ಜೋಡುಮಾರ್ಗ ಜೇಸಿ ಘಟಕ ಪದಗ್ರಹಣ ಕಾರ್ಯಕ್ರಮ

ಜಾಹೀರಾತು

ಬಂಟ್ವಾಳ: ಇಲ್ಲಿನ ರೋಟರಿ ಕ್ಲಬ್ ಸಭಾಂಗಣದಲ್ಲಿ ಜೋಡುಮಾರ್ಗ ನೇತ್ರಾವತಿ ಜೇಸಿಯ ನೂತನ ಸದಸ್ಯರ ಪದಗ್ರಹಣ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜೇಸಿ ಅಧ್ಯಕ್ಷ ಹರಿಪ್ರಸಾದ್ ಕುಲಾಲ್ ಅವರು ನೂತನ ಅಧ್ಯಕ್ಷೆ ಗಾಯತ್ರಿ ಲೋಕೇಶ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಕಾರ್ಯದರ್ಶಿ ಕಿಶನ್ ಎನ್. ರಾವ್ ಅವರು ನೂತನ ಕಾರ್ಯದರ್ಶಿ ರಮ್ಯಾ ಬಿ.ಎಸ್. ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಕಾರ್ಯಕ್ರಮವನ್ನು ಮಾವಂತೂರು ಶ್ರೀ ಮಹಾಗಣಪತಿ ದೇವಸ್ಥಾನದ ಅಧ್ಯಕ್ಷ ಪದ್ಮರಾಜ ಬಲ್ಲಾಳ್ ಮಾವಂತೂರು ಉದ್ಘಾಟಿಸಿ, ಶುಭ ಹಾರೈಸಿದರು.  ಈ ಸಂದರ್ಭ ಜೇಸಿ ವಲಯ 15ರ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಜೇಸಿ ಆಂದೋಲನದಲ್ಲಿ ಯುವಜನರು ಭಾಗವಹಿಸಿ ವ್ಯಕ್ತಿತ್ವ ವಿಕಸನದ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಬಹುದು ಎಂದರು.

ವಿವಿಧ ಪದಾಧಿಕಾರಿಗಳಾದ ಸುಬ್ರಹ್ಮಣ್ಯ ಪೈ, ಕಿಶನ್ ಎನ್.ರಾವ್, ಡಾ. ವಿನಾಯಕ ಕೆ.ಎಸ್, ಅಮಿತಾ ಹರ್ಷರಾಜ್, ಪ್ರಕಾಶ್ ಆಳ್ವ, ರಮ್ಯಾ ಬಿ.ಎಸ್, ರೇಖಾ ರಾವ್, ದೀಪ್ತಿ ಶ್ರೀನಿಧಿ ಭಟ್, ರಶ್ಮಿತಾ, ಸೌಮ್ಯಾ ಎ, ಶ್ರೀನಿಧಿ ಭಟ್, ಧೀರಜ್ ಹೆಬ್ರಿ, ಹರ್ಷರಾಜ್, ಹರಿಶ್ಚಂದ್ರ ಆಳ್ವ, ರವೀಂದ್ರ ಕುಕ್ಕಾಜೆ ಅವರಿಗೆ ಪ್ರಮಾಣವಚನ ಬೋಧಿಸಲಾಯಿತು. ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮ ಈ ಸಂದರ್ಭ ನಡೆಯಿತು. ನೂತನ ಅಧ್ಯಕ್ಷೆ ಗಾಯತ್ರಿ ಲೋಕೇಶ್ ಅಧ್ಯಕ್ಷತೆ ವಹಿಸಿದ್ದರು. ನೂತನ ಕಾರ್ಯದರ್ಶಿ ರಮ್ಯಾ ಬಿ.ಎಸ್. ವಂದಿಸಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಜೋಡುಮಾರ್ಗ ಜೇಸಿ ಘಟಕ ಪದಗ್ರಹಣ ಕಾರ್ಯಕ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*