ಬಂಟ್ವಾಳ

ಗ್ರಾಪಂ ಉಪಚುನಾವಣೆ: ಅನಂತಾಡಿಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲುವು – ರಮಾನಾಥ ರೈ ಅಭಿನಂದನೆ

ಬಂಟ್ವಾಳ ತಾಲೂಕಿನ ಅನಂತಾಡಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶಶಿಕಲಾ ಹರಿಣಾಕ್ಷ ಗೆಲುವು ಸಾಧಿಸಿದ್ದಾರೆ. ಅನಂತಾಡಿ ಗ್ರಾಪಂ ಎರಡನೇ ವಾರ್ಡ್ ನ ಅಭ್ಯರ್ಥಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಈ ಉಪಚುನಾವಣೆ ನಡೆದಿತ್ತು.ಅನಂತಾಡಿಯಲ್ಲಿ ಕಾಂಗ್ರೆಸ್ ಬೆಂಬಲಿತ ಶಶಿಕಲಾ 254 ಮತ ಗಳಿಸಿದರೆ, ಬಿಜೆಪಿ ಬೆಂಬಲಿತ ತಾಪಂ ಮಾಜಿ ಸದಸ್ಯೆ ಗೀತಾ ಚಂದ್ರಶೇಖರ್ 242 ಮತ ಗಳಿಸಿದ್ದಾರೆ. ಕಳೆದ ಬಾರಿ ಇಲ್ಲಿ ಬಿಜೆಪಿ ಬೆಂಬಲಿತರು ಗೆದ್ದಿದ್ದರು.

ಜಾಹೀರಾತು

ಮಾಜಿ ಸಚಿವ ಬಿ.ರಮಾನಾಥ ರೈ ಈ ಸಂದರ್ಭ ಮಾತನಾಡಿ, ಹಿಂದೆ ಬಿಜೆಪಿ ಬೆಂಬಲಿತರು ಇಲ್ಲಿ ಗೆದ್ದಿದ್ದು, ಈ ಹಿಂದೆಯೂ ಬಿಜೆಪಿ ಪ್ರಭಾವ ಅನಂತಾಡಿಯಲ್ಲಿತ್ತು. ಇದೀಗ ಕಾಂಗ್ರೆಸ್ ಗೆದ್ದಿರುವುದು ಇತಿಹಾಸ ಸೃಷ್ಟಿಯಾದಂತಾಗಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಯಾವಾಗಲೂ ತಮ್ಮ ಭಾಷಣದಲ್ಲಿ ಕಾಂಗ್ರೆಸ್ ಮುಕ್ತ ಪಂಚಾಯತ್ ಎಂದು ಹೇಳುತ್ತಿರುತ್ತಾರೆ. ಆದರೆ ಬಿಜೆಪಿಯ ತಾಪಂ ಸದಸ್ಯರು ಗ್ರಾಪಂ ಚುನಾವಣೆಗೆ ನಿಂತೂ ನಮ್ಮ ಬೆಂಬಲಿತ ಅಭ್ಯರ್ಥಿ ಎದುರು ಸೋತಿದ್ದಾರೆ. ನಾವು ಸಾಮಾನ್ಯ ಕಾರ್ಯಕರ್ತರನ್ನು ನಿಲ್ಲಿಸಿ ಗೆಲ್ಲಿಸಿದ್ದೇವೆ. ಆ ಸಂತೋಷ ನಮಗಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನೆಲೆಗಟ್ಟಾಗಿ ಬಂಟ್ವಾಳ ಕ್ಷೇತ್ರ ಬೆಳೆಯುತ್ತದೆ ಎಂದು ರೈ ಹೇಳಿದರು. ಪಂಚಾಯತ್ ಒಳಗೆ ಕಾಂಗ್ರೆಸ್ ನ ಧ್ವನಿ ಎತ್ತಲಿದ್ದಾರೆ ಎಂದು ರೈ ಹೇಳಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ