ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಘೋಷಣೆಗೆ ಸಿಎಂ, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಧನ್ಯವಾದ ಸಲ್ಲಿಸಿದ ಪಾದಯಾತ್ರೆ ಸಮಿತಿ

ಬಂಟ್ವಾಳ: ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನಾರಾಯಣಗುರು ಅಭಿವೃದ್ಧಿ ನಿಗಮ ಘೋಷಣೆ ಮಾಡಿ ಅಧಿಸೂಚನೆ ಹೊರಡಿಸಿದ್ದಕ್ಕೆ ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ವತಿಯಿಂದ ಏರ್ಪಡಿಸಲಾದ ಪಾದಯಾತ್ರೆ ಸಮಿತಿ ಅಭಿನಂದನೆ ಸಲ್ಲಿಸಿದೆ. ಸಮಿತಿ ಜಿಲ್ಲಾಧ್ಯಕ್ಷ ಮತ್ತು ಮಂಗಳೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಜಿತೇಂದ್ರ ಜೆ. ಸುವರ್ಣ ಬಿ.ಸಿ.ರೋಡ್ ನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮತ್ತಷ್ಟು ಬೇಡಿಕೆಗಳ ಈಡೇರಿಸಬೇಕು ಎಂದು ಸರಕಾರವನ್ನು ಒತ್ತಾಯಿಸಿದರು.

ಜಾಹೀರಾತು

ನಿಗಮ ಘೋಷಣೆ ಆಗಿದ್ದು, ಅನುದಾನ ನಿಗದಿ ಅಧಿವೇಶನ ಸಂದರ್ಭ ಆಗಬಹುದು ಎಂಬ ಭರವಸೆ ನಮಗಿದೆ, ಸೂಕ್ತ ವ್ಯಕ್ತಿಯನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಿಸಬೇಕು ಎಂದರು. ಮಾರ್ಚ್ 12ರಂದು ಭಾನುವಾರ ಅಪರಾಹ್ನ 4ರಿಂದ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ಜಿಲ್ಲೆಯ ಬಿಲ್ಲವ ಮುಖಂಡರ, ಸಂಘಟನೆಗಳ, ಗರೋಡಿ ದೈವಸ್ಥಾನಗಳ ಮುಖಂಡರು, ಸಮಾಜಸೇವಕರ ಸಭೆ ಕರೆಯಲಾಗುವುದು ಎಂದು ಜಿತೇಂದ್ರ ಸುವರ್ಣ ಹೇಳಿದರು.

ಬಿಲ್ಲವರಿಗೆ ಟಿಕೆಟ್: ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಬಿಲ್ಲವ ಸಮುದಾಯದ ಕನಿಷ್ಠ ಮೂರು ಶಾಸಕ ಅಭ್ಯರ್ಥಿಗಳ ಸ್ಪರ್ಧೆ ಗೆ ಅವಕಾಶ ನೀಡಬೇಕು ಎಂದು ಅವರು ಇದೇ ಸಂದರ್ಭ ರಾಜಕೀಯ ಪಕ್ಷಗಳಿಗೆ ಒತ್ತಾಯ ಮಾಡಿದರು.

ಜಾಹೀರಾತು

ಜಿಲ್ಲಾ ಮೂರ್ತೆದಾರರ ಸೇವಾ ಸಂಘ ಅಧ್ಯಕ್ಷ ಸಂಜೀವ ಪೂಜಾರಿ ಕುಚ್ಚಿಗುಡ್ಡೆ, ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ವಕ್ತಾರ ಬೇಬಿ ಕುಂದರ್, ಪಾದಯಾತ್ರೆ ಸಮಿತಿ ಸಂಚಾಲಕ ಪ್ರೇಮನಾಥ ಕೆ, ಎಸ್.ಎನ್.ಜಿ.ವಿ. ಬಂಟ್ವಾಳ ಘಟಕಾಧ್ಯಕ್ಷ ನವೀನ್ ಕೋಟ್ಯಾನ್, ಉಪಾಧ್ಯಕ್ಷ ಸುಂದರ ಪೂಜಾರಿ, ಕಾರ್ಯದರ್ಶಿ ಪ್ರಭಾಕರ, ಪಾದಯಾತ್ರೆ ಸಮಿತಿ ಸಹಕಾರ್ಯದರ್ಶಿ ಸತೀಶ್ ಪೂಜಾರಿ ಬಾಯಿಲ, ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಘೋಷಣೆಗೆ ಸಿಎಂ, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಧನ್ಯವಾದ ಸಲ್ಲಿಸಿದ ಪಾದಯಾತ್ರೆ ಸಮಿತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*