ಬಂಟ್ವಾಳ

ಶಾಸಕ ರಾಜೇಶ್ ನಾಯ್ಕ್ ಅವರಿಂದ ಬಂಟ್ವಾಳ ಕ್ಷೇತ್ರದ 1706 ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಶಾಸಕ ರಾಜೇಶ್ ನಾಯ್ಕ್  ಉಳಿಪ್ಪಾಡಿ ಅವರು ಬಂಟ್ವಾಳ ಕ್ಷೇತ್ರದ 1706 ಫಲಾನುಭವಿಗಳಿಗೆ ನಾನಾ ಸೌಲಭ್ಯಗಳನ್ನು ವಿತರಿಸಿದರು.

ಜಾಹೀರಾತು

94ಸಿ, 94ಸಿಸಿ ಸಾಗುವಳಿ ಚೀಟಿ ಸೇರಿದಂತೆ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ವಿತರಣೆ ಮಾಡಲಾಗುತ್ತಿದ್ದು, ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ ಬಂಟ್ವಾಳದ 24,492 ಫಲಾನುಭವಿಗಳಿಗೆ 24.49 ಕೋ.ರೂ. ಹಾಗೂ ಫಸಲು ಭಿಮಾ ಯೋಜನೆಯಲ್ಲಿ 15.07 ಕೋ.ರೂ. ಬಂದಿರುತ್ತದೆ ಎಂದು ಈ ಸಂದರ್ಭ ಶಾಸಕ ರಾಜೇಶ್ ನಾಯ್ಕ್ ತಿಳಿಸಿದರು.

ದ.ಕ.ಜಿಲ್ಲಾಡಳಿತ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕ್ಷೇತ್ರದಲ್ಲಾದ ಪ್ರಗತಿಯ ನೋಟವನ್ನು ತಿಳಿಸಿದರು. ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೂಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಬಂಟ್ವಾಳ ತಹಸೀಲ್ದಾರ್ ದಯಾನಂದ ಕೆ.ಎ, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ರಮನಾಥ ರಾಯಿ, ಜಯರಾಮ ನಾಯ್ಕ್ ಕುಂಟ್ರಕಳ, ಗ್ರಾ.ಪಂ.ಗಳ ಅಧ್ಯಕ್ಷರುಗಳಾದ ಸತೀಶ್ ಪೂಜಾರಿ, ಸುರೇಶ್ ಬನಾರಿ, ಸಂಜೀವ ಪೂಜಾರಿ, ಹರ್ಷಿಣಿ ಪುಷ್ಪಾನಂದ, ನಾಗವೇಣಿ, ಲೀಲಾವತಿ ಧರ್ಣಪ್ಪ ಪೂಜಾರಿ, ಸುರೇಶ್ ಮೈರಾ, ವಾಮನ ಆಚಾರ್ಯ, ದಿನೇಶ್, ಗಣೇಶ್ ಪೂಜಾರಿ, ಸುಜಾತ ಆರ್.ಪೂಜಾರಿ, ಯಶೋಧ, ಶಶಿಕಲಾ, ಅಭಿಷೇಕ್ ಶೆಟ್ಟಿ, ಶೇಖರ ಪೂಜಾರಿ ಉಪಸ್ಥಿತರಿದ್ದರು. ಉಪತಹಸೀಲ್ದಾರ್ ನವೀನ್‌ಕುಮಾರ್ ಬೆಂಜನಪದವು ಸ್ವಾಗತಿಸಿ, ವಂದಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.