ಬಂಟ್ವಾಳ: ಬಂಟ್ವಾಳ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆಯನ್ನು ನಡೆಸಲಾಯಿತು.
ಚುನಾವಣೆ ಶಾಖೆಯ ವಿಷಯ ನಿರ್ವಾಹಕ ನಾರಾಯಣ ಗೌಡ ದೀಪ ಬೆಳಗಿಸಿ ಮಾತನಾಡಿ, ಛತ್ರಪತಿ ಎಂದ ತಕ್ಷಣ ನೆನಪಾಗುವುದು ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಶಿವಾಜಿ ಮಹಾರಾಜರು. ತನ್ನ ತಾಯಿ ಮತ್ತು ಗುರುಗಳ ಪ್ರೇರಣೆಯಿಂದ ಸಮರ್ಥರಾಗಿ ಬೆಳೆದ ಶಿವಾಜಿ ಪ್ರಸಕ್ತ ಕಾಲಕ್ಕೆ ಮಾದರಿಯಾಗಿ ನಿಲ್ಲುತ್ತಾರೆ. ಅವರ ದೇಶ ಪ್ರೇಮ ಅನುಕರಣೀಯವಾದುದು ಎಂದು ಹೇಳಿದರು. ಈ ಸಂದರ್ಭ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿ, ಗ್ರಾಮ ಆಡಳಿತ ಆಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.ಕಂದಾಯ ನಿರೀಕ್ಷಕರಾದ ಜನಾರ್ದನ್.ಜೆ ಸ್ವಾಗತಿಸಿ ವಂದಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…