ಬಿಜೆಪಿ ಯುವಮೋರ್ಚಾ: ಪ್ರಗತಿರಥ ವಾಹನಕ್ಕೆ ಬಂಟ್ವಾಳ ಕ್ಷೇತ್ರದಲ್ಲಿ ಚಾಲನೆ

ಬಂಟ್ವಾಳ: ಬಿಜೆಪಿ ಯುವಮೋರ್ಚಾ ವತಿಯಿಂದ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಗತಿರಥ ವಾಹನಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹಾಗೂ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಚಾಲನೆ ನೀಡಿದರು.

ಜಾಹೀರಾತು

ಕೇಂದ್ರ ಸರಕಾರ ಹಾಗೂ ರಾಜ್ಯಸರಕಾರಗಳ ಸಾಧನೆ ಮಾತ್ತು ಜನಪರ ಯೋಜನೆಗಳನ್ನು ಒಳಗೊಂಡ ದೃಶ್ಯಾವಳಿಗಳನ್ನು ಬಿತ್ತರಿಸುವ ಎಲ್. ಇ. ಡಿ ಪರದೆಯುಳ್ಳ ಪ್ರಗತಿ ರಥ ವಾಹನ ಬಂಟ್ವಾಳ ಕ್ಷೇತ್ರದಾದ್ಯಂತ ಯುವ ಮೋರ್ಚಾ ನೇತೃತ್ವದಲ್ಲಿ ಸಂಚರಿಸುತ್ತಿದ್ದು, ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್  ಈ ಸಂದರ್ಭ ಉಪಸ್ಥಿತರಿದ್ದರು. ಯಾತ್ರೆಯ ಸಂಚಾಲಕರಾದ ಅಶ್ವಥ್ ರಾವ್ ಹಾಗೂ ಸಹಸಂಚಾಲಕರಾದ ದಯಾನಂದ ಎರ್ಮೆನಾಡು ಅವರಿಗೆ ಶಾಸಕ ರಾಜೇಶ್ ನಾಯ್ಕ್, ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಪಕ್ಷದ ಧ್ವಜ ನೀಡಿದರು. ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ದೊಂಬಯ ಅರಳ,ಯುವ ಮೋರ್ಚಾ ಹಂಗಾಮಿ ಅಧ್ಯಕ್ಷರಾದ ಕಿಶೋರ್ ಪಲ್ಲಿಪಾಡಿ, ಯುವಮೋರ್ಚಾ ಪ್ರಭಾರಿಗಳಾದ ಪುರುಷೋತ್ತಮ್ ಶೆಟ್ಟಿ ವಾಮದಪದವು, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ್ ಬಜ, ಬಂಟ್ವಾಳ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಶೆಟ್ಟಿ ದಂಬೆದಾರು ,ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶರ್ಮಿತ್ ಜೈನ್, ಪಕ್ಷದ ಪ್ರಮುಖರಾದ ಯಶೋಧರ ಕರ್ಬೇಟ್ಟು, ಯುವಮೋರ್ಚಾ ಪಧಾಧಿಕಾರಿಗಳಾದ ಕಾರ್ತಿಕ್ ಬಲ್ಲಾಳ್, ಜಯಾನಂದ, ನಿಶಾಂತ್ ಶೆಟ್ಟಿ, ಶುಭಾಕರ್ ಶೆಟ್ಟಿ ,ರಾಘವೇಂದ್ರ ಹಾಗೂ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು. ಪ್ರಗತಿ ರಥ ವಾಹನವು ಬಂಟ್ವಾಳ ವಿಧಾನಸಭಾ ಕ್ಷೇತ್ರದಾದ್ಯಂತ ಗ್ರಾಮ ಗ್ರಾಮಗಳಿಗೆ ಸಂಚರಿಸಲಿದೆ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಿಜೆಪಿ ಯುವಮೋರ್ಚಾ: ಪ್ರಗತಿರಥ ವಾಹನಕ್ಕೆ ಬಂಟ್ವಾಳ ಕ್ಷೇತ್ರದಲ್ಲಿ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*