನ್  ಸಮ್ಮಾನ್ ಯೋಜನೆಯಾಗಿದ್ದು, ರಾಜ್ಯದಲ್ಲಿ ೫೩ ಲಕ್ಷ ರೂ. ಕುಟುಂಬಗಳಿಗೆ ಇದರ ಪ್ರಯೋಜನ ಲಭಿಸಿದ್ದು, ಇದು ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರಕಾರದ ಹೆಮ್ಮೆಯಾಗಿದೆ ಎಂದು ಕೋಟ ಬಣ್ಣಿಸಿದರು.

ಜಾಹೀರಾತು

ಜಗತ್ತು ನಾಯಕತ್ವ ಯಾರಿಗೆ ಎಂಬ ಪ್ರಶ್ನೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಉತ್ತರವಾಗಿ ನಿಲ್ಲುತ್ತಾರೆ. ಭಾರತದ ತಾಕತ್ತು ಏನು ಎಂಬುದನ್ನು ರಷ್ಯಾ- ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಸಾಭೀತಾಗಿದ್ದು, ಭಾರತದ ರಾಷ್ಟ್ರಧ್ವಜ ಕಂಡಾಗ ಯುದ್ಧವನ್ನೇ ನಿಲ್ಲಿಸಿ ಭಾರತೀಯ ವಿದ್ಯಾರ್ಥಿಗಳ ರಕ್ಷಣೆಗೆ ನಿಲ್ಲುತ್ತಾರೆ ಎಂದಾದರೆ ಪ್ರಧಾನಿ ಮೋದಿಯವರ ಘನತೆ ಏನು ಎಂಬುದು ಸಾಭೀತಾಗುತ್ತದೆ.

ಅನಾಥರಿಗೆ, ಅಲೆಮಾರಿಗಳು ಹಾಗೂ ಕಡುಬಡವರ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸವನ್ನು ನೀಡಲು ನಾರಾಯಣಗುರು ವಸತಿ ಶಾಲೆ ನಿರ್ಮಾಣವಾಗಲಿದೆ. ನಾರಾಯಣಗುರು ಶಾಲೆ ಶಿಲಾನ್ಯಾಸವನ್ನು ಪ್ರಧಾನಮಂತ್ರಿ ಆನ್ಲೈನ್ ನಲ್ಲಿ ಮಾಡುವಂತೆ ವಿನಂತಿಸಲಾಗುವುದು ಎಂದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ ಕಳೆದ ನಾಲ್ಕೂವರೆ ವರ್ಷಗಳಲ್ಲಿ ಜನರು ನೀಡಿದ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.

ಜಾಹೀರಾತು

ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ ಮಾತನಾಡಿ ರಾಜೇಶ್ ನಾಯ್ಕ್ ಅವರ ಪಾದಯಾತ್ರೆ ದೇಶಕ್ಕೆ ಮಾದರಿ. ಹೋದ ಕಡೆಯಲ್ಲೆಲ್ಲಾ ಉತ್ತಮ ಜನಸ್ಪಂದನೆ ದೊರಕುತ್ತಿದೆ ಎಂದರು. ಶಾಸಕ ರಾಜೇಶ್ ನಾಯ್ಕ್ ಅವರ ಕೆಲಸಗಳನ್ನು ಶ್ಲಾಘಿಸಿ, 25,000 ಮತಗಳ ಅಂತರದಿಂದ ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

ಜಾಹೀರಾತು

ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ವಿಕಾಸ ಯಾತ್ರೆ ಸಂಚಾಲಕ ದೇವದಾಸ ಶೆಟ್ಟಿ, ಸಹಸಂಚಾಲಕರಾದ ಮಾಧವ ಮಾವೆ, ಸುದರ್ಶನ ಬಜ, ಸರಪಾಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಲೀಲಾವತಿ ಧರ್ಣಪ್ಪ ಪೂಜಾರಿ, ಬಂಟ್ವಾಳ ಪುರಸಭೆ ಸದಸ್ಯೆಯರಾದ ಮೀನಾಕ್ಷಿ, ಶಶಿಕಲಾ, ದೇವಕಿ, ರೇಖಾ ಪೈ ಉಪಸ್ಥಿತರಿದ್ದರು. ಸರಪಾಡಿ ಗ್ರಾಪಂ ಸದಸ್ಯ ಧನಂಜಯ ಶೆಟ್ಟಿ ಸರಪಾಡಿ ಸ್ವಾಗತಿಸಿದರು. ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಕಾರ್ಯಕ್ರಮ ನಿರ್ವಹಿಸಿದರು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಯೋಜನೆ ಹೇಳುವುದಷ್ಟೇ ಅಲ್ಲ, ಅನುಷ್ಠಾನವನ್ನೂ ಮಾಡಿದ್ದೇವೆ: ಸರಪಾಡಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರ ಗ್ರಾಮವಿಕಾಸ ಯಾತ್ರೆಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*