ನೆಲ, ಜಲಕ್ಕೆ ಅಪಾಯವಾದರೆ, ತುಳು ಬದುಕಿಗೇ ವಿನಾಶದ ಕರೆಗಂಟೆ – ಒಡಿಯೂರಿನಲ್ಲಿ ನಡೆದ ತುಳು ತುಲಿಪು ವಿಚಾರ ಮಂಥನದಲ್ಲಿ ಅಭಿಪ್ರಾಯ

ಜಾಹೀರಾತು

ನೆಲ, ಜಲಕ್ಕೆ ಅಪಾಯ ಉಂಟಾದರೆ, ಕರಾವಳಿ ಕರ್ನಾಟಕದ ಇಡೀ ತುಳು ಸಂಸ್ಕೃತಿಗೂ ಹೊಡೆತ ಬೀಳುತ್ತದೆ ಎಂದು ಒಡಿಯೂರಿನಲ್ಲಿ ಶ್ರೀ ಗುರುದೇವಾನಂದ ಸ್ವಾಮೀಜಿ ಸಾನಿಧ್ಯದಲ್ಲಿ ಸೋಮವಾರ ನಡೆದ ತುಳು ಸಾಹಿತ್ಯ ಸಮ್ಮೇಳನದಲ್ಲಿ ನೆಲ, ಜಲ, ನಲಿಕೆ, ತೆಲಿಕೆ ಬಗ್ಗೆ ನಡೆದ ‘ತುಳು ತುಳಿಪು’ ವಿಚಾರ ಮಂಥನದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಸಮ್ಮೇಳನ ಅಧ್ಯಕ್ಷರಾದ ಹಿರಿಯ ಸಾಹಿತಿ ಡಾ. ವಸಂತಕುಮಾರ ಪೆರ್ಲ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೂಡಬಿದರೆ ಆಳ್ವಾಸ್ ಕಾಲೇಜಿನ ಉಪನ್ಯಾಸಕ ಡಾ. ಯೋಗೀಶ್ ಕೈರೋಡಿ ಮಾತನಾಡಿ ನೆಲಮೂಲವಾದ ಆಚರಣೆ ನಮ್ಮ ಬದುಕಿನಲ್ಲಿ ಹಾಸುಹೊಕ್ಕಾಗಿದ್ದು, ಸತ್ಯ ಧರ್ಮ ಎಂಬುದು ತುಳುನಾಡಿನ ಮೌಲ್ಯ ಮತ್ತು ಶಕ್ತಿಗಳು ಎಂದರು. ನೆಲದ ಬಗ್ಗೆ ತುಳುವರಿಗೆ ಪೂಜನೀಯ ಭಾವನೆಯಿದ್ದು, ಆರಾಧನೆ – ಆಚರಣೆಗಳ ಮೂಲಕ ಕೃಷಿ ಮಾಡಲಾಗುತ್ತಿತ್ತು. ನೆಲಮೂಲ ಆಚರಣೆಯಲ್ಲಿರುವ ತುಳುನಾಡಿನಲ್ಲಿ ಆಹಾರಕ್ಕೆ ಕೊರತೆ ಬಂದರೆ ವಿಷಕ್ಕಿಂತ ಅಪಾಯಕಾರಿ ಎಂಬ ಕಲ್ಪನೆಯಿತ್ತು. ಇಂದು ನೆಲವನ್ನು ನೋಡುವ ದೃಷ್ಠಿ ಬದಲಾಗಿದ್ದು, ಪೂಜನೀಯ ಭಾವನೆ ಕಡಿಮೆಯಾಗಿ ವಾಣಿಜ್ಯದತ್ತ ವಾಲುತ್ತಿದೆ ಎಂದರು.

ಹಿರಿಯ ಪತ್ರಕರ್ತ ಯು. ಕೆ. ಕುಮಾರನಾಥ್ ಮಾತನಾಡಿ ನೇತ್ರಾವತಿ ನದಿ ತಿರುವು ಯೋಜನೆಗಳು ಇಡೀ ಜಲಮೂಲಕ್ಕೆ ಅಪಾಯಕಾರಿಯಾಗಿದೆ. ಕೈಗಾರಿಕೀಕರಣದ ಮೂಲಕ ನದಿ ಮೂಲಗಳಿಗೆ ಕೈಹಾಕಿರುವುದು ಮನುಕುಲಕ್ಕೆ ಅಪಾಯದ ಸೂಚಕವಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀರಿನ ಮೂಲಗಳಾದ ಕೆರೆಗಳು ಮಾಯವಾಗುತ್ತಿವೆ. ನದಿ ತಿರುವಿನಂತಹ ಕಾರ್ಯಗಳು ಭವಿಷ್ಯದಲ್ಲಿ ಪರಿಸರಕ್ಕೆ ಮಾರಕವಾಗಿದೆ. ಆಧುನಿಕತೆಯ ಹೆಸರಿನಲ್ಲಿ ನೀರನ್ನು ಅನಾವಶ್ಯಕವಾಗಿ ಪೋಲು ಮಾಡಲಾಗುತ್ತಿದೆ. ಕುಡಿಯುವ ನೀರಿನ ಮೌಲ್ಯವನ್ನು ಅರಿತು ಬಳಸುವ ಕಾರ್ಯವಾಗಬೇಕು ಎಂದು ಹೇಳಿದರು.

ದೈವ ನರ್ತಕ ಕಿಟ್ಟು ಕಲ್ಲುಗುಡ್ಡೆ ಮಾತನಾಡಿ ನೆಲ – ಜಲ ಸರಿಯಿದ್ದಾಗ ಸಮಾಜದಲ್ಲಿ ಸಂತೋಷ ಉಳಿಯುತ್ತದೆ. ದುಡಿ ನಲಿಕೆಯಿಂದ – ಭರತನಾಟ್ಯದವರೆಗೆ ವಿವಿಧ ನೃತ್ಯ ಪ್ರಾಕಾರಗಳಿದ್ದು, ಜನಪದ ಕಲೆಯ ಒಳಗೆ ಬದುಕಿನ ಸಾರ ಹುದುಗಿದೆ. ವೈಜ್ಞಾನಿಕ ಜೀವನ ಹಾಗೂ ಔಧ್ಯೋಗಿಕರಣಕ್ಕೆ ಮಾರುಹೋಗಿ, ತುಳುನಾಡಿನ ನೃತ್ಯ ಪ್ರಾಕಾರಗಳು ನಶಿಸುತ್ತಿದೆ. ತುಳುನಾಡಿನ ಮಣ್ಣಿನ ಗುಣದಿಂದ ಸಂಸ್ಕೃತಿಗೆ ಅಳಿವಿಲ್ಲ ಎಂದು ತಿಳಿಸಿದರು. ರಾಜಶ್ರೀ ಟಿ. ರೈ ಸ್ವಾಗತಿಸಿದರು. ಸದಾಶಿವ ಶೆಟ್ಟಿ ಕನ್ಯಾನ ವಂದಿಸಿದರು. ವಿಜಯಾ ಶೆಟ್ಟಿ ಸಾಲೆತ್ತೂರು ಕಾರ್ಯಕ್ರಮ ನಿರೂಪಿಸಿದರು.

odiyoor

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ನೆಲ, ಜಲಕ್ಕೆ ಅಪಾಯವಾದರೆ, ತುಳು ಬದುಕಿಗೇ ವಿನಾಶದ ಕರೆಗಂಟೆ – ಒಡಿಯೂರಿನಲ್ಲಿ ನಡೆದ ತುಳು ತುಲಿಪು ವಿಚಾರ ಮಂಥನದಲ್ಲಿ ಅಭಿಪ್ರಾಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*