ಬಂಟ್ವಾಳಪ್ರಜಾಧ್ವನಿ ಯಾತ್ರೆ ಮಾರ್ಚ್ 10ರಿಂದ ಆರಂಭ: ತನ್ನ ಅವಧಿಯಲ್ಲಾದ 5 ಸಾವಿರ ಕೋಟಿ ರೂಗಳ ಕಾಮಗಾರಿ ವಿವರ ಜನರ ಮುಂದಿಡುವೆ – ರಮಾನಾಥ ರೈ

ಬಂಟ್ವಾಳ: ಕಾಂಗ್ರೆಸ್ ಪಕ್ಷದ ವತಿಯಿಂದ ಬಂಟ್ವಾಳ ಕ್ಷೇತ್ರದಾದ್ಯಂತ ಗ್ರಾಮಗಳನ್ನು ತಲುಪುವ ಬಂಟ್ವಾಳಪ್ರಜಾಧ್ವನಿಯಾತ್ರೆ ಮಾರ್ಚ್ 10ರಿಂದ ಆರಂಭಗೊಳ್ಳಲಿದ್ದು, 14 ದಿನಗಳ ಕಾಲ ಕ್ಷೇತ್ರದಾದ್ಯಂತ ಸಂಚರಿಸಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಜಾಹೀರಾತು

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನ್ನ ಐದು ವರ್ಷಗಳ ಶಾಸಕತ್ವದ ಅವಧಿಯಲ್ಲಿ ಸಿದ್ಧರಾಮಯ್ಯ ಸರಕಾರ ಮೂಲಕ ಕ್ಷೇತ್ರದಾದ್ಯಂತ ಕೈಗೊಳ್ಳಲಾದ 5 ಸಾವಿರ ಕೋಟಿ ರೂಗಳ ಪ್ರಗತಿಕಾರ್ಯಗಳನ್ನು ಜನರಿಗೆ ತಿಳಿಸುವ ಕಾರ್ಯವನ್ನು ಯಾತ್ರೆ ಮೂಲಕ ಮಾಡಲಾಗುವುದು.  ಒಂದೇ ದಿನ ಮೂರು ಗ್ರಾಮ ಪಂಚಾಯಿತಿಗಳನ್ನು ಒಳಗೊಂಡು ಯಾತ್ರೆಯನ್ನು ನಡೆಸಲಾಗುವುದು. ಪ್ರತಿ ದಿನ ಸಂಜೆ ಸಭೆ ನಡೆಸಲಾಗುತ್ತದೆ. ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಯಾತ್ರೆ ಪುಂಚಮೆ ಗ್ರಾಮದಲ್ಲಿ  ಆರಂಭಗೊಳ್ಳಲಿದೆ. ಪ್ರಮುಖ ಮುಖಂಡರು ಪ್ರತಿದಿನದ ಯಾತ್ರೆಯಲ್ಲಿ ಭಾಷಣಕಾರರಾಗಿ ಆಗಮಿಸಲಿದ್ದಾರೆ ಎಂದು ಹೇಳಿದರು.

ಇನ್ನೊಬ್ಬರು ಮಾಡಿದ ಕೆಲಸವನ್ನು ನಾನು ಮಾಡಿದ್ದು ಎಂದು ಎಲ್ಲೂ ಹೇಳುವುದಿಲ್ಲ ಎಂದು ಹೇಳಿದ ರಮಾನಾಥ ರೈ, ಬಂಟ್ವಾಳದ ಒಳಚರಂಡಿ ಯೋಜನೆ ಮಂಜೂರಾತಿಯನ್ನು 2017ರ ಅಕ್ಟೋಬರ್ 10ರಂದು ನಾನು ಮಾಡಿಸಿದ್ದೇನೆ. ಇದಕ್ಕೆ ದಾಖಲಾತಿ ಇದೆ. ಆರು ವರ್ಷಗಳಾದರೂ ಕೆಲಸವಾಗಿಲ್ಲ ಎಂದು ಹೇಳಿ ಇಂಥ ಹಲವಾರು ಉದಾಹರಣೆಗಳಿವೆ ಎಂದರು. ಕಳೆದ ಚುನಾವಣೆಯಲ್ಲಿ ಅಪಪ್ರಚಾರದಿಂದ ನಾನು ಸೋತಿದ್ದೆ, ಎಂದು ಹೇಳಿದ ಅವರು ಈಗಲೂ ಅಪಪ್ರಚಾರ ನಡೆಸಲಾಗುತ್ತಿದೆ ಎಂದರು.

ಜಾಹೀರಾತು

ಯಾತ್ರೆ ಕುರಿತು ಮುಖಂಡ ಪಿಯೂಸ್ ಎಲ್. ರೋಡ್ರಿಗಸ್ ಮಾಹಿತಿ ನೀಡಿದರು. ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ, ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಪದ್ಮಪ್ರಸಾದ್ ಜೈನ್, ಸುದರ್ಶನ ಜೈನ್, ಮಧುಸೂಧನ ಶೆಣೈ, ಅಬ್ಬಾಸ್ ಆಲಿ ಬಿ.ಎಂ., ಮಾಯಿಲಪ್ಪ ಸಾಲಿಯಾನ್. ಸುರೇಶ್ ಜೋರ, ಚಂದ್ರಶೇಖರ ಪೂಜಾರಿ, ಚಂದ್ರಶೇಖರ ಭಂಡಾರಿ, ಸುಧಾಕರ ಶೆಣೈ ಖಂಡಿಗ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳಪ್ರಜಾಧ್ವನಿ ಯಾತ್ರೆ ಮಾರ್ಚ್ 10ರಿಂದ ಆರಂಭ: ತನ್ನ ಅವಧಿಯಲ್ಲಾದ 5 ಸಾವಿರ ಕೋಟಿ ರೂಗಳ ಕಾಮಗಾರಿ ವಿವರ ಜನರ ಮುಂದಿಡುವೆ – ರಮಾನಾಥ ರೈ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*