ಸಾಧಕರು

ವಿರಳವಾಗಿ ಸಿಗುವ ಕಲ್ಲು ಹೂ: ಮುಳ್ಳಯ್ಯನಗಿರಿಯಲ್ಲಿ ಹೊಸ ಪ್ರಭೇದವನ್ನು ಗುರುತಿಸಿದ ಡಾ. ವಿನಾಯಕ್ ಕೆ.ಎಸ್.

ಬಂಟ್ವಾಳ: ಬಂಟ್ವಾಳ ಎಸ್.ವಿ.ಎಸ್.ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿನಾಯಕ್ ಕೆ.ಎಸ್ ಅವರ ನೇತೃತ್ವದ ಸಂಶೋಧನಾ ತಂಡದಿಂದ ‘ಉಸ್ನೆಯ ಹಿರುಟ’ ಎಂಬ ಅಪರೂಪದ ಕಲ್ಲು ಹೂವು ಪ್ರಭೇದವನ್ನು ಮುಳ್ಳಯ್ಯನಗಿರಿಯಲ್ಲಿ ಗುರುತಿಸಲಾಗಿದೆ.  ಇದು ಭಾರತದಲ್ಲೇ ಮೊದಲ ಬಾರಿಗೆ ಗುರುತಿಸಲಾದ ಪ್ರಭೇದ ಎಂದು ಡಾ. ವಿನಾಯಕ್ ತಿಳಿಸಿದ್ದಾರೆ.

ಜಾಹೀರಾತು

ಈ ಪ್ರಭೇದವು ಪಾರ್ಮಿಲಿಯ ಎಂಬ ಕಲ್ಲು ಹೂವಿನ ಕುಟುಂಬಕ್ಕೆ ಸೇರಿದ್ದಾಗಿದ್ದು, 1500 ಅಡಿಗಿಂತ ಎತ್ತರ ಪ್ರದೇಶದಲ್ಲಿ ಮಾತ್ರ ಕಾಣಸಿಗುತ್ತದೆ. ಪಾಚಿ ಮತ್ತು ಶಿಲೀಂಧ್ರಗಳ ಸಹಯೋಗದಿಂದ ಮಾತ್ರ ಉತ್ಪತ್ತಿ ಆಗಲು ಸಾಧ್ಯ. ಇದು ವಾತಾವರಣದ ಮಾಲಿನ್ಯಕ್ಕೆ ಬೇಗ ನಶಿಸಿಹೋಗುವ ಪ್ರಭೇದವಾಗಿದ್ದು ಅತ್ಯಂತ ಕಡಿಮೆ ಮಾಲಿನ್ಯ ಇರುವ ಪ್ರದೇಶದಲ್ಲಿ ಮಾತ್ರ ಅಪರೂಪವಾಗಿ ದೊರೆಯುತ್ತದೆ. ಪ್ರಪಂಚದ ಕೆಲವೇ ದೇಶಗಳಾದ ಫಿಲಿಫೈನ್ಸ್, ಆಸ್ಟ್ರೇಲಿಯಾ, ಕ್ಯಾಲಿಫೋರ್ನಿಯ, ಪಶ್ಚಿಮ ಆಫ್ರಿಕಾ ದೇಶದಲ್ಲಿ ಕಾಣಸಿಗುವ ಈ ಕಲ್ಲು ಹೂವಿನ ಕುರಿತು. ಜರ್ನಲ್ ಆಫ್ ತ್ರಿಟನ್ ಟ್ಯಾಕ್ಸ್ ಎಂಬ ವಿಜ್ಞಾನ ಪತ್ರಿಕೆಯ ಫೆಬ್ರವರಿ ತಿಂಗಳಿನ ವಿಶೇಷ ಆವೃತ್ತಿಯಲ್ಲಿ ಅವರು ಬರೆದ ಲೇಖನ ಪ್ರಕಟವಾಗಿರುತ್ತದೆ. ಇದುವರೆಗೆ ಭಾರತದಲ್ಲಿ ಈ ಕುಟುಂಬಕ್ಕೆ ಸೇರಿದ 57, ಕರ್ನಾಟಕದಲ್ಲಿ 8 ಕಲ್ಲು ಹೂಗಳ ಪ್ರಭೇದ ಗುರುತಿಸಲಾಗಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಈ ಪ್ರಭೇದದ ಕಲ್ಲು ಹೂಗಳು ವಿಶಿಷ್ಟ ರೀತಿಯ ಆವಾಸಸ್ಥಾನಕ್ಕೆ ಹೊಂದಿಕೊಂಡಿದ್ದು ಅವುಗಳ ಆವಾಸಸ್ಥಾನ ನಾಶವಾದರೆ ಪ್ರಕೃತಿಯಿಂದ ಇವುಗಳು ಕೂಡ ವಿನಾಶ ಹೊಂದುತ್ತವೆ ಹಾಗಾಗಿ ಇವುಗಳ ಸಂರಕ್ಷಣೆ ಅತ್ಯಂತ ಮುಖ್ಯವಾಗಿದೆ ಎಂದು ಹೇಳಿದ್ದಾರೆ. ತಂಡದಲ್ಲಿ ಅರ್ಚನಾ ಆರ್. ಮೇಸ್ತ ಮತ್ತು ಎನ್. ರಾಜೇಶ್ವರಿ ಇದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts