ಬಂಟ್ವಾಳ: ಇಲ್ಲಿನ ರೋಟರಿ ಕ್ಲಬ್ ಸಭಾಂಗಣದಲ್ಲಿ ಜೋಡುಮಾರ್ಗ ನೇತ್ರಾವತಿ ಜೇಸಿಯ ನೂತನ ಸದಸ್ಯರ ಪದಗ್ರಹಣ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜೇಸಿ ಅಧ್ಯಕ್ಷ ಹರಿಪ್ರಸಾದ್ ಕುಲಾಲ್ ಅವರು ನೂತನ ಅಧ್ಯಕ್ಷೆ ಗಾಯತ್ರಿ ಲೋಕೇಶ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಕಾರ್ಯದರ್ಶಿ ಕಿಶನ್ ಎನ್. ರಾವ್ ಅವರು ನೂತನ ಕಾರ್ಯದರ್ಶಿ ರಮ್ಯಾ ಬಿ.ಎಸ್. ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಕಾರ್ಯಕ್ರಮವನ್ನು ಮಾವಂತೂರು ಶ್ರೀ ಮಹಾಗಣಪತಿ ದೇವಸ್ಥಾನದ ಅಧ್ಯಕ್ಷ ಪದ್ಮರಾಜ ಬಲ್ಲಾಳ್ ಮಾವಂತೂರು ಉದ್ಘಾಟಿಸಿ, ಶುಭ ಹಾರೈಸಿದರು. ಈ ಸಂದರ್ಭ ಜೇಸಿ ವಲಯ 15ರ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಜೇಸಿ ಆಂದೋಲನದಲ್ಲಿ ಯುವಜನರು ಭಾಗವಹಿಸಿ ವ್ಯಕ್ತಿತ್ವ ವಿಕಸನದ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಬಹುದು ಎಂದರು.
ವಿವಿಧ ಪದಾಧಿಕಾರಿಗಳಾದ ಸುಬ್ರಹ್ಮಣ್ಯ ಪೈ, ಕಿಶನ್ ಎನ್.ರಾವ್, ಡಾ. ವಿನಾಯಕ ಕೆ.ಎಸ್, ಅಮಿತಾ ಹರ್ಷರಾಜ್, ಪ್ರಕಾಶ್ ಆಳ್ವ, ರಮ್ಯಾ ಬಿ.ಎಸ್, ರೇಖಾ ರಾವ್, ದೀಪ್ತಿ ಶ್ರೀನಿಧಿ ಭಟ್, ರಶ್ಮಿತಾ, ಸೌಮ್ಯಾ ಎ, ಶ್ರೀನಿಧಿ ಭಟ್, ಧೀರಜ್ ಹೆಬ್ರಿ, ಹರ್ಷರಾಜ್, ಹರಿಶ್ಚಂದ್ರ ಆಳ್ವ, ರವೀಂದ್ರ ಕುಕ್ಕಾಜೆ ಅವರಿಗೆ ಪ್ರಮಾಣವಚನ ಬೋಧಿಸಲಾಯಿತು. ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮ ಈ ಸಂದರ್ಭ ನಡೆಯಿತು. ನೂತನ ಅಧ್ಯಕ್ಷೆ ಗಾಯತ್ರಿ ಲೋಕೇಶ್ ಅಧ್ಯಕ್ಷತೆ ವಹಿಸಿದ್ದರು. ನೂತನ ಕಾರ್ಯದರ್ಶಿ ರಮ್ಯಾ ಬಿ.ಎಸ್. ವಂದಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…