ಒಡಿಯೂರಿನಲ್ಲಿ ತುಳುನಾಡ ಜಾತ್ರೆ – ತುಳು ಸಾಹಿತ್ಯ ಸಮ್ಮೇಳನ ಸಮಾರೋಪ, ಪ್ರಶಸ್ತಿ ಪ್ರದಾನ, ನಾಟಕೋತ್ಸವದ ಬಹುಮಾನ ವಿತರಣೆ

ಜಾಹೀರಾತು

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂ, ಶ್ರೀ ದತ್ತಾಂಜನೇಯ ಕ್ಷೇತ್ರದಲ್ಲಿ ಜನವರಿ ೩೦ ಮತ್ತು ೩೧ರಂದು ನಡೆದ ತುಳುನಾಡ ಜಾತ್ರೆ ಶ್ರೀ ಒಡಿಯೂರು ರಥೋತ್ಸವದ ಸಮಾರೋಪ ಹಿನ್ನೆಲೆಯಲ್ಲಿ ಮಂಗಳವಾರ ತುಳುಸಾಹಿತ್ಯ ಸಮ್ಮೇಳನದ ಧರ್ಮಸಭೆ ಹಾಗೂ ತುಳುಸಿರಿ ಪ್ರಶಸ್ತಿ ಪ್ರದಾನ, ತುಳು ನಾಟಕೋತ್ಸವದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ನಡೆಯಿತು.

ಜಾಹೀರಾತು

 ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಶ್ರೀ ಗುರುದೇವಾನಂದ ಸ್ವಾಮೀಜಿ, ೧೦೮ ಅಡಿ ಎತ್ತರದ ಹನುಮಾನ್ ವಿಗ್ರಹದ ನಿರ್ಮಾಣ ಸಹಿತ ಕ್ಷೇತ್ರದಲ್ಲಾಗುವ ಪ್ರಮುಖ ಯೋಜನೆಗಳ ಕುರಿತು ಮಾಹಿತಿ ನೀಡಿದರು. ದುಶ್ಚಟಮುಕ್ತ ಸಮಾಜ ನಿರ್ಮಾಣ ಆಗಬೇಕು ಎಂಬ ಆಶಯ ವ್ಯಕ್ತಪಡಿಸಿದ ಸ್ವಾಮೀಜಿ, ಮನೆ ಮನೆಯಲ್ಲಿ ಧಾರ್ಮಿಕ ಶಿಕ್ಷಣದ ಪಾಠದ ಪ್ರಸ್ತುತತೆ ಮತ್ತು ಅಗತ್ಯಗಳ ಕುರಿತು ಜ್ಞಾಪಿಸಿದರು. ಆರೋಗ್ಯಪೂರ್ಣ ಬದುಕು ನಮಗೆ ಆಗಬೇಕು ಎಂದಾದರೆ, ಶ್ರದ್ಧಾಕೇಂದ್ರಗಳು ಬಲಗೊಳ್ಳಬೇಕು, ಇಂದು ಹೃದಯಾಘಾತದಿಂದ ಸಾವುಗಳು ಹೆಚ್ಚಾಗುತ್ತಿರುವ ಕುರಿತು ಉಲ್ಲೇಖಿಸಿದ ಅವರು, ನಮ್ಮ ಜೀವನಶೈಲಿಯನ್ನು ಬದಲಾಯಿಸಿಕೊಳ್ಳಬೇಕು. ಭಾರತ ದೇಶದ ಅಂತಸತ್ವ ಎಂದರೆ ಆಧ್ಯಾತ್ಮ ಎಂದು ಹೇಳಿದರು.ಈ ಸಂದರ್ಭ ಸಾಧ್ವಿ ಶ್ರೀ ಮಾತಾನಂದಮಯೀ ದಿವ್ಯ ಸಾನಿಧ್ಯ ವಹಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಡಾ.ವಸಂತಕುಮಾರ ಪೆರ್ಲ ವಹಿಸಿದ್ದರು.

ಜಾಹೀರಾತು

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ತುಳು ರಾಜ್ಯಭಾಷೆ ಆಗಬೇಕು ಎಂಬುದು ಎಲ್ಲರ ಪ್ರಬಲ ಇಚ್ಛೆಯಾಗಿದ್ದು, ತುಳುವನ್ನು ಎಂಟನೇ ಪರಿಚ್ಛೇದ ಸೇರ್ಪಡೆಗೆ ಪ್ರಯತ್ನಗಳು ಆಗುತ್ತಿದೆ, ಮುಂದೆಯೂ ನಮ್ಮದೇ ಸರಕಾರ ಬರಲಿದ್ದು, ನಾನು ಮತ್ತು ಶಾಸಕ ರಾಜೇಶ್ ನಾಯ್ಕ್ ಒಡಿಯೂರು ಶ್ರೀಗಳ ಕಲ್ಪನೆಯ ಗ್ರಾಮರಾಜ್ಯವನ್ನು ಸಾಕಾರಗೊಳಿಸುವುದಕ್ಕೆ ನೆರವಾಗುತ್ತೇವೆ ಎಂದರು.

ಜಾಹೀರಾತು

ಮನೆಮನೆಗಳಲ್ಲಿ ರಾವಣ ಸೃಷ್ಟಿ ಆಗುವ ಕಾರಣ ಮನೆಮನೆಗಳಲ್ಲಿ ರಾಮನ ಸೃಷ್ಟಿ ಆಗಬೇಕು ಎಂಬ ಗಾಂಜಿ ಅವರ  ಗ್ರಾಮರಾಜ್ಯದ ಪರಿಕಲ್ಪನೆ ಗ್ರಾಮಸ್ವರಾಜ್ಯ ಮೂಲಕ ಒಡಿಯೂರು ಶ್ರೀಗಳು ನನಸು ಮಾಡಿದ್ದಾರೆ. ಭಾರತವಿಂದು ಸಾಂಸ್ಕೃತಿಕವಾಗಿ ಎದ್ದು ನಿಲ್ಲುವ ಕಾಲಘಟ್ಟದಲ್ಲಿ ನಾವಿದ್ದೇವೆ, ತುಳು, ಭಾಷೆ, ಪರಂಪರೆಗೆ ಧರ್ಮಸ್ಥಳ ಮತ್ತು ಒಡಿಯೂರು ಅಪಾರ ಕೊಡುಗೆ ನೀಡಿದೆ ಎಂದು ಹೇಳಿದರು.

ಈ ಸಂದರ್ಭ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಇಂದು ಧಾರ್ಮಿಕ ಕ್ಷೇತ್ರಗಳ ಸಂಪರ್ಕ ರಸ್ತೆಗಳ ಅಭಿವೃದ್ಧಿ ಬಂಟ್ವಾಳ ಕ್ಷೇತ್ರದಾದ್ಯಂತ ಆಗಿದ್ದು, ಅವುಗಳಲ್ಲಿ ಒಡಿಯೂರು ಕ್ಷೇತ್ರಕ್ಕೆ ಬರುವ ರಸ್ತೆಗಳೂ ಸೇರಿವೆ ಎಂದರು.

ಹೇರಂಭ ಇಂಡಸ್ಟ್ರೀಸ್ ಮುಂಬೈನ ಮಾಲೀಕ ಸದಾಶಿವ ಶೆಟ್ಟಿ ಕುಳೂರು ಕನ್ಯಾನ, ಮುಂಬೈ ಸಂಜೀವಿನಿ ಆಸ್ಪತ್ರೆ ಆಡಳಿತ ನಿರ್ದೇಶಕ ಡಾ.ಸುರೇಶ್ ರಾವ್,  ವಿಜಯಲಕ್ಷ್ಮಿ  ರಾವ್, ಉದ್ಯಮಿ ವಾಮಯ್ಯ ಬಿ.ಶೆಟ್ಟಿ, ಉದ್ಯಮಿ ದಯಾನಂದ ಹೆಗ್ಡೆ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಎ.ಸುರೇಶ್ ರೈ ಉಪಸ್ಥಿತರಿದ್ದರು.ರೇಣುಕಾ ಎಸ್. ರೈ ಪ್ರಾರ್ಥಿಸಿದರು. ಪ್ರಕಾಶ್ ಕೆ. ಶೆಟ್ಟಿ ಪೇಟೆಮನೆ ಸ್ವಾಗತಿಸಿದರು. ತುಳುಕೂಟ ಅಧ್ಯಕ್ಷ ಯಶವಂತ ವಿಟ್ಲ ಕಾರ್ಯಕ್ರಮ ನಿರೂಪಿಸಿದರು. ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಸಂಚಾಲಕರಾದ ಮಾಂತೇಶ್ ಬಂಡಾರಿ ವಂದಿಸಿದರು.

ಜಾಹೀರಾತು

ಇದೇ ಸಂದರ್ಭ ಮಲಾರು ಜಯರಾಮ ರೈ ಬರೆದ ಒಡಿಯೂರು ಶ್ರೀಗಳ ಪ್ರವಚನಗಳ ದೃಷ್ಟಾಂತ ಕತೆಗಳ ಮಾಲಿಕೆ ’ಕತೆ ಪಂಡೆನ ಜೋಗಿ’ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.

ಹಿರಿಯ ಮೃದಂಗ ವಾದಕ ವಿದ್ವಾನ್ ಬಾಬು ರೈ ಕಾಸರಗೋಡು, ತುಳು ಸಾಹಿತಿ ಡಾ. ಸಾಯಿಗೀತಾ ತೋಕೂರುಗುತ್ತು, ಸಹಕಾರಿಯ ಸಾಧಕ ಎಸ್.ಬಿ. ಜಯರಾಮ ರೈ, ತುಳುನಾಡಿನ ಹಳೇಯ ವಸ್ತುಗಳ ಸಂಗ್ರಹಕ್ಕಾಗಿ ಸುಧಾಕರ ಶೆಟ್ಟಿ ಹಿರ್ಗಾನ, ಸಾವಯವ ಕೃಷಿಗಾಗಿ ರಾಮಣ್ಣ ಗೌಡ ಕಣಿಯೂರುರವರಿಗೆ ತುಳುಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.  ಬಳಿಕ ಒಡಿಯೂರು ತುಳು ನಾಟಕೋತ್ಸವ ತುಳು ನಾಟಕ ಪಂಥೊದ ಇನಾಮು ಪಟ್ಟುನ ಲೇಸ್ ನಡೆಯಿತು. ನಾಟಕೋತ್ಸವದ ವಿಜೇತರ ಪಟ್ಟಿಯನ್ನು ಕದ್ರಿ ನವನೀತ ಶೆಟ್ಟಿ ಓದಿ, ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ವೈಷ್ಣವಿ ನಾಟ್ಯಾಲಯ ಪುತ್ತೂರು ಇವರಿಂದ ನೃತ್ಯಾರ್ಪಣಂ ಕಾರ್ಯಕ್ರಮ, ಜರ್ನಿ ಥೇಟರ್ ಗ್ರೂಪ್ಸ್ ನಾಟಕ ಗೋಂದೋಳು ಪ್ರದರ್ಶನ ನಡೆಯಿತು. ರಾತ್ರಿ ವೈಭವದ ರಥಯಾತ್ರೆ ಸಂಪನ್ನಗೊಂಡಿತು.

ಜಾಹೀರಾತು

odiyoor

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಒಡಿಯೂರಿನಲ್ಲಿ ತುಳುನಾಡ ಜಾತ್ರೆ – ತುಳು ಸಾಹಿತ್ಯ ಸಮ್ಮೇಳನ ಸಮಾರೋಪ, ಪ್ರಶಸ್ತಿ ಪ್ರದಾನ, ನಾಟಕೋತ್ಸವದ ಬಹುಮಾನ ವಿತರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*