ಬಂಟ್ವಾಳ

ಯಕ್ಷಮಿತ್ರರು ಕೈಕಂಬ ವತಿಯಿಂದ ಹಿರಿಯ ಹಿಮ್ಮೇಳ ಕಲಾವಿದ ದೇಲಂತಮಜಲು ಸುಬ್ರಹ್ಮಣ್ಯ ಭಟ್ ಅವರಿಗೆ ಸನ್ಮಾನ

ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬದ ಯಕ್ಷ ಮಿತ್ರರು ಆಶ್ರಯದಲ್ಲಿ ಭಾನುವಾರ ರಾತ್ರಿ ಬಿ.ಸಿ.ರೋಡಿನ ಹೊಟೇಲ್  ರಂಗೋಲಿ ಹೊರಾಂಗಣದಲ್ಲಿ 14ನೇ ವರ್ಷದ ಯಕ್ಷಗಾನ ಪ್ರದರ್ಶನದಲ್ಲಿ ಹಿಮ್ಮೇಳ ಕಲಾವಿದ ದೇಲಂತಮಜಲು ಸುಬ್ರಹ್ಮಣ್ಣ ಭಟ್‌ ಅವರನ್ನು‌ ಸನ್ಮಾನಿಸಲಾಯಿತು.

ಜಾಹೀರಾತು

ಬಿ.ಸಿ.ರೋಡಿನ ಸಿವಿಲ್ ಇಂಜಿನಿಯರ್ ಸುಧೀರ್ ಶೆಟ್ಟಿ ಅವರು ಸನ್ಮಾನ ಕಾರ್ಯ ನೆರವೇರಿಸಿದರು. ನಿವೃತ್ತ ಶಿಕ್ಷಕ ಸಂಕಪ್ಪ ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು. ಯಕ್ಷಮಿತ್ರರು ಇದೇ ಮೊದಲಿಗೆ ಹಿಮ್ಮೇಳ ಕಲಾವಿದರನ್ನು‌ ಗುರುತಿಸಿ‌ ಸನ್ಮಾನಿಸಿರುವುದು‌ ಅಭಿನಂದನೀಯವಾಗಿದೆ. ದೇಲಂತಮಜಲು ಸುಬ್ರಹ್ಮಣ್ಣ ಭಟ್‌ ಅವರು ಕಳೆದ ೪೦ ವರ್ಷಗಳಿಂದ ಯಕ್ಷಗಾನ ರಂಗಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ.ಹಿಮ್ಮೇಳ ಕಲಾವಿದ  ಮಾತ್ರವಲ್ಲ ನಾಟ್ಯದಲ್ಲು ಪ್ರವೀಣರು ಆಗಿದ್ದಾರೆ ಎಂದರು.

ಜಾಹೀರಾತು

ಹಿರಿಯ ಕಲಾವಿದ ಗೋವಿಂದ ಭಟ್ ,ಯಕ್ಷಮಿತ್ರರು ಸದಸ್ಯರಾದ ಸದಾಶಿವ ಕೈಕಂಬ,ಶಂಕರ ಶೆಟ್ಟಿ,ವಿಶ್ವನಾಥ,ಭುಜಂಗ ಸಾಲಿಯಾನ್,ಸದಾನಂದ ಶೆಟ್ಟಿ ರಂಗೋಲಿ ವೇದಿಕೆಯಲ್ಲಿದ್ದರು. ಕಿಶೋರ್ ಭಂಡಾರಿ‌ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಹನುಮಗಿರಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿಯಿಂದ “ಭಾರತ ಜನನಿ”ಎಂಬ ಯಕ್ಷಗಾನ ಬಯಲಾಟವು ನಡೆಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ