ಸರಕಾರಿ ನೌಕರರ ಮುಷ್ಕರ: ಬಾಗಿಲು ಹಾಕಿದ ಕಚೇರಿಗಳು, ಆಸ್ಪತ್ರೆ, ಶಾಲೆಗಳು

ಜಾಹೀರಾತು

ಜಾಹೀರಾತು

ರಾಜ್ಯ ಸರಕಾರಿ ನೌಕರರ ಸಂಘದ ಸೂಚನೆಯಂತೆ ಬಂಟ್ವಾಳ ತಾಲೂಕಿನಲ್ಲಿರುವ ಸುಮಾರು ಎರಡು ಸಾವಿರದಷ್ಟು ಸರಕಾರಿ ನೌಕರರು ಮಾರ್ಚ್ 1ರಂದು ತಮ್ಮ ಕೆಲಸಗಳನ್ನು ಸ್ಥಗಿತಗೊಳಿಸುವ ಮೂಲಕ ವಿವಿಧ ಬೇಡಿಕೆ ಈಡೇರಿಕೆಗೆ ಮುಷ್ಕರ ಹೂಡಿದರು. ಬಂಟ್ವಾಳ ತಾಲೂಕು ಆಡಳಿತ ಸೌಧ, ತಾಲೂಕು ಪಂಚಾಯಿತಿ ಕಚೇರಿ, ಸಿಡಿಪಿಒ ಕಚೇರಿ, ಬಿಇಒ ಕಚೇರಿ, ಮುನ್ಸಿಪಾಲಿಟಿ, ಸರಕಾರಿ ಆಸ್ಪತ್ರೆ, ಸರ್ವೆ, ಸಬ್ ರಿಜಿಸ್ಟ್ರಾರ್ ಕಚೇರಿ ಸಹಿತ ವಿವಿಧ ಕಚೇರಿಗಳು ಬಾಗಿಲು ಹಾಕಿದವು. ಇವಲ್ಲದೆ ತಾಲೂಕಿನಲ್ಲಿರುವ ಎಲ್ಲ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಸಂಘದ ಸೂಚನೆಯನ್ನು ಮೊದಲೇ ಮುಖ್ಯಶಿಕ್ಷಕರು ವಿದ್ಯಾರ್ಥಿಗಳ ಪಾಲಕರಿಗೆ ರವಾನಿಸಿದ ಕಾರಣ ಶಾಲೆಗಳು ಇಂದು ತೆರೆಯಲೇ ಇಲ್ಲ.

ಸರಕಾರಿ ನೌಕರರ ವೇತನ ಏರಿಕೆಯಾದ ಕುರಿತು ಅದರ ಸಂಘದ ಮುಖ್ಯಸ್ಥರು ಘೋಷಿಸಿ, ಮುಷ್ಕರ ಹಿಂಪಡೆವ ವಿಚಾರದ ಕುರಿತು ತಿಳಿಸಿ, ಶೇ.17ರಷ್ಟು ವೇತನ ಏರಿಕೆಯ ಘೋಷಣೆಯನ್ನು ತಿಳಿಸಿದರು. ಹೀಗಾಗಿ ಮುಷ್ಕರವನ್ನು ಹಿಂಪಡೆಯಲಾಯಿತು. ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಉಮಾನಾಥ ರೈ ಮೇರಾವು ಅವರು ಮುಷ್ಕರ ಯಶಸ್ವಿಯಾಗಿದೆ ಎಂದು ತಿಳಿಸಿದರು. ಇದೇ ಸಂದರ್ಭ ಮಧ್ಯಾಹ್ನದ ಬಳಿಕ ಮುಷ್ಕರವನ್ನು ವಾಪಸ್ ಪಡೆಯಲಾದರೂ ಬಂದ್ ಆದ ಕಚೇರಿಗಳು ಮತ್ತೆ ಎಂದಿನ ಕಾರ್ಯಾಚರಣೆಗಿಳಿಯಲಿಲ್ಲ. ಒಂದು ದಿನದ ಮಟ್ಟಿಗೆ ಸರಕಾರಿ ಶಾಲೆ ಮಕ್ಕಳು ಫ್ರೀ ರಜಾ ಅನುಭವಿಸಿದರು. ತಮಗೆ ಸಂಬಂಧವೇ ಇಲ್ಲದ ವಿಚಾರವಾಗಿದ್ದರೂ ಸರಕಾರಿ ಕಚೇರಿಗಳಲ್ಲಿ ದುಡಿಯುವ ಗುತ್ತಿಗೆ ನೌಕರರೂ ಅನಿವಾರ್ಯವಾಗಿ ಕಚೇರಿಯಿಂದ ಹೊರಗುಳಿಯಬೇಕಾಯಿತು. 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸರಕಾರಿ ನೌಕರರ ಮುಷ್ಕರ: ಬಾಗಿಲು ಹಾಕಿದ ಕಚೇರಿಗಳು, ಆಸ್ಪತ್ರೆ, ಶಾಲೆಗಳು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*