ಬಂಟ್ವಾಳದ ಶ್ರೀ ತಿರುಮಲ ವೆಂಕಟ್ರಮಣ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮಗಳು ಫೆ.22 ರಿಂದ ಫೆ. 27 ರವರೆಗೆ ಜರುಗಲಿದ್ದು ಭಕ್ತರಿಗೆ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.
ಬ್ರಹ್ಮರಥೋತ್ಸವ ಸಂದರ್ಭ ಬಂಟ್ವಾಳ ಪೋಸ್ಟ್ ಆಫೀಸ್ನಿಂದ ಪೂರ್ಣಿಮಾ ಸ್ಟೋರ್ ವರೆಗೆ ರಸ್ತೆ ಎರಡೂ ಬದಿಯಲ್ಲಿ ವಾಹನವನ್ನು ನಿಲ್ಲಿಸುವುದನ್ನು ನಿಷೇಧಿಸಲಾಗಿದೆ. ಹಾಗಾಗಿ ದೇವಳದ ಕಡೆಯಿಂದ ಸೂಚಿಸಿದ ಸ್ಥಳದಲ್ಲಿಯೇ ತಮ್ಮ ವಾಹನವನ್ನು ನಿಲ್ಲಿಸಿ ಸಹಕರಿಸಬೇಕಾಗಿ ಆಡಳಿತ ಮಂಡಳಿ ವಿನಂತಿಸಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…