ವಿಟ್ಲ

ಒಡಿಯೂರು ತುಳು ಸಾಹಿತ್ಯ ಸಮ್ಮೇಳನದಲ್ಲಿ ಐವರು ಸಾಧಕರಿಗೆ ತುಳುಸಿರಿ ಮಾನಾದಿಗೆ

PHOTO COURTESY: click point modeling studio, Kanyana,

ಜಾಹೀರಾತು

ಒಡಿಯೂರಿನಲ್ಲಿ ನಡೆದ ತುಳುನಾಡ ಜಾತ್ರೆ-ಶ್ರೀ ಒಡಿಯೂರು ರಥೋತ್ಸವ ಹಿನ್ನೆಲೆಯಲ್ಲಿ ನಡೆದ ತುಳು ಸಾಹಿತ್ಯ ಸಮ್ಮೇಳನದಲ್ಲಿ ಮಂಗಳವಾರ ಐವರು ಸಾಧಕರಿಗೆ ತುಳು ಸಿರಿ ಮಾನಾದಿಗೆ (ಸನ್ಮಾನ) ಗೌರವಾರ್ಪಣೆ ಮಾಡಲಾಯಿತು. ಶ್ರೀ ಗುರುದೇವಾನಂದ ಸ್ವಾಮೀಜಿ, ಸಾಧ್ವಿ ಶ್ರೀ ಮಾತಾನಂದಮಯೀ, ಹಿರಿಯ ಸಾಹಿತಿ ಸಮ್ಮೇಳನಾಧ್ಯಕ್ಷ ಡಾ. ವಸಂತ ಕುಮಾರ ಪೆರ್ಲ, ಉದ್ಯಮಿಗಳಾದ ಸದಾಶಿವ ಶೆಟ್ಟಿ ಕುಳೂರು, ವಾಮಯ್ಯ ಬಿ.ಶೆಟ್ಟಿ, ದಯಾನಂದ ಹೆಗ್ಡೆ, ಒಡಿಯೂರು ಸೌಹಾರ್ದ ಸಹಕಾರಿ ಅಧ್ಯಕ್ಷ ಸುರೇಶ್ ರೈ ಹಾಗೂ ಸಂಜೀವಿನಿ ಆಸ್ಪತ್ರೆ ಮುಂಬೈನ ಆಡಳಿತ ನಿರ್ದೇಶಕ ಡಾ. ಸುರೇಶ್ ರಾವ್ ಸಹಿತ ಗಣ್ಯರ ಸಮಕ್ಷಮ ಹಿರಿಯ ಮೃದಂಗವಾದಕ ಶತಾಯುಷಿ ವಿದ್ವಾನ್ ಬಾಬು ರೈ, ಸಾಹಿತಿ ಸಂಶೋಧಕಿ ಡಾ. ಸಾಯಿಗೀತಾ ತೋಕೂರುಗುತ್ತು, ಸಹಕಾರಿ ಎಸ್.ಬಿ.ಜಯರಾಮ ರೈ, ತುಳು ವಸ್ತು ಸಂಗ್ರಾಹಕ ಸುಧಾಕರ ಶೆಟ್ಟಿ ಹಿರ್ಗಾನ, ಸಾವಯವ ಕೃಷಿಕ ರಾಮಣ್ಣ ಗೌಡ ಅವರನ್ನು ಗೌರವಿಸಲಾಯಿತು. ಯಶವಂತ ವಿಟ್ಲ ಕಾರ್ಯಕ್ರಮ ನಿರ್ವಹಿಸಿದರು.  PHOTO COURTESY: click point modeling studio, Kanyana,

odiyoor

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.