ಬಂಟ್ವಾಳ

ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗದಿಂದ ಕೊಳಕೆ ಗಂಗಾಧರ ಭಟ್ ಅವರಿಗೆ ಶ್ರದ್ಧಾಂಜಲಿ

ಜಾಹೀರಾತು

ಬಂಟ್ವಾಳ: ಕೆಲ ದಿನಗಳ ಹಿಂದೆ ನಿಧನ ಹೊಂದಿದ ಕನ್ನಡದ ಕಲ್ಹಣ ದಿ.ನೀರ್ಪಾಜೆ ಭೀಮ ಭಟ್ಟರ ಅಭಿಮಾನಿ ಬಳಗದ ಕೋಶಾಧಿಕಾರಿ  ಎಸ್.ಗಂಗಾಧರ ಭಟ್ ಕೊಳಕೆ ಅವರಿಗೆ ಬಳಗದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ಗುರುವಾರ ಬಂಟ್ವಾಳದ ಸ್ಪರ್ಶ ಕಲಾಮಂದಿರದಲ್ಲಿ ನಡೆಯಿತು.

ಅಭಿಮಾನಿ ಬಳಗದ ಅಧ್ಯಕ್ಷ ಸುದರ್ಶನ್ ಜೈನ್ ನುಡಿನಮನ ಸಲ್ಲಿಸಿ, ಸಾಮಾಜಿಕ ಕಾರ್ಯಗಳಲ್ಲೂ ಸಕ್ರಿಯರಾಗಿ ಬಳಗದ ಪ್ರೇರಕರಾಗಿದ್ದ ಭಟ್ ಅವರು ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ತನ್ನ ದೇಹವೂ ಮುಂದೆ ಪ್ರಯೋಜನವಾಗಬೇಕು ಎಂದು ಅದನ್ನು ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸಿದ್ದು, ಈ ಮೂಲಕ ಅವರು ನಮ್ಮ ನಡುವೆ ನಿರಂತರವಾಗಿ ಉಳಿಯಲಿದ್ದಾರೆ ಎಂದರು.

ಜಾಹೀರಾತು

ಬಂಟ್ವಾಳ ಕಸಾಪ ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ ಮಾತನಾಡಿ, ಕನ್ನಡ ಭವನ ನಿರ್ಮಾಣದ ಸಂಚಾಲಕರಾಗಿ ಭವನಕ್ಕೆ ಭಟ್ ಕೊಡುಗೆ ಅಪಾರ ಎಂದರು. ನ್ಯಾಯವಾದಿ ರವೀಂದ್ರ ಕುಕ್ಕಾಜೆ ಮಾತನಾಡಿ, ಗಂಗಾಧರ ಭಟ್ ಕಿರಿಯರಿಗೆ ಮಾರ್ಗದರ್ಶಿಯಾಗಿದ್ದರು ಎಂದರು.

ಸುಭಾಶ್ಚಂದ್ರ ಜೈನ್, ಎಚ್.ಕೆ.ನಯನಾಡು, ಮಧುಸೂದನ್ ಶೆಣೈ, ಪರಮೇಶ್ವರ ಮೂಲ್ಯ, ಸೀತಾರಾಮ ಶೆಟ್ಟಿ, ಸುಕುಮಾರ್ ಬಂಟ್ವಾಳ, ಅನಾರು ಕೃಷ್ಣ ಶರ್ಮ, ಸತೀಶ್‌ ಕುಮಾರ್, ಹರೀಶ್, ಶರಧಿಕುಮಾರ್ ಉಪಸ್ಥಿತರಿದ್ದರು. ಬಳಗದ ಉಪಾಧ್ಯಕ್ಷ ಶಿವಶಂಕರ್ ಎಸ್. ಸ್ವಾಗತಿಸಿ, ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ