ಬಂಟ್ವಾಳ

ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗದಿಂದ ಕೊಳಕೆ ಗಂಗಾಧರ ಭಟ್ ಅವರಿಗೆ ಶ್ರದ್ಧಾಂಜಲಿ

ಜಾಹೀರಾತು

ಬಂಟ್ವಾಳ: ಕೆಲ ದಿನಗಳ ಹಿಂದೆ ನಿಧನ ಹೊಂದಿದ ಕನ್ನಡದ ಕಲ್ಹಣ ದಿ.ನೀರ್ಪಾಜೆ ಭೀಮ ಭಟ್ಟರ ಅಭಿಮಾನಿ ಬಳಗದ ಕೋಶಾಧಿಕಾರಿ  ಎಸ್.ಗಂಗಾಧರ ಭಟ್ ಕೊಳಕೆ ಅವರಿಗೆ ಬಳಗದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ಗುರುವಾರ ಬಂಟ್ವಾಳದ ಸ್ಪರ್ಶ ಕಲಾಮಂದಿರದಲ್ಲಿ ನಡೆಯಿತು.

ಅಭಿಮಾನಿ ಬಳಗದ ಅಧ್ಯಕ್ಷ ಸುದರ್ಶನ್ ಜೈನ್ ನುಡಿನಮನ ಸಲ್ಲಿಸಿ, ಸಾಮಾಜಿಕ ಕಾರ್ಯಗಳಲ್ಲೂ ಸಕ್ರಿಯರಾಗಿ ಬಳಗದ ಪ್ರೇರಕರಾಗಿದ್ದ ಭಟ್ ಅವರು ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ತನ್ನ ದೇಹವೂ ಮುಂದೆ ಪ್ರಯೋಜನವಾಗಬೇಕು ಎಂದು ಅದನ್ನು ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸಿದ್ದು, ಈ ಮೂಲಕ ಅವರು ನಮ್ಮ ನಡುವೆ ನಿರಂತರವಾಗಿ ಉಳಿಯಲಿದ್ದಾರೆ ಎಂದರು.

ಬಂಟ್ವಾಳ ಕಸಾಪ ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ ಮಾತನಾಡಿ, ಕನ್ನಡ ಭವನ ನಿರ್ಮಾಣದ ಸಂಚಾಲಕರಾಗಿ ಭವನಕ್ಕೆ ಭಟ್ ಕೊಡುಗೆ ಅಪಾರ ಎಂದರು. ನ್ಯಾಯವಾದಿ ರವೀಂದ್ರ ಕುಕ್ಕಾಜೆ ಮಾತನಾಡಿ, ಗಂಗಾಧರ ಭಟ್ ಕಿರಿಯರಿಗೆ ಮಾರ್ಗದರ್ಶಿಯಾಗಿದ್ದರು ಎಂದರು.

ಸುಭಾಶ್ಚಂದ್ರ ಜೈನ್, ಎಚ್.ಕೆ.ನಯನಾಡು, ಮಧುಸೂದನ್ ಶೆಣೈ, ಪರಮೇಶ್ವರ ಮೂಲ್ಯ, ಸೀತಾರಾಮ ಶೆಟ್ಟಿ, ಸುಕುಮಾರ್ ಬಂಟ್ವಾಳ, ಅನಾರು ಕೃಷ್ಣ ಶರ್ಮ, ಸತೀಶ್‌ ಕುಮಾರ್, ಹರೀಶ್, ಶರಧಿಕುಮಾರ್ ಉಪಸ್ಥಿತರಿದ್ದರು. ಬಳಗದ ಉಪಾಧ್ಯಕ್ಷ ಶಿವಶಂಕರ್ ಎಸ್. ಸ್ವಾಗತಿಸಿ, ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts