ಬಂಟ್ವಾಳ

ಸಮಾಜ ಸೇವಾ ಸಹಕಾರಿ ಸಂಘ ಮುಡಿಪು ಶಾಖೆ ಫೆ.12ರಂದು ಸ್ಥಳಾಂತರ, ಡಾ. ಅಮ್ಮೆಂಬಳ ಬಾಳಪ್ಪ ಪ್ರಶಸ್ತಿ ಪ್ರದಾನ

ಬಂಟ್ವಾಳ: ಮುಡಿಪುವಿನ ಬಾಡಿಗೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಸಮಾಜ ಸೇವಾ ಸಹಕಾರಿ ಸಂಘ ನಿ. ಬಂಟ್ವಾಳ ಇದರ ಶಾಖೆ ಶಂಕರಿ ಕಾಂಪ್ಲೆಕ್ಸ್ ನಲ್ಲಿರುವ ಸ್ವಂತ ಕಟ್ಟಡಕ್ಕೆ ಫೆ. 12 ರಂದು ಭಾನುವಾರ ಸ್ಥಳಾಂತರಗೊಳ್ಳಲಿದೆ ಎಂದು ಬ್ಯಾಂಕ್  ಅಧ್ಯಕ್ಷ ಸುರೇಶ್ ಕುಲಾಲ್ ತಿಳಿಸಿದರು.

ಜಾಹೀರಾತು

ಅವರು ಬ್ಯಾಂಕ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಳೆದ 19 ವರ್ಷಗಳಿಂದ ಬಾಡಿಗೆ ಕಟ್ಟಡ ದಲ್ಲಿ ಕಾರ್ಯಚರಿಸುತ್ತಿದ್ದ ಮುಡಿಪು 5 ನೇ ಶಾಖೆಯ ಕಟ್ಟಡವನ್ನು ಮುಡಿಪು ಶಂಕರಿ ಕಾಂಪ್ಲೆಕ್ಸ್ ನ ಒಂದನೇ ಮಹಡಿಯಲ್ಲಿ ಸುಮಾರು 79.23 ಅಡಿ ವಿಸ್ತೀರ್ಣದ ಕಟ್ಟಡ ವನ್ನು ಖರೀದಿಸಿ ಅದರಲ್ಲಿ ಕಾರ್ಯಚರಿಸಲಿದೆ ಎಂದು ತಿಳಿಸಿದರು.

ಶ್ರೀ ಧಾಮ‌ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ದೀಪಪ್ರಜ್ವಲನೆ ಹಾಗೂ ಆಶ್ರೀರ್ವಚನ ನೀಡಲಿದ್ದಾರೆ. ವಿರೋಧ ಪಕ್ಷದ ಉಪನಾಯಕ, ಶಾಸಕ ಯು.ಟಿ.ಖಾದರ್ ಸಹಿತ ಅನೇಕ ಗಣ್ಯರು ಪಾಲ್ಗೊಳ್ಳಲಿರುವುದಾಗಿ ಅವರು ತಿಳಿಸಿದರು.

ಜಾಹೀರಾತು

ಸಂಘದ ಸ್ಥಾಪಕರಾದ ಡಾ. ಅಮ್ಮೆಂಬಳ ಬಾಳಪ್ಪ ಅವರ ಜನ್ಮ ಶತಾಬ್ದಿ ಸ್ಮರಣಾರ್ಥ 2022-23 ನೇ ಸಾಲಿನ ಡಾ. ಅಮ್ಮೆಂಬಳ ಬಾಳಪ್ಪ ಪ್ರಶಸ್ತಿಯನ್ನು ದೈವಗಳ ಮೂಲ್ಯಣ್ಣರಾಗಿ ದೈವಸೇವೆಯ ಕಾಯಕವನ್ನು ಕಳೆದ 47 ವರ್ಷಗಳಿಂದ ಸಾರ್ಥಕ ಸೇವೆಯನ್ನು ‌ಮಾಡಿದ ಬಾಲಕೃಷ್ಣ ಸಾಲ್ಯಾನ್ ಅವರಿಗೆ ನೀಡಿ ಗೌರವಿಸಲಾಗುವುದು ಎಂದರು.

ಸಂಘದ ಉಪಾಧ್ಯಕ್ಷ ಪದ್ಮನಾಭ ವಿ., ಸದಸ್ಯರಾದ ಜನಾರ್ದನ ಕುಲಾಲ್ ಬೊಂಡಾಲ, ಅರುಣ್ ಕುಮಾರ್ ಕೆ., ರಮೇಶ್ ಸಾಲ್ಯಾನ್ ಸಂಚಯಗಿರಿ, ನಾಗೇಶ್ ಬಾಳೆಹಿತ್ಲು, ರಮೇಶ್ ಸಾಲ್ಯಾನ್ ಕೈಕುಂಜೆ , ಜಗನ್ನಿವಾಸ ಗೌಡ, ಪ್ರಧಾನ ವ್ಯವಸ್ಥಾಪಕ ಭೋಜ ಮೂಲ್ಯ, ಸಹಾಯಕ ವ್ಯವಸ್ಥಾಪಕ ಮೋಹನ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ