ಬಂಟ್ವಾಳ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮಹಿಳಾ ವಿಭಾಗದಿಂದ ಬಂಟ್ವಾಳದಲ್ಲಿ ಮಹಿಳಾ ದಿನಾಚರಣೆ

ಬಂಟ್ವಾಳ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮಹಿಳಾ ವಿಭಾಗದಿಂದ ಬಂಟ್ವಾಳದ ತುಳು ಶಿವಳ್ಳಿ ಸಮುದಾಯ ಭವನದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭಮಹಾಲಕ್ಷ್ಮೀ ಅರ್ಕಮೆ, ಶ್ರೀದೇವಿ ನಾರಾಯಣ ಭಟ್ ಕೈಯೂರು, ರೇಣುಕಾ ಸುಧೀರ್ ಬೆಳ್ತಂಗಡಿ ಮತ್ತು ಮಲ್ಲಿಕಾ ರಾಧಾಕೃಷ್ಣ ತಂತ್ರಿ ಅವರನ್ನು ಸನ್ಮಾನಿಸಲಾಯಿತು.

ಜಾಹೀರಾತು

ಕಾರ್ಯಕ್ರಮದಲ್ಲಿ ಮಾತನಾಡಿದ ಮಂಗಳೂರಿನ ಸ್ವಸ್ತಿಕ್ ಕಾಲೇಜಿನ ಪ್ರಿನ್ಸಿಪಾಲ್ ಡಾ. ಮಾಲಿನಿ ಹೆಬ್ಬಾರ್, ಶಿಕ್ಷಣ,ಸ್ವಾವಲಂಬನೆ,ಸ್ವಾಭಿಮಾನ ಈ ಮೂರನ್ನು ಮಹಿಳೆಯರು ತಮ್ಮ ಬದುಕಿನಲ್ಲಿ ರೂಢಿಸಿಕೊಂಡಾಗ ಸುಸ್ಥಿರ ಸಮಾಜ ನಿರ್ಮಾಣ ಸಾಧ್ಯ ಎಂದರು.

ಬಿ.ಸಿ.ರೋಡ್ ಸೋಮಯಾಜಿ ಆಸ್ಪತ್ರೆಯ ವೈದ್ಯೆ ಡಾ. ಶಶಿಕಲಾ ಸೋಮಯಾಜಿ ಮಾತನಾಡಿ, ಮಹಿಳೆ ಇಲ್ಲದ ಜಗತ್ತು ಊಹಿಸಲಸಾಧ್ಯ ಎಂದರು.

ಜಾಹೀರಾತು

ಅಧ್ಯಕ್ಷತೆಯನ್ನು ಮಹಾಸಭಾದ ರಾಜ್ಯ ಉಪಾಧ್ಯಕ್ಷ, ನ್ಯಾಯವಾದಿ ಮಹೇಶ್ ಕಜೆ ವಹಿಸಿ ಮಾತನಾಡಿ, ಜಗತ್ತಿನಲ್ಲಿ ಸ್ರೀಯನ್ನು ಮಾತೃಸ್ವರೂಪದಲ್ಲಿ ಗೌರವಿಸುವ ದೇಶವಿದ್ದರೆ ಅದು ಭಾರತ ಮಾತ್ರ. ವೈದಿಕ ಪರಂಪರೆ ಅಥವಾ ಋಷಿ ಪರಂಪರೆಯಲ್ಲೇ ಇರಬಹುದು ಸ್ತ್ರೀ ಯಾವತ್ತೂ ಪರಿಪೂರ್ಣತೆಗೆ ಸಾಕ್ಷಿಯಾಗಿ ನಿಲ್ಲುತ್ತಾಳೆ ಎಂದರು.

ವೇದಿಕೆಯಲ್ಲಿ ದ.ಕ.ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯ ಗಿರಿಪ್ರಕಾಶ್ ತಂತ್ರಿ ಪೊಳಲಿ, ಬಂಟ್ವಾಳ ತಾಲೂಕು ಶಿವಳ್ಳಿ ಸಂಗಮದ ಅಧ್ಯಕ್ಷ ರಾಜಾರಾಮ ಭಟ್  ಉಪಸ್ಥಿತರಿದ್ದರು. ಜಿಲ್ಲಾ ಮಹಿಳಾ ವಿಭಾಗದ ಸಂಚಾಲಕಿ ನ್ಯಾಯವಾದಿ ಉಮಾ ಎನ್.  ಸೋಮಯಾಜಿ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಪವಿತ್ರಾ ಮಯ್ಯ ಪ್ರಾರ್ಥಿಸಿದರು. ಪೂರ್ಣಿಮಾ ಪ್ರಭಾಕರ್ ಪೇಜಾವರ ನಿರೂಪಣೆಗೈದ ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಧ್ಯಾಕಿ ವತ್ಸಲಾ ರಾಜ್ಞಿ ವಂದಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ