ಪಾಣೆಮಂಗಳೂರಿನ ಗುಡ್ಡೆಯಂಗಡಿಯ ಅಂಗಡಿಯೊಂದಕ್ಕೆ ಬೆಂಕಿ ಆಕಸ್ಮಿಕ ಭಾನುವಾರ ಸಂಭವಿಸಿದ್ದು, ಅಗ್ನಿಶಾಮಕ ಕಾರ್ಯಾಚರಣೆ ನಡೆಸಲಾಯಿತು. ಇಲ್ಲಿನ ರೆಫ್ರಿಜರೇಶನ್ ರಿಪೇರಿ ಮಾಡುವ ಅಂಗಡಿಯೊಂದರಲ್ಲಿ ಈ ಅವಘಡ ಸಂಭವಿಸಿದೆ. ಗಮನಿಸಿದ ಸ್ಥಳೀಯರು ಬೆಂಕಿ ನಂದಿಸಲು ಒಟ್ಟು ಸೇರಿದ್ದು, ಕೂಡಲೇ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಲಾಗಿದೆ. ಬಳಿಕ ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರು ಒಟ್ಟು ಸೇರಿ ಬೆಂಕಿ ನಂದಿಸಿದ್ದು, ಹೆಚ್ಚಿನ ಅನಾಹುತ ಉಂಟಾಗದಂತೆ ನೋಡಿಕೊಂಡರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಪಾಣೆಮಂಗಳೂರು ಗುಡ್ಡೆಯಂಗಡಿಯಲ್ಲಿ ಬೆಂಕಿ ಅನಾಹುತ"