ಬಂಟ್ವಾಳ

ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ

ಬಂಟ್ವಾಳ ಕಾಮಾಜೆಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಐಕ್ಯೂಎಸಿ ಘಟಕದ ಸಂಯೋಜನೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ , ವಕೀಲರ ಸಂಘದ ನೆರವಿನೊಂದಿಗೆ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

ಜಾಹೀರಾತು

ತಾರತಮ್ಯ ಮಾಡದೆ ಎಲ್ಲರನ್ನೂ ಒಂದೇ ರೀತಿಯಲ್ಲಿ ನೋಡುವ ಕಾರ್ಯದ ಮೂಲಕ ಸಮಾನತೆಯನ್ನು ಆಚರಿಸಿದರೆ, ಸಾಮಾಜಿಕ ನ್ಯಾಯವನ್ನು ಕಾಣಬಹುದು ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್ ಸಿ  ಆಗಿರುವ ಕೃಷ್ಣಮೂರ್ತಿ ಎನ್. ಹೇಳಿದರು.

ಸಂವಿಧಾನದ ಮೂಲತತ್ವದಲ್ಲಿ ಸಾಮಾಜಿಕ ನ್ಯಾಯ ಅಗ್ರಸ್ಥಾನದಲ್ಲಿರುತ್ತದೆ ಎಂದು ಹೇಳಿದ ಅವರು, ಸಮಾನತೆಯ ಆಶಯವನ್ನು ಈಡೇರಿಸುವುದು ಎಲ್ಲರ ಕರ್ತವ್ಯ ಎಂದರು.

ಜಾಹೀರಾತು

ಈ ಸಂದರ್ಭ ಅಧ್ಯಕ್ಷತೆಯನ್ನು ವಹಿಸಿದ್ದ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಿನ್ಸಿಪಾಲ್ ಡಾ. ಪ್ರಕಾಶ್ಚಂದ್ರ ಶಿಶಿಲ ಶುಭ ಹಾರೈಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ, ಕೇಂದ್ರ ಸರಕಾರದ ಪರ ಜಿಲ್ಲಾ ನ್ಯಾಯವಾದಿ ಪಿ.ಪ್ರಸಾದ್ ಕುಮಾರ್ ರೈ ಸಾಮಾಜಿಕ ನ್ಯಾಯದ ಬಗ್ಗೆ ಕಾನೂನು ಮಾಹಿತಿ ನೀಡಿದರು.

ಜಾಹೀರಾತು

ವಕೀಲರ ಸಂಘ ಬಂಟ್ವಾಳ ಅಧ್ಯಕ್ಷರಾದ ಬಿ.ಗಣೇಶಾನಂದ ಸೋಮಯಾಜಿ, ಸಹಾಯಕ ಸರಕಾರಿ ಅಭಿಯೋಜಕರಾದ ಹರಿಣಿಕುಮಾರಿ ಡಿ ಅತಿಥಿಗಳಾಗಿ ಉಪಸ್ಥಿತರಿದ್ದರು. ಐಕ್ಯೂಎಂಸಿ ಘಟಕದ ಸಂಯೋಜಕ ಡಾ. ಸತೀಶ್ ಗಟ್ಟಿ ಸ್ವಾಗತಿಸಿದರು. ಪ್ರೊ.ಶಶಿಕಲಾ ವಂದಿಸಿದರು. ವಿದ್ಯಾರ್ಥಿನಿ ಚಿತ್ರಾವತಿ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ