ಬಂಟ್ವಾಳ

ಶಾಸಕ ರಾಜೇಶ್ ನಾಯ್ಕ್ ಅವರಿಂದ ಬಂಟ್ವಾಳ ಕ್ಷೇತ್ರದ 1706 ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಶಾಸಕ ರಾಜೇಶ್ ನಾಯ್ಕ್  ಉಳಿಪ್ಪಾಡಿ ಅವರು ಬಂಟ್ವಾಳ ಕ್ಷೇತ್ರದ 1706 ಫಲಾನುಭವಿಗಳಿಗೆ ನಾನಾ ಸೌಲಭ್ಯಗಳನ್ನು ವಿತರಿಸಿದರು.

ಜಾಹೀರಾತು

94ಸಿ, 94ಸಿಸಿ ಸಾಗುವಳಿ ಚೀಟಿ ಸೇರಿದಂತೆ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ವಿತರಣೆ ಮಾಡಲಾಗುತ್ತಿದ್ದು, ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ ಬಂಟ್ವಾಳದ 24,492 ಫಲಾನುಭವಿಗಳಿಗೆ 24.49 ಕೋ.ರೂ. ಹಾಗೂ ಫಸಲು ಭಿಮಾ ಯೋಜನೆಯಲ್ಲಿ 15.07 ಕೋ.ರೂ. ಬಂದಿರುತ್ತದೆ ಎಂದು ಈ ಸಂದರ್ಭ ಶಾಸಕ ರಾಜೇಶ್ ನಾಯ್ಕ್ ತಿಳಿಸಿದರು.

ದ.ಕ.ಜಿಲ್ಲಾಡಳಿತ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕ್ಷೇತ್ರದಲ್ಲಾದ ಪ್ರಗತಿಯ ನೋಟವನ್ನು ತಿಳಿಸಿದರು. ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೂಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಬಂಟ್ವಾಳ ತಹಸೀಲ್ದಾರ್ ದಯಾನಂದ ಕೆ.ಎ, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ರಮನಾಥ ರಾಯಿ, ಜಯರಾಮ ನಾಯ್ಕ್ ಕುಂಟ್ರಕಳ, ಗ್ರಾ.ಪಂ.ಗಳ ಅಧ್ಯಕ್ಷರುಗಳಾದ ಸತೀಶ್ ಪೂಜಾರಿ, ಸುರೇಶ್ ಬನಾರಿ, ಸಂಜೀವ ಪೂಜಾರಿ, ಹರ್ಷಿಣಿ ಪುಷ್ಪಾನಂದ, ನಾಗವೇಣಿ, ಲೀಲಾವತಿ ಧರ್ಣಪ್ಪ ಪೂಜಾರಿ, ಸುರೇಶ್ ಮೈರಾ, ವಾಮನ ಆಚಾರ್ಯ, ದಿನೇಶ್, ಗಣೇಶ್ ಪೂಜಾರಿ, ಸುಜಾತ ಆರ್.ಪೂಜಾರಿ, ಯಶೋಧ, ಶಶಿಕಲಾ, ಅಭಿಷೇಕ್ ಶೆಟ್ಟಿ, ಶೇಖರ ಪೂಜಾರಿ ಉಪಸ್ಥಿತರಿದ್ದರು. ಉಪತಹಸೀಲ್ದಾರ್ ನವೀನ್‌ಕುಮಾರ್ ಬೆಂಜನಪದವು ಸ್ವಾಗತಿಸಿ, ವಂದಿಸಿದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ