ಬಂಟ್ವಾಳ

ಜೇಸಿ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷೆಯಾಗಿ ಗಾಯತ್ರಿ ಲೋಕೇಶ್: 30ರಂದು ಪದಗ್ರಹಣ

ಜಾಹೀರಾತು

ಬಂಟ್ವಾಳ: ಜೇಸಿಐ ಜೋಡುಮಾರ್ಗ ನೇತ್ರಾವತಿಯ 2023 ನೇ ಸಾಲಿನ ಅಧ್ಯಕ್ಷರಾಗಿ ಗಾಯತ್ರಿ ಲೋಕೇಶ್ ಆಯ್ಕೆಯಾಗಿದ್ದು, 30ರಂದು ಬಿ.ಸಿ.ರೋಡಿನ ರೋಟರಿ ಸಭಾಂಗಣದಲ್ಲಿ ಪದಗ್ರಹಣ ಸಂಜೆ ನಡೆಯಲಿದೆ.

ಘಟಕದ ಕಾರ್ಯದರ್ಶಿಯಾಗಿ ರಮ್ಯಾ, ಕೋಶಾಧಿಕಾರಿಯಾಗಿ ದೀಪ್ತಿ ಶ್ರೀನಿಧಿ ಹಾಗು ಘಟಕದ ಉಪಾಧ್ಯಕ್ಷರಾಗಿ ಸುಬ್ರಹ್ಮಣ್ಯ ಪೈ, ಕಿಶನ್ ಎನ್ ರಾವ್, ಅಮಿತಾ ಹರ್ಷರಾಜ್, ಡಾ.ವಿನಾಯಕ್ ಕೆ.ಎಸ್., ಪ್ರಕಾಶ್ ಆಳ್ವ, ಶ್ರೀನಿಧಿ ಭಟ್ ಆಯ್ಕೆಯಾಗಿದ್ದು, ಜೇಜೇಸಿ ಅಧ್ಯಕ್ಷರಾಗಿ ರಶ್ಮಿತಾ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಹರಿಶ್ಚಂದ್ರ ಆಳ್ವ, ಹರ್ಷರಾಜ್, ಡಾ.ಧೀರಜ್ ಹೆಬ್ರಿ, ರವೀಂದ್ರ ಕುಕ್ಕಾಜೆ ಆಯ್ಕೆಯಾಗಿದ್ದಾರೆ.

ನೂತನ ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜ.30 ಸೋಮವಾರ ಸಂಜೆ ಘಂಟೆ 6.30 ಕ್ಕೆ ಬಿ.ಸಿ.ರೋಡಿನ ರೋಟರಿ ಸಭಾ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾವಂತೂರು ಮಹಾಗಣಪತಿ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪದ್ಮರಾಜ ಬಲ್ಲಾಳ್ ಮಾವಂತೂರು, ಜೇಸಿಐ ವಲಯ 15ರ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಪದ ಪ್ರಧಾನ ಅಧಿಕಾರಿಯಾಗಿ ಜೇಸಿಐ ವಲಯ ಉಪಾಧ್ಯಕ್ಷ ಅಜಿತ್ ಕುಮಾರ್ ಭಾಗವಹಿಸಲಿದ್ದಾರೆ ಎಂದು ಅಧ್ಯಕ್ಷ ಹರಿಪ್ರಸಾದ್ ಕುಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

odiyoor

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.