ಅಲ್ಲಿಪಾದೆ ಚರ್ಚ್ ನೂತನ ಗುರುನಿವಾಸ ಉದ್ಘಾಟನೆ ಹಿನ್ನೆಲೆ: ಹೊರೆಕಾಣಿಕೆ ಮೆರವಣಿಗೆ

ಜಾಹೀರಾತು

ಬಂಟ್ವಾಳ: ಅಲ್ಲಿಪಾದೆ ಸಂತ ಅಂತೋನಿಯವರ ದೇವಾಲಯದ ನವೀಕೃತ ಚರ್ಚ್ ಹಾಗೂ ನೂತನ ಗುರುನಿವಾಸ ಉದ್ಘಾಟನೆ ಹಿನ್ನೆಲೆಯಲ್ಲಿ ಭಾನುವಾರ ಹೊರೆಕಾಣಿಕೆ ಅದ್ದೂರಿ ಮೆರವಣಿಗೆ ಮೊಡಂಕಾಪು ಚರ್ಚ್ ವಠಾರದಿಂದ ಬಲೂನು ಹಾರಿಸುವ ಮೂಲಕ ನಡೆಯಿತು.

ಜಾಹೀರಾತು

ಅಗ್ರಾರ್ ಚರ್ಚ್ ಧರ್ಮಗುರು ವಂ.ಫಾ.ಪೀಟರ್ ಡಿಸೋಜ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ವಲಯ ಪ್ರಧಾನ ಧರ್ಮಗುರು ಅತಿ ವಂದನೀಯ ಫಾ.ವಲೇರಿಯನ್ ಡಿಸೋಜ ಮುಖ್ಯ ಅತಿಥಿಗಳಾಗಿ ಮೆರವಣಿಗೆಗೆ ಚಾಲನೆ ನೀಡಿದರು.

ಈ ಸಂದರ್ಭ ಸೂರಿಕುಮೇರು ಚರ್ಚ್ ಧರ್ಮಗುರು ವಂ.ಫಾ.ಗ್ರೆಗರಿ ಪಿರೇರ, ಲೊರೆಟ್ಟೊ ಚರ್ಚ್ ಧರ್ಮಗುರು ವಂ.ಫಾ.ಫ್ರಾನ್ಸಿಸ್ ಕ್ರಾಸ್ತಾ,  ಅಮ್ಟೂರ್ ಚರ್ಚ್ ಧರ್ಮಗುರು ವಂ.ಫಾ.ಆಲ್ವಿನ್ ಡಿಕುನ್ಹ, ಪಿಡಬ್ಲ್ಯುಪಿಎನ್ ನಿರ್ದೇಶಕ ವಂ.ಫಾ.ರೂಪೇಶ್ ತಾವ್ರೊ, ಸಹಾಯಕ ಧರ್ಮಗುರು ವಂ.ಫಾ.ರಾಹುಲ್ ರಾಹುಲ್ ಡೆಕ್ಸ್ಟರ್ ಡಿಸೋಜ, ಅಲ್ಲಿಪಾದೆ ಧರ್ಮಗುರು ವಂ.ಫಾ. ಫ್ರೆಡ್ರಿಕ್ ಮೊಂತೇರೊ, ಸುಪೀರಿಯರ್ ಕ್ಲೂನಿ ಕಾನ್ವೆಂಟ್  ವಂ.ಭ. ನರ್ಸಿಜಾ ಸಿಕ್ವೇರಾ, ಮಾಜಿ ಸಚಿವ ಬಿ ರಮಾನಾಥ ರೈ,  ಪ್ರಮುಖರಾದ ಪಿಯೂಸ್.ಎಲ್ ರೊಡ್ರಿಗಸ್, ಬೇಬಿ ಕುಂದರ್, ನಾವೂರು ಗ್ರಾಪಂ ಅಧ್ಯಕ್ಷ ಉಮೇಶ್ ಕುಲಾಲ್, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ನವೀನ್ ಮೊರಾಸ್, ಪ್ರಮುಖರಾದ ಕಿರಣ್ ನೊರೊನ್ಹ, ಲಾರೆನ್ಸ್ ಡಿಸೋಜ, ಸುರೇಶ್ ಜೋರಾ ಮತ್ತಿತರರು ಉಪಸ್ಥಿತರಿದ್ದರು. ಹಣ್ಣು ಹಂಪಲು, ತರಕಾರಿ, ಅಕ್ಕಿ ಬೇಳೆಗಳನ್ನು ಹೊತ್ತ ವಾಹನಗಳೊಂದಿಗೆ ಬೈಕ್ ನಲ್ಲಿ ಚರ್ಚ್ ನ ಭಕ್ತರು ಸಾಗಿದರು. ಇದೇ ಸಂದರ್ಭ ಸಂತ ಅಂತೋನಿಯವರ ಕುರಿತ ವಿವರಗಳನ್ನು ಹೇಳುವ ಟ್ಯಾಬ್ಲೊ ಗಮನ ಸೆಳೆಯಿತು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅಲ್ಲಿಪಾದೆ ಚರ್ಚ್ ನೂತನ ಗುರುನಿವಾಸ ಉದ್ಘಾಟನೆ ಹಿನ್ನೆಲೆ: ಹೊರೆಕಾಣಿಕೆ ಮೆರವಣಿಗೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*