ಅಲ್ಲಿಪಾದೆ ಸಂತ ಅಂತೋನಿಯವರ ದೇವಾಲಯ: ಫೆ.13ರಂದು ನವೀಕೃತ ಚರ್ಚ್, ನೂತನ ಗುರುನಿವಾಸ ಉದ್ಘಾಟನೆ

ಬಂಟ್ವಾಳ: ಅಲ್ಲಿಪಾದೆ ಸಂತ ಅಂತೋನಿಯವರ ದೇವಾಲಯದಲ್ಲಿ ನವೀಕೃತ ಚರ್ಚ್ ಹಾಗೂ ನೂತನ ಗುರುನಿವಾಸದ ಉದ್ಘಾಟನೆ ಫೆ.13ರಂದು ಬೆಳಗ್ಗೆ 9.30ಕ್ಕೆ ನಡೆಯಲಿದೆ ಎಂದು ಚರ್ಚ್ ನ ಧರ್ಮಗುರುಗಳಾದ ವಂ.ಫಾ.ಫ್ರೆಡ್ರಿಕ್ ಮೊಂತೇರೋ ಹೇಳಿದರು.

ಜಾಹೀರಾತು

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯ ಧರ್ಮಾಧ್ಯಕ್ಷ ಅತಿವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಉದ್ಘಾಟನೆ ನೆರವೇರಿಸಿ, ಆಶೀರ್ವಚನ ನೀಡುವರು. ಗೌರವ ಅತಿಥಿಗಳಾಗಿ ಕ್ಯಾಲಿಕಟ್ ಧರ್ಮಪ್ರಾಂತ್ಯದ ಶ್ರೇಷ್ಠ ಧರ್ಮಗುರುಗಳಾದ ಅತಿವಂದನೀಯ ಮೊನ್ಸಿಂಜೊರ್ ಡಾ. ಜೆನ್ಸನ್ ಪುತ್ತನ್ ವಿತ್ತಿಲ್, ಬಂಟ್ವಾಳ ವಲಯ ಪ್ರಧಾನ ಧರ್ಮಗುರುಗಳಾದ ಅತಿ ವಂದನೀಯ ಫಾ. ವಲೇರಿಯನ್ ಡಿಸೋಜ, ಸಿ್ಟರ್ಸ್ ಆಫ್ ಸೈಂಡ್ ಜೋಸೆಫ್ ಕ್ಲುನಿ ಪ್ರೊವಿನ್ಶಿಯಲ್ ಸುಪೀರಿಯರ್ ಆಗಿರುವ ಅತಿ ವಂದನೀಯ ಧರ್ಮಭಗಿನಿ ಅನ್ನೀಸ್ ಕಲ್ಲರಕಲ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನಪರಿಷತ್ತು ಸದಸ್ಯ ಕೆ.ಹರೀಶ್ ಕುಮಾರ್, ಅಲ್ಲಿಪಾದೆ ಕ್ಲೂನಿ ಕಾನ್ವೆಂಟ್ ಸುಪೀರಿಯರ್ ವಂ.ಧರ್ಮಭಗಿನಿ ನರ್ಸಿಜಾ ಸಿಕ್ವೇರಾ ಭಾಗವಹಿಸುವರು ಎಂದರು.

ಜಾಹೀರಾತು

ಉದ್ಘಾಟನೆಗೆ ಪೂರ್ವಭಾವಿಯಾಗಿ ಭಾನುವಾರ ಫೆ.12ರ ಸಂಜೆ 3.30ಕ್ಕೆ ಮೊಡಂಕಾಪು ಚರ್ಚ್ ವಠಾರದಿಂದ ಸರ್ವಧರ್ಮೀಯರ ಹೊರೆಕಾಣಿಕೆ, 14ರಂದು ಧಾರ್ಮಿಕರ ದಿನ, ಸಂಜೆ ಸೌಹಾರ್ದ ಕೂಟ, ಬಳಿಕ ನಮಸ್ಕಾರ ಮಾಸ್ಟ್ರೆ ಎಂಬ ದೇವದಾಸ್ ಕಾಪಿಕಾಡ್ ವಿರಚಿತ ನಾಟಕ, 15ರಂದು ಸಂತ ಅಂತೋನಿಯವರ ವಾರ್ಷಿಕ ಹಬ್ಬ, 16ರಂದು ದಾನಿಗಳ ಹಾಗೂ ಕಾರ್ಮಿಕರ ದಿನ, 17ರಂದು ಮಕ್ಕಳು ಹಾಗೂ ಯುವಜನರ ದಿನ, 18ರಂದು ಕ್ರೈಸ್ತ ಕುಟುಂಬಗಳ ದಿನ, 19ರಂದು ಸಾಮೂಹಿಕ ಪ್ರಥಮ ಪರಮಪ್ರಸಾದ ದಿನ ನಡೆಯಲಿದೆ ಎಂದರು. ಅಂದು ಸಂಜೆ ಕೊಂಕಣಿ ಸಂಗೀತ, ಕೊಮಿಡಿ ಶೋ ಇರಲಿದೆ ಎಂದು ಮಾಹಿತಿ ನೀಡಿದರು.

ನೆಲಮಟ್ಟದಿಂದ ಮೇಲಿನ ಶಿಲುಬೆಯವರೆಗೆ 85 ಅಡಿ ಎತ್ತರವಿರುವ ಇಗರ್ಜಿಯ ಕಟ್ಟಡವಿದ್ದು, 10 ಆಡಿ ಎತ್ತರವಿರುವ ಸಂತ ಅಂತೋನಿಯವರ ಅನನ್ಯ  ಪ್ರತಿಮೆ ನವೀಕೃತ ಇಗರ್ಜಿಯಲ್ಲಿರಲಿದೆ. ಭಾರತದಲ್ಲೇ ಸೇವೆಸಲ್ಲಿಸಿದ ಹಾಗೂ ಭೇಟಿ ನೀಡಿದ ಸಂತರ ಪ್ರತಿಮೆಗಳು.ವರ್ಣರಂಜಿತ ಗಾಜಿ ನಲ್ಲಿ ಮೇರಿಮಾತೆಯ ಜಪಸರದ 20 ರಹಸ್ಯಗಳು,  ಇಗರ್ಜಿಯ ಒಳಗೆ ಪ್ರಾಚೀನ ಶೈಲಿಯ ಮರದ ಕೆತ್ತನೆ, ಮಧ್ಯದಲ್ಲಿ ಸಂತ ಅಂತೋನಿಯವರ 13 ಪವಾಡಗಳ ದೃಶ್ಯಗಳು, ಗ್ಯಾಲರಿಗಳ ಎರಡೂ ಪಾರ್ಶ್ವಗಳಲ್ಲಿ ವೃತ್ತಾಕಾರದಲ್ಲಿ ವಿಶಿಷ್ಟ ರೀತಿಯಲ್ಲಿ ಚಿತ್ರಿಸಿದ ಕ್ರಿಸ್ತನ ಶಿಲುಬೆ ಹಾದಿಯ 14 ದೃಶ್ಯಗಳು ಇರಲಿವೆ ಎಂದರು.

ಈ ಸಂದರ್ಭ ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ನವೀನ್ ಮೊರಾಸ್, ಕಾರ್ಯದರ್ಶಿ ಕಿರಣ್ ನೊರೊನ್ಹಾ, ಸಂಯೋಜಕರಾದ ಲಾರೆನ್ಸ್ ಡಿಸೋಜ, ಪ್ರಮುಖರಾದ ಲಿಯೋ ಫೆರ್ನಾಂಡೀಸ್, ಪ್ರವೀಣ್ ಪಿಂಟೋ, ಬೆನೆಡಿಕ್ಟ್ ವಾಲ್ಡರ್, ಮೆಲ್ ರೋಯ್ ಡಿಸೋಜ, ಮಡ್ತಿನಿ ಸ್ವಿಕೇರ, ಡೆನ್ಜಿಲ್ ನೊರೊನ್ಹಾ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅಲ್ಲಿಪಾದೆ ಸಂತ ಅಂತೋನಿಯವರ ದೇವಾಲಯ: ಫೆ.13ರಂದು ನವೀಕೃತ ಚರ್ಚ್, ನೂತನ ಗುರುನಿವಾಸ ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*