ಬಂಟ್ವಾಳ: ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ರಮಾ ಆಶೋಕ್ ಪೂಜಾರಿ ಅವರ ಮನೆಗೆ ಇತ್ತೀಚಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಬೆಂಕಿಗಾಹುತಿಯಾಗಿತ್ತು. ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಭೇಟಿ ಸಂಪೂರ್ಣ ಮನೆ ನಿರ್ಮಾಣದ ಭರವಸೆ ನೀಡಿದ್ದಾರೆ.
ಆರ್ಥಿಕ ವಾಗಿ ಬಡವರಾಗಿರುವ ಈ ಕುಟುಂಬಕ್ಕೆ ಶಾಸಕರು ಮನೆ ನಿರ್ಮಾಣ ಮಾಡಿಕೊಡುವ ಭರವಸೆ ನೀಡಿದ್ದಾರೆ. ಸ್ಥಳೀಯ ಬಿಜೆಪಿ ಪ್ರಮುಖ ರು ಮನೆ ನಿರ್ಮಾಣದ ಜವಾಬ್ದಾರಿ ವಹಿಸಿ ಕೊಳ್ಳುವಂತೆ ಅವರು ತಿಳಿಸಿದರು. ನಾರಾಯಣ ಶೆಟ್ಟಿ ತೋಟ, ರಾಧಾಕೃಷ್ಣ ಅಡ್ಯಂತಾಯ, ಗಣೇಶ್ ರೈ ಮಾಣಿ, ಹರೀಶ್ ಕುಲಾಲ್ ಮಾಣಿ ಮತ್ತಿತರರು ಹಾಜರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…