ಬಂಟ್ವಾಳ

ಮಾರ್ಚ್ 12ರಂದು ಬಿ.ಸಿ.ರೋಡಿನ ಲಯನ್ಸ್ ಸಭಾಂಗಣದಲ್ಲಿ ಇಡೀ ದಿನ ಬಂಟ್ವಾಳ ತಾಲೂಕು ದ್ವಿತೀಯ ಗಮಕ ಸಮ್ಮೇಳನ

ಬಂಟ್ವಾಳ: ಕರ್ನಾಟಕ ಗಮಕ ಕಲಾ ಪರಿಷತ್ ಬೆಂಗಳೂರು, ಕರ್ನಾಟಕ ಗಮಕ ಕಲಾ ಪರಿಷತ್ ದ.ಕ. ಜಿಲ್ಲೆ, ಕರ್ನಾಟಕ ಗಮಕ ಕಲಾ ಪರಿಷತ್ ಬಂಟ್ವಾಳ ತಾಲೂಕು ಘಟಕ ಆಶ್ರಯದಲ್ಲಿ ಬಂಟ್ವಾಳ ತಾಲೂಕು ದ್ವಿತೀಯ ಗಮಕ ಸಮ್ಮೇಳನ ಮಾ.12ರಂದು ಬೆಳಿಗ್ಗೆ 9 ರಿಂದ ಸಂಜೆ 5ರವರೆಗೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ ಎಂದು ಗಮಕ ಕಲಾ ಪರಿಷತ್ ಜಿಲ್ಲಾಧ್ಯಕ್ಷ ಮಧೂರು ಮೋಹನ ಕಲ್ಲೂರಾಯ ತಿಳಿಸಿದರು.

ಜಾಹೀರಾತು

ಆಹ್ವಾನ ಪತ್ರಿಕೆಗೆ ಇಲ್ಲಿ ಕ್ಲಿಕ್ ಮಾಡಿರಿ: Gamaka Sammelana (1)

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಇಡೀ ದಿನ ನಡೆಯುವ ಕಾರ್ಯಕ್ರಮಕ್ಕೆ ಗಮಕಾಸಕ್ತರು ಭಾಗವಹಿಸಲು ಕರೆ  ನೀಡಿದರು.

ಜಾಹೀರಾತು

ತಾಲೂಕು ಘಟಕಾಧ್ಯಕ್ಷ ಕೈಯೂರು ನಾರಾಯಣ ಭಟ್ ಮಾಹಿತಿ ನೀಡಿ ಡಾ. ವಾರಿಜಾ ನಿರ್ಬೈಲು ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ಸಮ್ಮೇಳನದ ಉದ್ಘಾಟನಾ ಸಮಾರಂಭ ಬೆಳಗ್ಗೆ 10ರಂದು ನಡೆಯಲಿದ್ದು ಕರ್ನಾಟಕ ಗಮಕ ಕಲಾ ಪರಿಷತ್ ಅಧ್ಯಕ್ಷೆ ಗಂಗಮ್ಮ ಕೇಶವಮೂರ್ತಿ ಅಧ್ಯಕ್ಷತೆ ವಹಿಸುವರು ಎಂದರು. ಬಳಿಕ ವಿವಿಧ ಗೋಷ್ಠಿಗಳು, ಗಮಕ ವಾಚನ, ಯಕ್ಷಗಾನ ತಾಳಮದ್ದಳೆ ನಡೆಯಲಿದ್ದು, ಸಮಾರೋಪದಲ್ಲಿ ಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಸಮಾರೋಪ ಭಾಷಣ ಮಾಡುವರು ಎಂದರು. ಸುದ್ದಿಗೋಷ್ಟಿಯಲ್ಲಿ ಪ್ರಧಾನ ಸಂಚಾಲಕ ಕೃಷ್ಣ ಶರ್ಮ ಅನಾರು, ಸಂಚಾಲಕ ರಾಜಮಣಿ ರಾಮಕುಂಜ, ಪ್ರಧಾನ ಕಾರ್ಯದರ್ಶಿ ರವೀಂದ್ರ ಕುಕ್ಕಾಜೆ, ಪ್ರಮುಖರಾದ ಕೋಕಳ ರಾಮಕೃಷ್ಣ ನಾಯಕ್ ಉಪಸ್ಥಿತರಿದ್ದರು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ