ಜಾಹೀರಾತು
ಜಾಹೀರಾತು
ಜನವರಿ 30 ಮತ್ತು 31ರಂದು ಒಡಿಯೂರು ಕ್ಷೇತ್ರದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ, ಒಡಿಯೂರು ರಥೋತ್ಸವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರಕ್ಕೆ ಹಸಿರುವಾಣಿ ಹೊರೆಕಾಣಿಕೆ ಆಗಮಿಸಿತು. ಎಲ್ಲ ಭಾಗಗಳಿಂದ ಬಂದ ವಾಹನಗಳು ಕನ್ಯಾನದಲ್ಲಿ ಸೇರಿ ಮೆರವಣಿಗೆ ಮೂಲಕ ಕ್ಷೇತ್ರಕ್ಕೆ ಆಗಮಿಸಿತು.
ಈ ಸಂದರ್ಭ ಸ್ವಾಗತಿಸಿ, ಆಶೀರ್ವಚನ ನೀಡಿದ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿ, ಉಗ್ರಾಣದಲ್ಲಿ ದೀಪ ಬೆಳಗಿಸಿ ಶುಭ ಹಾರೈಸಿದರು. ಸಾಧ್ವಿ ಮಾತನಾನಂದಮಯಿ, ಉದ್ಯಮಿ ವಾಮಯ್ಯ ಶೆಟ್ಟಿ ಚೆಂಬೂರು, ರೇವತಿ ವಾಮಯ್ಯ ಶೆಟ್ಟಿ, ಒಡಿಯೂರು ಶ್ರೀ ವಿವಿಧೋದ್ದೇಶ ಸಹಕಾರಿ ಅಧ್ಯಕ್ಷ ಸುರೇಶ್ ರೈ, ಒಡಿಯೂರು ಶ್ರೀಗ್ರಾಮವಿಕಾಸ ಯೋಜನೆಯ ಕಿರಣ್ ಕುಮಾರ್ ಊರ್ವ, ಪ್ರಮುಖರಾದ ಲಿಂಗಪ್ಪ ಗೌಡ, ಸರ್ವಾಣಿ ಪಿ.ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಅಶೋಕ್ ಕುಮಾರ್, ಸೇರಾಜೆ ಗಣಪತಿ ಭಟ್, ಯಶವಂತ ವಿಟ್ಲ, ಮಧುಕಿರಣ್, ರಾಧಾಕೃಷ್ಣ ಪಕ್ಕಳ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ತುಳುನಾಡ ಜಾತ್ರೆ ಹಿನ್ನೆಲೆ: ಒಡಿಯೂರು ಸಂಸ್ಥಾನಕ್ಕೆ ಹರಿದುಬಂದ ಹೊರೆಕಾಣಿಕೆ"