ಬಾಳ್ತಿಲ ಗ್ರಾಮದ ದಾಸ ಕೋಡಿ ಎಂಬಲ್ಲಿ ನಿನ್ನೆ ಬೈಹುಲ್ಲು ಸಾಗಾಟದ ಲೋರಿಗೆ ಬೆಂಕಿ ಹತ್ತಿ ಲಾರಿ ಸಂಪೂರ್ಣ ಹೊತ್ತಿ ಉರಿದ ಘಟನೆ ನಡೆದಿದೆ.
ಹಾಸನದಿಂದ ಮಂಗಳೂರು ಕಡೆಗೆ ಆಗಮಿಸುತ್ತಿದ್ದ ಒಣ ಹುಲ್ಲು ಸಾಗಾಟದ ಲಾರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಕಲ್ಲಡ್ಕ ಸಮೀಪದ ದಾಸಕೋಡಿಯಲ್ಲಿ ನಡೆದಿದೆ. ಲಾರಿಯು ಹೆದ್ದಾರಿಯಲ್ಲಿ ಆಗಮಿಸುತ್ತಿರುವ ವೇಳೆ ಹೊತ್ತಿ ಉರಿದು, ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಉರಿದಿದೆ ಎನ್ನಲಾಗಿದ್ದು, ಬಂಟ್ವಾಳ ಅಗ್ನಿಶಾಮಕ ಠಾಣೆಯವರು ಘಟನಾ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)