ಬಂಟ್ವಾಳ: ಬಿ.ಸಿ.ರೋಡಿನ ಹೃದಯಭಾಗದಲ್ಲಿರುವ ಹೋಟೆಲ್ ಒಂದರಲ್ಲಿ ಸೋಮವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ಬಸ್ ನಿಲ್ದಾಣ ಬಳಿಯ ಸಣ್ಣ ಹೋಟೆಲ್ ಒಂದರಲ್ಲಿ ರಾತ್ರಿ ಸುಮಾರು 7.30ರ ವೇಳೆ ಬೆಂಕಿ ಕಾಣಿಸಿಕೊಂಡಿದ್ದನ್ನು ಹತ್ತಿರದ ಮನೆಯವರು ನೋಡಿ ಆತಂಕದಿಂದ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಸಾರ್ವಜನಿಕರು ಬೆಂಕಿ ನಂದಿಸಿದ್ದು, ದೊಡ್ಡ ಅನಾಹುತ ತಪ್ಪಿಹೋಗಿದೆ. ಪಕ್ಕದಲ್ಲೇ ಮನೆ, ಅಂಗಡಿಗಳಿದ್ದವು.
ಕಲ್ಲಡ್ಕದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ಅಗ್ನಿಶಾಮಕದಳ ಆಗಮಿಸುವುದು ತಡವಾದರೂ ಬಳಿಕ ಕಾರ್ಯಾಚರಣೆ ನಡೆಸಿದರು. ಘಟನೆಯಲ್ಲಿ ಅಪಾರ ಪ್ರಮಾಣದ ಸೊತ್ತುಗಳು ನಾಶವಾಗಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…